ಕೆ.ಎನ್ ರಾಜಣ್ಣ ಮತ್ತು ಚಲುವರಾಯಸ್ವಾಮಿ 
ರಾಜ್ಯ

ನಬಾರ್ಡ್ ಪುನರ್ಧನ ಕಡಿತದ ಪರಿಣಾಮ ರೈತರಿಗೆ ಭಾರಿ ತೊಂದರೆ: ಸಚಿವ ಕೆ.ಎನ್ ರಾಜಣ್ಣ

ಈ ವರ್ಷ 9,200 ಕೋಟಿ ರೂ. ಧನ ಸಹಾಯ ಕೇಳಿದ್ದೇವು, ಕಳೆದ ವರ್ಷಕ್ಕಿಂತ ಹೆಚ್ಚು ಹಣ ಸಿಗುವ ನಿರೀಕ್ಷೆಯಲ್ಲಿದ್ದೆವು. ಕರ್ನಾಟಕಕ್ಕೆ 2,340 ಕೋಟಿ ದೊರೆತಿದ್ದು, ಕಳೆದ ವರ್ಷದ 5,600 ಕೋಟಿಗಿಂತ ಶೇ.58 ರಷ್ಟು ಕಡಿಮೆಯಾಗಿದೆ.

ಬೆಂಗಳೂರು: ಕೃಷಿ ಸಾಲದ ಪುನರ್ಧನ ಮಿತಿಯನ್ನು ನಬಾರ್ಡ್‌ ಹಠಾತ್‌ ಇಳಿಕೆ ಮಾಡಿದೆ. ನಬಾರ್ಡ್ ಕೇಂದ್ರ ಸರ್ಕಾರದ ಅಧೀನದಲ್ಲೇ ಬರುವುದರಿಂದ ಕೇಂದ್ರ ಸರ್ಕಾರವೇ ದ್ವೇಷದ ಕಾರಣಕ್ಕೆ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜಣ್ಣ, ಈ ವರ್ಷ 9,200 ಕೋಟಿ ರೂ. ಧನ ಸಹಾಯ ಕೇಳಿದ್ದೇವು, ಕಳೆದ ವರ್ಷಕ್ಕಿಂತ ಹೆಚ್ಚು ಹಣ ಸಿಗುವ ನಿರೀಕ್ಷೆಯಲ್ಲಿದ್ದೆವು. ಕರ್ನಾಟಕಕ್ಕೆ 2,340 ಕೋಟಿ ದೊರೆತಿದ್ದು, ಕಳೆದ ವರ್ಷದ 5,600 ಕೋಟಿಗಿಂತ ಶೇ.58 ರಷ್ಟು ಕಡಿಮೆಯಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ಇದರಿಂದ ರೈತರಿಗೆ ಒದಗಿಸಲಾದ ಬಡ್ಡಿರಹಿತ ಸಾಲದ ಮೇಲೆ ಪರಿಣಾಮ ಬೀರುತ್ತದೆ, ಅವರು ಖಾಸಗಿ ಲೇವಾದೇವಿದಾರರ ಮೊರೆ ಹೋಗಬೇಕಾಗುತ್ತದೆ ಎಂದು ಹೇಳಿದ್ದಾರೆ. ನಬಾರ್ಡ್ ರಾಜ್ಯಕ್ಕೆ ಶೇ.4.5 ರ ಬಡ್ಡಿದರದಲ್ಲಿ ಸಬ್ಸಿಡಿ ದರದಲ್ಲಿ ಹಣವನ್ನು ನೀಡುತ್ತಿದೆ. ಆ ನಿಧಿಗಳೊಂದಿಗೆ ಅಪೆಕ್ಸ್ ಬ್ಯಾಂಕ್, ಜಿಲ್ಲಾ ಬ್ಯಾಂಕ್‌ಗಳು ಮತ್ತು ಪ್ರಾಥಮಿಕ ಕೃಷಿ ಸಾಲ ಸಂಘಗಳು (ಪಿಎಸಿಎಸ್) 35 ಲಕ್ಷ ರೈತರಿಗೆ ಬಡ್ಡಿ ರಹಿತ ಸಾಲ ನೀಡುತ್ತಿವೆ ಎಂದು ಅವರು ಹೇಳಿದರು. ಅದರಲ್ಲಿ 1200 ಕೋಟಿ ಬಡ್ಡಿ ಸಹಾಯಧನವನ್ನು ರಾಜ್ಯ ಸರಕಾರ ರೈತರ ಪರವಾಗಿ ನೀಡಿದೆ.

ರಾಜಣ್ಣ ಮತ್ತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು 9,200 ಕೋಟಿ ಅನುದಾನಕ್ಕಾಗಿ ರಾಜ್ಯ ಸರ್ಕಾರದ ಮನವಿಯನ್ನು ಪರಿಗಣಿಸಲು ನಬಾರ್ಡ್ಗೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು. ಕೇಂದ್ರಕ್ಕೆ ಪತ್ರ ಬರೆದಿದ್ದು, ನವೆಂಬರ್ 26 ರ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ರಾಜ್ಯದ ಬೇಡಿಕೆಯನ್ನು ಪರಿಗಣಿಸುವಂತೆ ಮನವಿ ಮಾಡುವುದಾಗಿ ರಾಜಣ್ಣ ಹೇಳಿದರು. ನಿಧಿಯಲ್ಲಿ ತೀವ್ರ ಕಡಿತಕ್ಕೆ ಅವರು ಯಾವುದೇ ಕಾರಣವನ್ನು ನೀಡಿಲ್ಲ. ನಬಾರ್ಡ್ ಅಧಿಕಾರಿಗಳು ಆರ್‌ಬಿಐ ತಮ್ಮ ಸಾಮಾನ್ಯ ಸಾಲವನ್ನು ಕಡಿಮೆ ಮಾಡಿದೆ, ಆದ್ದರಿಂದ ಅವರು ಅದನ್ನು (ಕರ್ನಾಟಕಕ್ಕೆ ಧನಸಹಾಯ) ಕಡಿಮೆ ಮಾಡಿದ್ದಾರೆ ಎಂದು ನಮಗೆ ತಿಳಿಸಿದರು, ”ರಾಜಣ್ಣ ಹೇಳಿದರು. ಕರ್ನಾಟಕದ ಕೇಂದ್ರ ಸಚಿವರು ಮತ್ತು ಸಂಸದರು ಕೇಂದ್ರದ ಗಮನಕ್ಕೆ ತರಬೇಕು ಎಂದು ಚಲುವರಾಯಸ್ವಾಮಿ ಹೇಳಿದರು. ನಬಾರ್ಡ್ ನಿಧಿಯಲ್ಲಿನ ಕಡಿತವು ಆಹಾರ ಉತ್ಪಾದನೆಯ ಮೇಲೆ ಪರಿಣಾಮ ಬೀರುತ್ತದೆ . ರಾಜ್ಯ ಸರ್ಕಾರ 3-5 ಲಕ್ಷ ಬಡ್ಡಿ ರಹಿತ ಸಾಲ ನೀಡುತ್ತಿದ್ದು, 10-15 ಲಕ್ಷ ರೂ.ವರೆಗಿನ ಸಾಲವನ್ನು ಶೇ 3ರ ಬಡ್ಡಿ ದರದಲ್ಲಿ ನೀಡುತ್ತಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT