ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್  
ರಾಜ್ಯ

ರಸ್ತೆ ಗುಂಡಿಗಳನ್ನು ಮುಚ್ಚಿ ಡಾಂಬರು ಹಾಕಿ: ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯಸ್ಥ ತುಷಾರ್ ಗಿರಿನಾಥ್ ಆದೇಶ

ಬೊಮ್ಮನಹಳ್ಳಿ ಸೇರಿದಂತೆ ಐಟಿ ಕಾರಿಡಾರ್‌ನ ರಸ್ತೆಗಳ ದಯನೀಯ ಸ್ಥಿತಿ ಮತ್ತು ಜಲಾವೃತ ಸ್ಥಿತಿಗತಿಯನ್ನು ಎತ್ತಿ ತೋರಿಸುತ್ತದೆ ಎಂದು ಬಯೋಕಾನ್ ಸಂಸ್ಥಾಪಕ-ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಆಯುಕ್ತರು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಬೆಂಗಳೂರು: ಬೊಮ್ಮನಹಳ್ಳಿ ವಲಯದ ಅಪೂರ್ಣ ಕಾಮಗಾರಿಗಳ ಕುರಿತು ವರದಿ ಸಿದ್ಧಪಡಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೊಮ್ಮನಹಳ್ಳಿ ಸೇರಿದಂತೆ ಐಟಿ ಕಾರಿಡಾರ್‌ನ ರಸ್ತೆಗಳ ದಯನೀಯ ಸ್ಥಿತಿ ಮತ್ತು ಜಲಾವೃತ ಸ್ಥಿತಿಗತಿಯನ್ನು ಎತ್ತಿ ತೋರಿಸುತ್ತದೆ ಎಂದು ಬಯೋಕಾನ್ ಸಂಸ್ಥಾಪಕ-ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಆಯುಕ್ತರು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಬೊಮ್ಮನಹಳ್ಳಿಯಲ್ಲಿ ಮಂಗಳವಾರ ನಡೆದ ‘ವಲಯದತ್ತ ಆಯುಕ್ತರ ನಡೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು. ಎಲ್ಲ ಅಪೂರ್ಣ ಕಾಮಗಾರಿಗಳನ್ನು ಪಟ್ಟಿ ಮಾಡಿ ವರದಿ ತಯಾರಿಸಿ ಎಂದು ಆಯುಕ್ತರು ಅಧಿಕಾರಿಗಳಿಗೆ ತಿಳಿಸಿದರು.

ವಲಯದ ಎಲ್ಲ ಪ್ರಮುಖ ರಸ್ತೆಗಳನ್ನು ಪರಿಶೀಲಿಸಿ, ಹಾನಿಗೊಳಗಾದ ರಸ್ತೆಗಳಿಗೆ ಡಾಂಬರೀಕರಣ, ಗುಂಡಿಗಳನ್ನು ತಕ್ಷಣವೇ ಮುಚ್ಚುವಂತೆ ಹೇಳಿದರು.

ನಗರದ ಸುತ್ತಮುತ್ತ ಇರುವ ಕೆರೆಗಳಿಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಕಸ ವಿಲೇವಾರಿ ಬಗ್ಗೆ ನಿಗಾ ವಹಿಸಲು ಮಾರ್ಷಲ್‌ಗಳನ್ನು ನಿಯೋಜಿಸುವಂತೆ ವಲಯ ಅಧಿಕಾರಿಗಳಿಗೆ ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT