ವಿಕ್ಟೋರಿಯಾ ಆಸ್ಪತ್ರೆ  
ರಾಜ್ಯ

ರಾಜ್ಯದ ಸರ್ಕಾರಿ ಆಸ್ಪತ್ರೆಗಳ OPD, IPD ಶುಲ್ಕ ಹೆಚ್ಚಳ!

ಆಸ್ಪತ್ರೆಯ ನಿರ್ವಾಹಕರು ತಮ್ಮ ದರ ಪಟ್ಟಿಗಳನ್ನು ನವೀಕರಿಸಲು ಮತ್ತು ಬದಲಾವಣೆಗಳನ್ನು ತಕ್ಷಣವೇ ಇ-ಹಾಸ್ಪಿಟಲ್ ಸಾಫ್ಟ್‌ವೇರ್ ವ್ಯವಸ್ಥೆಯಲ್ಲಿ ಪ್ರತಿಬಿಂಬಿಸುವಂತೆ ಸೂಚನೆ ನೀಡಲಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಬೆಲೆ ಏರಿಕೆ ಸರಣಿ ಮುಂದುವರೆದಿದ್ದು, ಇದೀಗ ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಹೊರರೋಗಿ (ಒಪಿಡಿ) ಮತ್ತು ಒಳರೋಗಿ (ಐಪಿಡಿ) ಸೇವೆಗಳ ಶುಲ್ಕವನ್ನು ಹೆಚ್ಚಿಸಲು ರಾಜ್ಯ ಆರೋಗ್ಯ ಇಲಾಖೆ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಕರ್ನಾಟಕದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಾದ ವಿಕ್ಟೋರಿಯಾ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆ, ಮಿಂಟೊ ಆಸ್ಪತ್ರೆ ಸೇರಿದಂತೆ ಪ್ರಮುಖ ಸರ್ಕಾರಿ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮತ್ತು ರಾಜ್ಯ ಟ್ರಾಮಾ ಕೇರ್ ಕೇಂದ್ರಗಳಲ್ಲಿ ಹೊರರೋಗಿ (ಒಪಿಡಿ) ಮತ್ತು ಒಳರೋಗಿ (ಐಪಿಡಿ) ಸೇವೆಗಳ ಶುಲ್ಕವನ್ನು ರಾಜ್ಯ ಆರೋಗ್ಯ ಇಲಾಖೆ ಹೆಚ್ಚಿಸಿದೆ.

ಈ ಶುಲ್ಕಗಳಲ್ಲಿ ಹಲವು ಸೇವೆಗಳ ಶುಲ್ಕಗಳನ್ನು ದ್ವಿಗುಣಗೊಳಿಸಲಾಗಿದ್ದು, ವೈದ್ಯಕೀಯ ಸೇವಾ ಶುಲ್ಕದಲ್ಲಿ ಗಣನೀಯ ಪರಿಷ್ಕರಣೆ ಮಾಡಲಾಗಿದೆ ಮತ್ತು ಇಲಾಖೆಯ ನಿರ್ದೇಶನದಂತೆ ತಕ್ಷಣವೇ ಜಾರಿಗೊಳಿಸಲಾಗುವುದು. ಮಂಗಳವಾರ ಇಲಾಖಾ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ಹೊಸ ದರಗಳನ್ನು ಅಂತಿಮಗೊಳಿಸಲಾಯಿತು ಎಂದು ತಿಳಿದುಬಂದಿದೆ.

ಒಪಿಡಿ ನೋಂದಣಿ ಶುಲ್ಕ 10 ರೂ.ನಿಂದ 20 ರೂ.ಗೆ ಏರಿಕೆಯಾಗಿದ್ದು, ಅದೇ ರೀತಿ ಒಳರೋಗಿಗಳ ಸೇವೆಯಲ್ಲಿ ಗಣನೀಯ ಏರಿಕೆ ಕಾಣಲಿದ್ದು, ಪ್ರವೇಶ ಶುಲ್ಕ 25 ರಿಂದ 50 ರೂ.ಗೆ ಏರಿಕೆಯಾಗಿದೆ. ಈ ಹಿಂದೆ 25 ರೂ.ಗಳಿದ್ದ ವಾರ್ಡ್ ಶುಲ್ಕವನ್ನು 50 ರೂ.ಗೆ ದ್ವಿಗುಣಗೊಳಿಸಲಾಗಿದೆ.

ಡಯಾಗ್ನೋಸ್ಟಿಕ್ ಸೇವೆಗಳ ವೆಚ್ಚವು ಹೊಸ ದರ ರಚನೆಯಿಂದ ಪ್ರಭಾವಿತವಾಗಿದ್ದು, ಈ ಹಿಂದೆ ರೂ 70 ರಷ್ಟಿದ್ದ ರಕ್ತ ಪರೀಕ್ಷೆಯ ಶುಲ್ಕವು ರೂ 120 ಕ್ಕೆ ಏರಿದೆ. ಒಟ್ಟಾರೆಯಾಗಿ, ವಿವಿಧ ಸೇವೆಗಳಾದ್ಯಂತ 10% ರಿಂದ 30% ವರೆಗೆ ಹೆಚ್ಚಳವು ಈ ಆರೋಗ್ಯ ಸೌಲಭ್ಯಗಳಲ್ಲಿ ಹೆಚ್ಚುತ್ತಿರುವ ಕಾರ್ಯಾಚರಣೆಯ ವೆಚ್ಚವನ್ನು ಪ್ರತಿಬಿಂಬಿಸುತ್ತದೆ.

ಈ ಶುಲ್ಕ ಬದಲಾವಣೆಗಳು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ, ವಿಶೇಷವಾಗಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (BMCRI) ಅಡಿಯಲ್ಲಿ ಶುಲ್ಕಗಳನ್ನು ಪ್ರಮಾಣೀಕರಿಸುವ ವಿಶಾಲ ಪ್ರಯತ್ನದ ಭಾಗವಾಗಿದೆ ಎಂದು ಆರೋಗ್ಯ ಅಧಿಕಾರಿಯೊಬ್ಬರು TNIE ಗೆ ತಿಳಿಸಿದ್ದಾರೆ.

ಆಸ್ಪತ್ರೆಯ ನಿರ್ವಾಹಕರು ತಮ್ಮ ದರ ಪಟ್ಟಿಗಳನ್ನು ನವೀಕರಿಸಲು ಮತ್ತು ಬದಲಾವಣೆಗಳನ್ನು ತಕ್ಷಣವೇ ಇ-ಹಾಸ್ಪಿಟಲ್ ಸಾಫ್ಟ್‌ವೇರ್ ವ್ಯವಸ್ಥೆಯಲ್ಲಿ ಪ್ರತಿಬಿಂಬಿಸುವಂತೆ ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆಯು ಆರೈಕೆಯ ಗುಣಮಟ್ಟವನ್ನು ಕಾಯ್ದುಕೊಳ್ಳಲು ಅಗತ್ಯವಿರುವ ಹೆಚ್ಚಳವನ್ನು ಸಮರ್ಥಿಸಿದ್ದರೂ, ಪರಿಷ್ಕರಣೆಗಳು ಅನೇಕ ರೋಗಿಗಳಿಗೆ ಹೊರೆಯಾಗುತ್ತವೆ ಎಂದು ನಿರೀಕ್ಷಿಸಲಾಗಿದೆ. ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯಿಂದ ಬಂದವರು ಕೈಗೆಟುಕುವ ಚಿಕಿತ್ಸೆಗಾಗಿ ಈ ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ