ಹಿರಿಯ ಪತ್ರಕರ್ತ ವಿ.ಟಿ.ರಾಜಶೇಖರ್ 
ರಾಜ್ಯ

ಹಿರಿಯ ಪತ್ರಕರ್ತ ವಿ.ಟಿ ರಾಜಶೇಖರ್ ನಿಧನ, ಸಿಎಂ ಸಿದ್ದರಾಮಯ್ಯ ಸಂತಾಪ

ಮಂಗಳೂರಿನ ಶಿವಭಾಗ್ ನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದ ರಾಜಶೇಖರ್ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ರಾಜಶೇಖರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮಂಗಳೂರು: ಹಿರಿಯ ಪತ್ರಕರ್ತ, ಬರಹಗಾರ, ಚಿಂತಕ ವಿ.ಟಿ.ರಾಜಶೇಖರ್ ಬುಧವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.

ಮಂಗಳೂರಿನ ಶಿವಭಾಗ್ ನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದ ರಾಜಶೇಖರ್ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ರಾಜಶೇಖರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಖ್ಯಾತ ಪತ್ರಕರ್ತ, ಪ್ರಖರ ಚಿಂತಕ ಮತ್ತು ಹೋರಾಟಗಾರ ವಿ.ಟಿ.ರಾಜಶೇಖರ್ (93) ಅವರ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಪತ್ರಿಕಾ ವೃತ್ತಿಯನ್ನು ಒಬ್ಬ ಹೋರಾಟಗಾರನಾಗಿಯೇ ಮುನ್ನಡೆಸಿದ್ದ ರಾಜಶೇಖರ್, ಜಾತಿ ವ್ಯವಸ್ಥೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಸದಾ ಸಿಡಿಯುತ್ತಿದ್ದವರು ಎಂದು ಸ್ಮರಿಸಿದ್ದಾರೆ.

ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ್ದ ನಂತರ ಅಲ್ಲಿಂದ ಹೊರಬಂದು 1981ರಲ್ಲಿ ದಲಿತ್ ವಾಯ್ಸ್ ಪತ್ರಿಕೆಯನ್ನು ಪ್ರಾರಂಭಿಸಿದ್ದರು. ಆ ದಿನಗಳಿಂದಲೇ ಪರಿಚಿತರಾಗಿದ್ದ ರಾಜಶೇಖರ್ ಅವರು ಒಬ್ಬ ಹಿರಿಯ ಹಿತೈಷಿಯಾಗಿ ನನಗೆ ಮಾರ್ಗದರ್ಶನ ನೀಡುತ್ತಿದ್ದರು ಎಂದು ಮುಖ್ಯಮಂತ್ರಿ ಹೇಳಿಕೊಂಡಿದ್ದಾರೆ.

ರಾಜಶೇಖರ್ ಅವರ ಸಾವು ಸಮಾಜಕ್ಕೆ ದೊಡ್ಡ ನಷ್ಟ ಮಾತ್ರವಲ್ಲ, ಅವರಂತಹ ಜನಪರ ಚಿಂತಕರ ನಿಧನದಿಂದ ಸೃಷ್ಟಿಯಾಗಿರುವ ನಿರ್ವಾತವನ್ನು ತುಂಬುವುದು ಕೂಡಾ ಕಷ್ಟ. ತಂದೆಯನ್ನು ಕಳೆದುಕೊಂಡ ಅಮ್ನೆಷ್ಟಿ ಇಂಟರ್ ನ್ಯಾಷನಲ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ, ಮಗ ಸಲೀಲ್ ಶೆಟ್ಟಿ, ಕುಟುಂಬ ವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಸಿಎಂ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT