ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನಕಲಿ ದಾಖಲೆ ನೀಡಿ TDS ಪಡೆಯುತ್ತಿದ್ದ ಆರೋಪಿ ಬಂಧಿಸಿದ ED ಅಧಿಕಾರಿಗಳು

ಆರೋಪಿ ದಿಲೀಪ್‌ ಹತ್ತಾರು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನಕಲಿ ದಾಖಲೆಗಳನ್ನು ಸೃಷ್ಟಿಸಿ, ಬ್ಯಾಂಕ್‌ಗಳಲ್ಲಿ ಸಾಲ ಪಡೆದು ವಂಚನೆ, ಗುರುತಿನ ಚೀಟಿ ದುರುಪಯೋಗ ಪಡಿಸಿಕೊಂಡು ಟಿಡಿಎಸ್‌ ಹಣ ವಾಪಸ್‌ ಪಡೆಯುತ್ತಿದ್ದ.

ಬೆಂಗಳೂರು: ನಕಲಿ ದಾಖಲೆಗಳನ್ನು ನೀಡಿ ಟಿಡಿಎಸ್‌ ಮೊತ್ತವನ್ನು ವಾಪಸ್‌ ಪಡೆದು ಅಕ್ರಮ ಹಣಕಾಸು ವಹಿವಾಟು ನಡೆಸುತ್ತಿದ್ದ ಆರೋಪದ ಮೇಲೆ ಬೆಂಗಳೂರಿನ ದಿಲೀಪ್‌ ಎಂಬಾತನನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಏಳು ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಲಾಗಿದೆ.

ಬ್ಯಾಂಕ್ ಸಾಲದ ವಂಚನೆ, ಗುರುತಿನ ಕಳ್ಳತನ ಮತ್ತು ದುರುಪಯೋಗ ಮತ್ತು ಆದಾಯ ತೆರಿಗೆ ಮರುಪಾವತಿ ಹಗರಣಗಳಂತಹ ಅನೇಕ ಅಪರಾಧಗಳಲ್ಲಿ ಆರೋಪಿ ತೊಡಗಿದ್ದ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ. ದಿಲೀಪ್ ಅನೇಕ ಪ್ಯಾನ್‌ ಕಾರ್ಡ್ ಪಡೆದಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ಆರೋಪಿ ದಿಲೀಪ್‌ ಹತ್ತಾರು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನಕಲಿ ದಾಖಲೆಗಳನ್ನು ಸೃಷ್ಟಿಸಿ, ಬ್ಯಾಂಕ್‌ಗಳಲ್ಲಿ ಸಾಲ ಪಡೆದು ವಂಚನೆ, ಗುರುತಿನ ಚೀಟಿ ದುರುಪಯೋಗ ಪಡಿಸಿಕೊಂಡು ಟಿಡಿಎಸ್‌ ಹಣ ವಾಪಸ್‌ ಪಡೆಯುತ್ತಿದ್ದ. ಅದಕ್ಕಾಗಿ ತನ್ನ ಹೆಸರನ್ನು ಬಿ.ಆರ್‌. ದಿಲೀಪ್‌ ಅಲಿಯಾಸ್‌ ದಿಲೀಪ್‌ ರಾಜೇಗೌಡ ಅಲಿಯಾಸ್‌ ದಿಲೀಪ್‌ ಬಾಲಗಂಚಿ ರಾಜೇಗೌಡ ಎಂಬ ಹೆಸರಿನಲ್ಲಿ ನಕಲಿ ಪಾನ್‌ ಮತ್ತು ಆಧಾರ್‌ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾನೆ. ಈ ಮೂರು ಪಾನ್‌ ಕಾರ್ಡ್‌ಗಳನ್ನು ಪಡೆದುಕೊಂಡು ಹಲವಾರು ಹಣಕಾಸಿನ ವ್ಯವಹಾರ ಮಾಡಿದ್ದಾನೆ. ಪ್ರಮುಖವಾಗಿ ವಾಹನ ಸಾಲ ಪಡೆಯುವುದು. ಕೆಲವರ ದಾಖಲೆಗಳನ್ನು ಅಕ್ರಮವಾಗಿ ಪಡೆದುಕೊಂಡು ಕೆಲ ಬ್ಯಾಂಕ್‌ಗಳಲ್ಲಿ ಖಾತೆಗಳನ್ನು ತೆರೆದಿದ್ದಾನೆ ಎಂಬುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಇಡಿ ತಿಳಿಸಿದೆ.

ಆರೋಪಿ ಪ್ರಮುಖವಾಗಿ ಟಿಡಿಎಸ್‌ ದಾಖಲೆಗಳನ್ನು ತಿದ್ದುಪಡಿ ಮಾಡಿ ರಿಫ‌ಂಡ್‌ ಪಡೆಯುತ್ತಿದ್ದ. ಕರ್ನಾಟಕ ಸರ್ಕಾರದ ಕಾವೇರಿ ಮತ್ತು ಹರಿಯಾಣ ಸರ್ಕಾರದ ಜಮಬಂದಿ ಪೋರ್ಟಲ್‌ಗ‌ಳನ್ನು ಶೋಧಿಸಿ, ಭಾರತದಲ್ಲಿ ಆಸ್ತಿ ಮಾರಿದ್ದ ಅನಿವಾಸಿ ಭಾರತೀಯ ತೆರಿಗೆದಾರರ ಮಾಹಿತಿಯನ್ನು ಸಂಗ್ರಹಿಸಿ, ಅವರ ಆಸ್ತಿ ದಾಖಲೆಗಳಲ್ಲಿನ ಆಧಾರ್‌ ಮತ್ತು ಪಾನ್‌ ಮಾಹಿತಿ ಪಡೆಯುತ್ತಿದ್ದ. ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಕೆವೈಸಿ ಸಡಿಲಿಕೆ ಇರುವ ಬ್ಯಾಂಕ್‌ಗಳನ್ನು ಆಯ್ಕೆ ಮಾಡಿಕೊಂಡು ಖಾತೆಗಳನ್ನು ತೆರೆಯುತ್ತಿದ್ದ. ಆ ಖಾತೆಗಳನ್ನು ಉಲ್ಲೇಖಿಸಿ ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್‌ ಪೋರ್ಟಲ್‌ ಪ್ರವೇಶಿಸಿ, ಐಟಿಆರ್‌ಗಳಲ್ಲಿ ತೆರಿಗೆ ಭಾದ್ಯತೆಗಳನ್ನು ಪರಿಶೀಲಿಸಿ, ರಿಫ‌ಂಡ್‌ ಮೊತ್ತವನ್ನು ಹೆಚ್ಚಿಸಿಕೊಳ್ಳುತ್ತಿದ್ದ. ಈ ಹಣವನ್ನು ನಕಲಿ ಖಾತೆಗಳಿಗೆ ವರ್ಗಾವಣೆ ಮಾಡಿಕೊಳ್ಳುತ್ತಿದ್ದ. ಹೀಗೆ ವಂಚಿಸಿದ ಹಣದಲ್ಲಿ ಸುಮಾರು 10 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, ನಗದು ಹಾಗೂ ಕ್ರಿಪ್ಟೋಕರೆನ್ಸಿಗೂ ಹಣ ಹೂಡಿಕೆ ಮಾಡಿದ್ದಾನೆ ಎಂಬುದು ಗೊತ್ತಾಗಿದೆ. ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ 7 ದಿನಗಳ ಕಾಲ ವಶಕ್ಕೆ ಪಡೆಯಲಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT