ಡಿಸಿಎಂ ಡಿ.ಕೆ ಶಿವಕುಮಾರ್ online desk
ರಾಜ್ಯ

ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನ: ಉಪಚುನಾವಣೆ ಸೋಲು-ಗೆಲುವು ದೇವರ ಫಲಾಫಲ- ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಮೂರು ಪಕ್ಷಗಳು ತಲಾ ಒಂದೊಂದು ಸ್ಥಾನ ಗೆಲ್ಲುತ್ತವೆ ಎನ್ನುವ ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು ಕರ್ನಾಟಕ ವಿಧಾನಸಭೆ ಹಾಗೂ ಹರಿಯಾಣದ ಚುನಾವಣೆ ಬಗ್ಗೆ ಸಮೀಕ್ಷೆಗಳು ಏನು ಹೇಳಿದ್ದವು?

ಉಡುಪಿ (ಕೊಲ್ಲೂರು): ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನ. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ನಮ್ಮ ಪ್ರಯತ್ನವನ್ನು ಮಾಡಿದ್ದೇವೆ. ಆದರೆ, ಫಲಾಫಲ ಭಗವಂತನದ್ದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಉಡುಪಿಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ರಾಜ್ಯದ ಉಪಚುನಾವಣೆ ಫಲಿತಾಂಶ ಏನಾಗಲಿದೆ ಎಂದು ಕೇಳಿದಾಗ, ಎಲ್ಲಾ ಕಡೆಯೂ ದೇವರು ನಮಗೆ ಒಳ್ಳೆಯದು ಮಾಡುತ್ತಾನೆ ಎನ್ನುವ ಭರವಸೆಯನ್ನು ಇಟ್ಟಿದ್ದೇವೆ" ಎಂದು ಹೇಳಿದರು. ರಾಜ್ಯದಲ್ಲಿ ಮೂರು ಪಕ್ಷಗಳು ತಲಾ ಒಂದೊಂದು ಸ್ಥಾನ ಗೆಲ್ಲುತ್ತವೆ ಎನ್ನುವ ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು ಕರ್ನಾಟಕ ವಿಧಾನಸಭೆ ಹಾಗೂ ಹರಿಯಾಣದ ಚುನಾವಣೆ ಬಗ್ಗೆ ಸಮೀಕ್ಷೆಗಳು ಏನು ಹೇಳಿದ್ದವು? ನನಗೆ ಯಾವುದೇ ಸಮೀಕ್ಷೆಗಳ ಮೇಲೆ ನಂಬಿಕೆಯಿಲ್ಲ. ಸಮೀಕ್ಷೆಗಳನ್ನು ಕಟ್ಟಿಕೊಂಡು ರಾಜಕೀಯ ಮಾಡಲು ಆಗುವುದಿಲ್ಲ. ಯಾರು ಜನರ ಹೃದಯ ಹಾಗೂ ವಿಶ್ವಾಸ ಪಡೆದಿರುತ್ತಾರೋ ಅವರಿಗೆ ಜನ ಗೌಪ್ಯ ಮತದಾನದ ಮೂಲಕ ಬೆಂಬಲ ನೀಡುತ್ತಾರೆ" ಎಂದರು.

ಕೊಲ್ಲೂರು ದೇವಸ್ಥಾನ ಆಡಳಿತ ಮಂಡಳಿಯಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಮಣೆ ಹಾಕದೆ ವಲಸಿಗರಿಗೆ ಮಣೆ ಹಾಕಲಾಗಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ "ಚುನಾವಣೆ ವೇಳೆ ಇಲ್ಲಿಗೆ ಬಂದಾಗ ಈ ಬಗ್ಗೆ ಕೆಲವರಿಗೆ ಮಾತು ಕೊಟ್ಟಿದ್ದೆವು. ಸಲ್ಪ ದಿನ ಅವರು ಆಡಳಿತ ಮಾಡಲಿ ಬಿಡಿ" ಎಂದು ಹೇಳಿದರು.

ಬಿಪಿಎಲ್ ಕಾರ್ಡ್; ಬಡವರಿಗೆ ಅನ್ಯಾಯವಾಗಲು ಬಿಡುವುದಿಲ್ಲ

ಬಿಪಿಎಲ್ ಕಾರ್ಡ್ ಗೊಂದಲದ ಬಗ್ಗೆ ಕೇಳಿದಾಗ, "ಯಾವುದೇ ಕಾರಣಕ್ಕೂ ಬಿಪಿಎಲ್ ಅರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಅರ್ಹರ ಕಾರ್ಡ್ ಗಳು ರದ್ದಾಗಿದ್ದರೆ ಈ ಬಗ್ಗೆ ಪಟ್ಟಿ ಕೊಡಬೇಕು ಎಂದು ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ. ವಂಚಿತರಿಗೆ ಮರು ಅರ್ಜಿ ಹಾಕಲು ಅವಕಾಶ ಕಲ್ಪಿಸಿ ಕೊಡಬೇಕು ಎಂದು ಸೂಚನೆ ನೀಡಿದ್ದೇವೆ. ರಾಜ್ಯ, ತಾಲ್ಲೂಕು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಗಳು ಇದರ ಬಗ್ಗೆ ಪರಿಶೀಲನೆ ಮಾಡಲಿವೆ. ಒಬ್ಬನೇ ಒಬ್ಬ ಬಡವನಿಗೂ ತೊಂದರೆ ಆಗಲು ಬಿಡುವುದಿಲ್ಲ ಎಂದು ಸರ್ಕಾರದ ಪ್ರತಿನಿಧಿಯಾಗಿ, ಪಕ್ಷದ ಅಧ್ಯಕ್ಷನಾಗಿ ನಾನು ಭರವಸೆ ನೀಡುತ್ತೇನೆ. ಯಾರೂ ಭಯ ಪಡುವ ಅಗತ್ಯವಿಲ್ಲ. ವಿರೋಧ ಪಕ್ಷಗಳು ಮಾತನಾಡಬೇಕು ಎಂದು ಸುಮ್ಮನೆ ಮಾತನಾಡುತ್ತಿವೆ" ಎಂದರು. ರಾಜ್ಯದಲ್ಲಿ ನಕ್ಸಲ್ ಎನ್ ಕೌಂಟರ್ ನಡೆದಿದೆ. ಮಿಕ್ಕ ನಕ್ಸಲರಿಗೆ ಶರಣಾಗತಿಯಾಗಲು ಸೂಚನೆ ನೀಡಲಾಗಿದೆಯೇ ಎಂದು ಕೇಳಿದಾಗ, "ಪೊಲೀಸ್ ಇಲಾಖೆ ಹಾಗೂ ಗೃಹ ಸಚಿವರಿಗೆ ಸಂಬಂಧಪಟ್ಟ ವಿಚಾರವಾಗಿರುವ ಕಾರಣ ಅವರು ಇದರ ಬಗ್ಗೆ ಕೆಲಸ ಮಾಡುತ್ತಾರೆ. ನಾನು ನನಗೆ ಸಂಬಂಧ ಪಟ್ಟ ವಿಚಾರದಲ್ಲಿ ಕೆಲಸ ಮಾಡುತ್ತೇನೆ" ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

ಮಧ್ಯಪ್ರಾಚ್ಯ ಯುದ್ಧ: ಅಡುಗೆ ಅನಿಲ ಕೊರತೆ ಬೆನ್ನಲ್ಲೆ ಏರ್ ಇಂಡಿಯಾ ಸಮೂಹದಿಂದ ಬೆಲೆ ಏರಿಕೆ ಶಾಕ್! Fuel surcharge ಏರಿಕೆ ಘೋಷಣೆ

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

SCROLL FOR NEXT