ವಿಧಾನ ಸೌಧ 
ರಾಜ್ಯ

ರಾಜ್ಯ ಸರ್ಕಾರದಿಂದ 2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟ

ರಾಜ್ಯ ಸರ್ಕಾರ 2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಇಂದು ಸಾರ್ವಜನಿಕರ ಮಾಹಿತಿಗಾಗಿ ಬಿಡುಗಡೆ ಮಾಡಿದೆ.

ಬೆಂಗಳೂರು: ರಾಜ್ಯ ಸರ್ಕಾರ ಗುರುವಾರ 2025ನೇ ಸಾಲಿನ ಸರ್ಕಾರಿ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ರಾಜ್ಯ ಸರ್ಕಾರ 2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಇಂದು ಸಾರ್ವಜನಿಕರ ಮಾಹಿತಿಗಾಗಿ ಬಿಡುಗಡೆ ಮಾಡಿದ್ದು, ನಾನಾ ಹಬ್ಬಗಳು ಸೇರಿದಂತೆ 2025ರಲ್ಲಿ ಒಟ್ಟು 19 ದಿನ ರಜೆ ಘೋಷಿಸಲಾಗಿದೆ. ಇನ್ನು ಏಪ್ರಿಲ್ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ಹೆಚ್ಚಿನ ರಜೆಗಳಿವೆ.

ಭಾನುವಾರಗಳಂದು ಗಣರಾಜ್ಯೋತ್ಸವ(ಜ.26), ಯುಗಾದಿ(ಮಾ.30), ಮೊಹರಂ ಕಡೆ ದಿನ(ಜು.6), ಮಹಾಲಯ ಅಮವಾಸ್ಯೆ(ಸೆ.21) ಮತ್ತು ಎರಡನೇ ಶನಿವಾರದಂದು ಕನಕದಾಸ ಜಯಂತಿ(ನ.8) ಬರುತ್ತವೆ. ಹಾಗಾಗಿ, ಆ ರಜೆಗಳ ಬಗ್ಗೆ ಈ ಪಟ್ಟಿಯಲ್ಲಿ ನಮೂದಿಸಿಲ್ಲ.

ರಜಾ ಪಟ್ಟಿಯಲ್ಲಿ ಸೇರಿಸಲಾಗಿರುವ ಮುಸಲ್ಮಾನ ಬಾಂಧವರ ಹಬ್ಬಗಳು ನಿಗದಿತ ದಿನಾಂಕದಂದು ಬೀಳದಿದ್ದರೆ, ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗದಿತ ರಜೆಗೆ ಬದಲಾಗಿ ಹಬ್ಬದ ದಿವಸ ರಜಾ ಮಂಜೂರು ಮಾಡಬಹುದಾಗಿದೆ.

2025ನೇ ಸಾಲಿನ ಸರ್ಕಾರಿ ರಜಾ ದಿನಗಳು

14.01.2025, ಮಂಗಳವಾರ. ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ

26.02.2025, ಬುಧವಾರ. ಮಹಾಶಿವರಾತ್ರಿ

31.03.2025, ಸೋಮವಾರ. ಖುತುಬ್-ಎ-ರಂಜಾನ್

10.04.2025, ಗುರುವಾರ. ಮಹಾವೀರ ಜಯಂತಿ

14.04.2025, ಸೋಮವಾರ. ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ

18.04.2025, ಶುಕ್ರವಾರ. ಗುಡ್‌ ಫ್ರೈಡೆ

30.04.2025, ಬುಧವಾರ. ಬಸವ ಜಯಂತಿ, ಅಕ್ಷಯ ತೃತೀಯ

1.05.2025, ಗುರುವಾರ. ಕಾರ್ಮಿಕ ದಿನಾಚರಣೆ

7.06.2025, ಶನಿವಾರ. ಬಕ್ರೀದ್

15.08.2025, ಶುಕ್ರವಾರ. ಸ್ವಾತಂತ್ರ್ಯ ದಿನಾಚರಣೆ

27.08.2025, ಬುಧವಾರ. ವರಸಿದ್ಧಿ ವಿನಾಯಕ ವ್ರತ

5.09.2025, ಶುಕ್ರವಾರ. ಈದ್-ಮಿಲಾದ್

1.10.2025, ಬುಧವಾರ. ಮಹಾನವಮಿ, ಆಯುಧಪೂಜೆ, ವಿಜಯದಶಮಿ

2.10.2025, ಗುರುವಾರ. ಗಾಂಧಿ ಜಯಂತಿ

7.10.2025, ಮಂಗಳವಾರ. ವಾಲ್ಮೀಕಿ ಜಯಂತಿ

20.10.2025, ಸೋಮವಾರ. ನರಕ ಚತುದರ್ಶಿ

22.10.2025, ಬುಧವಾರ. ಬಲಿಪಾಡ್ಯಮಿ, ದೀಪಾವಳಿ

01.11.2025, ಶನಿವಾರ. ಕನ್ನಡ ರಾಜೋತ್ಸವ

25.12.2025, ಗುರುವಾರ. ಕ್ರಿಸ್‌ಮಸ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಮೂಲಕ ತೆರಳಲು ಇರಾನ್‌ಗೆ ಹಣ ಪಾವತಿಸಿದರೆ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ; ಅಮೆರಿಕ ಎಚ್ಚರಿಕೆ

'ನಾನು ಅಷ್ಟು ಹೆದರಿದ್ದೆ': ವೈಭವ್ ಸೂರ್ಯವಂಶಿ ಮುಂದೆ ಅತಿರೇಕದ ಸಂಭ್ರಮಾಚರಣೆಗೆ ಉತ್ತರ ಕೊಟ್ಟ ಕೈಲ್ ಜೇಮಿಸನ್, Video!

ಕುಸಿಯುವ ಅಪಾಯದಲ್ಲಿರುವ ಶಿಥಿಲಗೊಂಡ ಕಟ್ಟಡಗಳನ್ನು ಕೆಡವಲು ಆದೇಶಿಸಿದ ಜಿಬಿಎ ಮುಖ್ಯ ಆಯುಕ್ತ

ವಾಣಿಜ್ಯ LPG ಸಿಲಿಂಡರ್‌ ಮೇಲಿನ GSTಶೇ. 5ಕ್ಕೆ ಇಳಿಸಿ: ಸರ್ಕಾರಕ್ಕೆ ಕರ್ನಾಟಕ ಹೋಟೆಲ್ ಸಂಘದ ಒತ್ತಾಯ

ಪಶ್ಚಿಮ ಬಂಗಾಳ ಮತ ಎಣಿಕೆಗೆ ಕೇಂದ್ರ ಸಿಬ್ಬಂದಿ ನಿಯೋಜನೆ: EC ಕ್ರಮ ಮಾನ್ಯ ಎಂದ ಸುಪ್ರೀಂಕೋರ್ಟ್, TMCಗೆ ಹಿನ್ನಡೆ

SCROLL FOR NEXT