ಲೋಕಾ ದಾಳಿ ವೇಳೆ ಪತ್ತೆಯಾದ ಚಿನ್ನಾಭರಣ ANI
ರಾಜ್ಯ

ಲೋಕಾಯುಕ್ತ ದಾಳಿ: ಟೌನ್​ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆಯಲ್ಲಿ ಸಿಕ್ತು ಕೆಜಿಗಟ್ಟಲೆ ಚಿನ್ನ, ಬೆಳ್ಳಿ; ಅಧಿಕಾರಿಗಳೇ ಶಾಕ್!

ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು ಬೆಂಗಳೂರು, ಮಂಗಳೂರು ಸೇರಿದಂತೆ 4 ಕಡೆಗಳ 25 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು ಬೆಂಗಳೂರು, ಮಂಗಳೂರು ಸೇರಿದಂತೆ 4 ಕಡೆಗಳ 25 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.

ಟೌನ್​ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಅವರ ಬನಶಂಕರಿಯ 3ನೇ ಹಂತದ ವಿಶ್ವೇಶ್ವರಯ್ಯ ರಸ್ತೆಯಲ್ಲಿರುವ ಮನೆ ಮೇಲೆ ದಾಳಿ ಮಾಡಿದ್ದು ಅಲ್ಲಿ ಕಂಡುಬಂದ ಅಪಾರ ಮೌಲ್ಯದ ಆಸ್ತಿ ದಾಖಲೆಗಳು, ಚಿನ್ನಾಭರಣ ನೋಡಿ ಅಧಿಕಾರಿಗಳೇ ಶಾಕ್​ ಆಗಿದ್ದಾರೆ. 23ಕ್ಕೂ ಹೆಚ್ಚು ಚಿನ್ನದ ಸರ, 28ಕ್ಕೂ ಹೆಚ್ಚು ಜೊತೆ ಓಲೆ, ಮುತ್ತಿನ ಹಾರ ಪತ್ತೆಯಾಗಿದೆ. ಇದು ಅಷ್ಟೇ ಅಲ್ಲದೆ ಕೋಟಿ ರೂಪಾಯಿ ಮೌಲ್ಯದ ಚಿನ್ನದ ನೆಕ್ಲೆಸ್​, ಚಿನ್ನದ ಉಂಗುರಗಳು, 8 ಲಕ್ಷ ರೂಪಾಯಿ ನಗದು ಪತ್ತೆಯಾಗಿದ್ದು 8ಕ್ಕೂ ಹೆಚ್ಚು ದುಬಾರಿ ಬೆಲೆಯ ಬ್ರಾಂಡೆಡ್​ ವಾಚ್​ಗಳು ಸಿಕ್ಕಿವೆ.

ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಅಬಕಾರಿ ಇಲಾಖೆ ಎಸ್​ಪಿ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ಬೆಳಗ್ಗೆ 6 ಗಂಟೆಯ ವೇಳೆ ಅಬಕಾರಿ ಇಲಾಖೆ ಎಸ್​ಪಿ ಮೋಹನ್ ಮನೆ ಮೇಲೆ ರೇಡ್ ಮಾಡಲಾಗಿದ್ದು. ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಎಂಸಿ ವಿರುದ್ಧ ಹಾಗೂ ಮಂಡ್ಯದಲ್ಲಿ ಮಹೇಶ್, ಎಂಡಿ ಕಾವೇರಿ ನೀರವಾಯಿ ನಿಗಮ ವಿರುದ್ಧ ಬೆಂಗಳೂರಿನ ಸರ್ಫೇಸ್ ವಾಟರ್ ಡಾಟಾ ಸೆಂಟರ್‌ನಲ್ಲಿ ದಾಳಿ ನಡೆಸಲಾಗಿದೆ. ಬೆಂಗಳೂರು ನಗರದ ಅಬಕಾರಿ ಅಧೀಕ್ಷಕ ಮೋಹನ್ ಕೆ ಸೇರಿದಂತೆ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಜುಲೈನಲ್ಲಿ, ಕರ್ನಾಟಕ ಲೋಕಾಯುಕ್ತ, ರಾಜ್ಯದ 12 ಅಧಿಕಾರಿಗಳ ವಿರುದ್ಧ ದಾಳಿಗಳನ್ನು ನಡೆಸಿತು. ಬೆಂಗಳೂರು ನಗರದಲ್ಲಿ ಆರು ಅಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳು ಹಾಗೂ ಯಾದಗಿರಿ ಮತ್ತು ತುಮಕೂರಿನಲ್ಲಿ ತಲಾ ಒಬ್ಬ ಅಧಿಕಾರಿಗಳ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಅಧಿಕಾರಿಗಳಿಗೆ ಸೇರಿದ 54 ಸ್ಥಳಗಳ ಮೇಲೆ ದಾಳಿ ನಡೆಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT