ಸಿಡಿಲು online desk
ರಾಜ್ಯ

ಸರ್ಕಾರಕ್ಕೆ ಹೊರೆಯಾದ ಸಿಡಿಲು ಬಡಿತ ಪ್ರಕರಣಗಳು; ರಕ್ಷಣೆ ಮಾನದಂಡಗಳ ಬದಲಾವಣೆಗೆ ಹೆಚ್ಚಿದ ಒತ್ತಡ

ಸಿಡಿಲು ಬಡಿದು ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ತಾಪಮಾನದಲ್ಲಿ ಪ್ರತಿ ಡಿಗ್ರಿ ಸೆಲ್ಶಿಯಸ್ ಹೆಚ್ಚಳವಾದಂತೆಲ್ಲಾ ಮಿಂಚಿನ ಸಾಂದ್ರತೆ ಶೇ.12 ರಷ್ಟು ಹೆಚ್ಚಳವಾಗುತ್ತಿದ್ದು, ಕಟ್ಟಡ ನಿರ್ಮಾಣದ ನಿಯಮಗಳು ಹಾಗೂ ರಕ್ಷಣಾ ಮಾನದಂಡಗಳ ಪರಿಷ್ಕರಣೆ ಅನಿವಾರ್ಯವಾಗುತ್ತಿದೆ.

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ವರದಿಯಾಗುತ್ತಿರುವ ಸಿಡಿಲು- ಮಿಂಚು ಪ್ರಕರಣಗಳು ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಿದೆ.

ಸಿಡಿಲು ಬಡಿದು ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ತಾಪಮಾನದಲ್ಲಿ ಪ್ರತಿ ಡಿಗ್ರಿ ಸೆಲ್ಶಿಯಸ್ ಹೆಚ್ಚಳವಾದಂತೆಲ್ಲಾ ಮಿಂಚಿನ ಸಾಂದ್ರತೆ ಶೇ.12 ರಷ್ಟು ಹೆಚ್ಚಳವಾಗುತ್ತಿದ್ದು, ಕಟ್ಟಡ ನಿರ್ಮಾಣದ ನಿಯಮಗಳು ಹಾಗೂ ರಕ್ಷಣಾ ಮಾನದಂಡಗಳ ಪರಿಷ್ಕರಣೆ ಅನಿವಾರ್ಯವಾಗುತ್ತಿದೆ.

ಜುಲೈನಲ್ಲಿ ಬಿಡುಗಡೆಯಾದ ವಾರ್ಷಿಕ ಮಿಂಚಿನ ವರದಿ 2023- 24 ರ ಪ್ರಕಾರ, 2014-2024 ರವರೆಗಿನ ಸಿಡಿಲಿನ ಒಟ್ಟು ಮರಣದ ಆಧಾರದ ಮೇಲೆ ಶ್ರೇಯಾಂಕದ ಪಟ್ಟಿಯಲ್ಲಿ ಕರ್ನಾಟಕ ಒಂಬತ್ತನೇ ಸ್ಥಾನದಲ್ಲಿದೆ. 2023 ರಲ್ಲಿ ಕರ್ನಾಟಕದಲ್ಲಿ 85 ಸಿಡಿಲು ಬಡಿತ ಪ್ರಕರಣಗಳು ಸಂಭವಿಸಿವೆ ಎಂದು ವರದಿ ಹೇಳಿದೆ. ಈ ಅವಧಿಯಲ್ಲಿ 920 ಸಾವುಗಳು ದಾಖಲಾಗಿವೆ.

ಮಿಂಚು ನಿರೋಧಕ ಭಾರತೀಯ ಅಭಿಯಾನ ಎಂಬ ಶೀರ್ಷಿಕೆಯ ವರದಿ ಮಿಂಚನ್ನು ರಾಷ್ಟ್ರೀಯ ವಿಪತ್ತು ಎಂದು ವರ್ಗೀಕರಿಸುವ ಮತ್ತು ಅದನ್ನು ಸೂಚಿಸುವ ಅಗತ್ಯವನ್ನು ಎತ್ತಿ ತೋರಿಸಿದೆ. ಇದನ್ನು ಹವಾಮಾನ ನಿರೋಧಕ ವೀಕ್ಷಣಾ ಪ್ರಮೋಷನ್ ಕೌನ್ಸಿಲ್, ಭಾರತೀಯ ಹವಾಮಾನ ಇಲಾಖೆ ಮತ್ತು ಭೂ ವಿಜ್ಞಾನ ಸಚಿವಾಲಯದ ಜಂಟಿ ಉಪಕ್ರಮವಾಗಿ ಸಿದ್ಧಪಡಿಸಿವೆ. ಮಿಂಚಿನ ಪತ್ತೆ ಮತ್ತು ಮುಂಚಿನ ಎಚ್ಚರಿಕೆ ವ್ಯವಸ್ಥೆಯನ್ನು ಬಲಪಡಿಸುವ ಅವಶ್ಯಕತೆಯಿದೆ, ಮಿಂಚಿನ ತಜ್ಞರ ತಂಡವನ್ನು ಅಭಿವೃದ್ಧಿಪಡಿಸುವುದು ಮತ್ತು ಎಲ್ಲಾ ರಾಜ್ಯಗಳು ಋತು-ಆಧಾರಿತ ನಿರೋಧಕ ತಂತ್ರಗಳನ್ನು ಕೇಂದ್ರೀಕರಿಸುವ ಮಿಂಚಿನ ಕ್ರಿಯಾ ಯೋಜನೆಯನ್ನು ರೂಪಿಸಲು ವರದಿ ಸಲಹೆ ನೀಡಿದೆ.

ಮಿಂಚು ನಿರೋಧಕ ಭಾರತ ಅಭಿಯಾನದ ಸದಸ್ಯ, ಐಎಂಡಿ ಮಾಜಿ ಮಹಾನಿರ್ದೇಶಕ ಡಾ ಕೆ ಜೆ ರಮೇಶ್, ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿ, ಮಿಂಚು ಮತ್ತು ಗುಡುಗು ಸಹಿತ ಮಳೆಯಿಂದ ಭಾರತದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಜನರು ಸಾವನ್ನಪ್ಪುತ್ತಿದ್ದಾರೆ. ಮತ್ತು ರೈತರು ಮತ್ತು ನಿರ್ಮಾಣ ಕಾರ್ಮಿಕರು ಅವುಗಳಿಗೆ ಹೆಚ್ಚು ಬಲಿಯಾಗುತ್ತಿದ್ದಾರೆ. ಹಿಂದೆ ಚಂಡಮಾರುತಗಳಿಂದ ಹೆಚ್ಚು ಜನ ಸಾವನ್ನಪ್ಪುತ್ತಿದ್ದಾರೆ ಎನ್ನಲಾಗುತ್ತಿತ್ತು ಆದರೆ ಈಗ ಆ ಸ್ಥಾನವನ್ನು ಸಿಡಿಲು ಪಡೆದಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

SCROLL FOR NEXT