ರಾಜ್ಯ

Lokayukta Raid: ರಾಜ್ಯಾದ್ಯಂತ 25 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ; ಭ್ರಷ್ಟರ ಬೇಟೆಯಾಡಿದ ಲೋಕಾಯುಕ್ತ ಪೊಲೀಸರು

ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಬೆಂಗಳೂರು: ಗುರುವಾರ ಬೆಳ್ಳಂಬೆಳಗ್ಗೆ ರಾಜ್ಯದ ಸುಮಾರು 25 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಠ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರ, ಮಂಡ್ಯ, ಮಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪ್ರಮುಖ ನಾಲ್ವರು ಅಧಿಕಾರಿಗಳ ಕಚೇರಿ ಹಾಗೂ ನಿವಾಸದಲ್ಲಿ ಶೋಧ ನಡೆಸುತ್ತಿದ್ದಾರೆ.

ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಭೂ ಹಾಗೂ ಗಣಿ ವಿಜ್ಞಾನ ಇಲಾಖೆಯ ಕೃಷ್ಣವೇಣಿ ಮನೆ ಮೇಲೆ ದಾಳಿ ಮಾಡಲಾಗಿದೆ. ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್, ಬೆಂಗಳೂರಿನ ಟೌನ್ ಅಂಡ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ, ಬೆಂಗಳೂರಿನಲ್ಲಿ ಅಬಕಾರಿ ಇಲಾಖೆಯ ಎಸ್​ಪಿ ಮಹೇಶ್ ಮನೆ ಮೇಲೆ‌ ದಾಳಿ ಮಾಡಲಾಗಿದೆ. ಈ ನಾಲ್ವರು ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಶಾಕ್ ಕೊಟ್ಟಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ದಾಳಿ ವೇಳೆ ವಶಪಡಿಸಿಕೊಂಡ ಚಿನ್ನ ಬೆಳ್ಳಿ ಆಭರಣಗಳು

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಅವರ ಮಂಗಳೂರಿನ ವೆಲೆನ್ಸಿಯಾದ ಮನೆ ಹಾಗೂ ಕಚೇರಿಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೃಷ್ಣವೇಣಿ 2 ತಿಂಗಳ ಹಿಂದಷ್ಟೇ ವರ್ಗಾವಣೆ ಆಗಿ ಮಂಗಳೂರಿಗೆ ಬಂದಿದ್ದಾರೆ.

ಇವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗಣಿ‌ ಇಲಾಖೆ ಅಧಿಕಾರಿಯಾಗಿದ್ದರು. ಚಿಕ್ಕಬಳ್ಳಾಪುರದಲ್ಲಿ ಕೃಷ್ಣವೇಣಿ ವಿರುದ್ಧ ದೂರು ದಾಖಲಾದ ಹಿನ್ನೆಲೆ ಈ ದಾಳಿ ನಡೆದಿದೆ. ಮಂಗಳೂರು ಲೋಕಾಯುಕ್ತ ಎಸ್​ಪಿ ನಟರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಚಿಕ್ಕಬಳ್ಳಾಪುರ ಸೇರಿದಂತೆ 25 ಕಡೆಗಳಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ನಗದು ಹಾಗೂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಕಾವೇರಿ ನೀರಾವರಿ ನಿಗಮ ಎಂಡಿ ಮನೆ ಮೇಲೆ ಲೋಕಾ ದಾಳಿ

ಮಂಡ್ಯದಲ್ಲಿ ‌ಲೋಕಾಯುಕ್ತ ಎಸ್​ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಮನೆಗಳ ಮೇಲೆ ದಾಳಿ ಮಾಡಲಾಗಿದೆ.

ಆರೋಪಿಗಳ ಒಟ್ಟು 25 ನಿವೇಶನಗಳ ಮೇಲೆ ದಾಳಿ ನಡೆಸಲಾಗಿದ್ದು, ಅಪಾರ ಪ್ರಮಾಣದ ನಗದು, ಚಿನ್ನಾಭರಣ, ಬೆಳ್ಳಿ, ಚಿನ್ನ ಹಾಗೂ ಇತರೆ ವಸ್ತುಗಳು ಪತ್ತೆಯಾಗಿವೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ದಾಳಿ ಪೂರ್ಣಗೊಂಡ ಬಳಿಕ ಆರೋಪಿಗಳ ಬಳಿ ಇರುವ ಒಟ್ಟು ಆಸ್ತಿಮೌಲ್ಯ ಎಷ್ಟು ಎಂದು ಗೊತ್ತಾಗಲಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT