ವಿಪಕ್ಷ ನಾಯಕ ಆರ್.ಅಶೋಕ್ 
ರಾಜ್ಯ

ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ: ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಆರೋಗ್ಯ ಇಲಾಖೆಯಲ್ಲಿ ಹಣದ ಕೊರತೆ ಎದುರಾಗಿದ್ದು, ಔಷಧ ಖರೀದಿಸಲು ಹಾಗೂ ಆಸ್ಪತ್ರೆ ಮೂಲಸೌಕರ್ಯ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರವು ಸೇವಾ ಶುಲ್ಕವನ್ನು ಹೆಚ್ಚಿಸಿದೆ.

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಆರ್.ಅಶೋಕ್ ಅವರು ಗುರುವಾರ ಸಂಜಯ್ ಗಾಂಧಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಒದಗಿಸುವ ಸೇವೆಯನ್ನು ಪರಿಶೀಲಿಸಿದರು.

ಇದೇ ವೇಳೆ ಆಸ್ಪತ್ರೆಯಲ್ಲಿನ ಚಿಕಿತ್ಸೆ ಮತ್ತು ಸೌಲಭ್ಯಗಳ ಗುಣಮಟ್ಟವನ್ನು ಅರ್ಥಮಾಡಿಕೊಳ್ಳಲು ರೋಗಿಗಳು ಮತ್ತು ಅವರ ಜೊತೆಗಿದ್ದ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಕೆಲವರು ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕವನ್ನು ಹೆಚ್ಚಳವಾಗಿರುವ ಕುರಿತು ಬೇಸರ ವ್ಯಕ್ತಪಡಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಅವರು, ಕಾಂಗ್ರೆಸ್ ನೇತೃತ್ವದ ಸರ್ಕಾರ ಆರೋಗ್ಯ ಮತ್ತು ಶಿಕ್ಷಣದಂತಹ ಅಗತ್ಯ ಕ್ಷೇತ್ರಗಳನ್ನು ನಿರ್ಲಕ್ಷಿಸಿದೆ. ಆರೋಗ್ಯ ಇಲಾಖೆಯಲ್ಲಿ ಹಣದ ಕೊರತೆ ಎದುರಾಗಿದ್ದು, ಔಷಧ ಖರೀದಿಸಲು ಹಾಗೂ ಆಸ್ಪತ್ರೆ ಮೂಲಸೌಕರ್ಯ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರವು ಸೇವಾ ಶುಲ್ಕವನ್ನು ಹೆಚ್ಚಿಸಿದೆ, ಇದರಿಂದ ರೋಗಿಗಳಿಗೆ ಹೊರೆಯಾಗಿದೆ. ಇದರಿಂದ ರಾಜ್ಯದ ಖಜಾನೆ ಖಾಲಿಯಾಗಿದೆ ಎಂಬುದು ಸಾಬೀತಾಗುತ್ತಿದೆ. ಗ್ಯಾರಂಟಿ ನೀಡಿ ಸರ್ಕಾರ ಹೆಚ್ಚಿನ ತೆರಿಗೆ ಪಡೆಯುತ್ತಿದೆ ಎಂದು ಆರೋಪಿಸಿದರು.

ಕೈಗೆಟಕುವ ದರದ ಆರೋಗ್ಯ ಮತ್ತು ಕಲ್ಯಾಣದ ಭರವಸೆಗಳನ್ನು ಈಡೇರಿಸುವಲ್ಲಿ ಅವರ ಸರ್ಕಾರ ವಿಫಲವಾಗಿದೆ. ಆಹಾರ ಮತ್ತು ಆರೋಗ್ಯದ ವಿಷಯದಲ್ಲಿ ಅವರು ಜನರನ್ನು ವಂಚಿಸುತ್ತಿದ್ದಾರೆ. ಒಂದೆಡೆ ಭೂಮಿ, ಮತ್ತೊಂದೆಡೆ ಪಡಿತರ ಚೀಟಿ ಕಿಸಿಯುತ್ತಿದ್ದಾರೆ. ಇದೀಗ ಆರೋಗ್ಯ ಸೇವೆಯೂ ಸಿಗುತ್ತಿಲ್ಲ. ಬಡ ಸರ್ಕಾರ ಎಂದರೆ ಇದೇನಾ? ಎಂದು ಪ್ರಶ್ನಿಸಿದರು.

ವಿಧಾನಸೌಧಕ್ಕೆ ಪ್ರವೇಶ ಪಡೆಯಲು ಲಂಚ ಅಗತ್ಯವಾಗಿದೆ ಹೋಗಿದೆ, ಮುಡಾ ಹಗರಣದ ನಂತರ ಸರ್ಕಾರದ ಗಮನ ಜನಪರವಾಗಿಲ್ಲ. ಆರೋಗ್ಯ ಸೇವೆಯು ಉಚಿತವಾಗಿರಬೇಕು. ಆದರೆ, ಸರ್ಕಾರ ಬಡವರ ಮೇಲೆ ಹೊರೆ ಹೊರಿಸುವ ಧೋರಣೆಯನ್ನು ಅಳವಡಿಸಿಕೊಂಡಿದೆ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT