ಫೀಲ್ಡ್ ಮಾರ್ಷಲ್ ಕಾರಿಯಪ್ಪ, ಜನರಲ್ ತಿಮ್ಮಯ್ಯ 
ರಾಜ್ಯ

ಫೀಲ್ಡ್ ಮಾರ್ಷಲ್ ಕಾರಿಯಪ್ಪ, ಜನರಲ್ ತಿಮ್ಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ: ಕೊಡವ ಸಂಘಟನೆಗಳಿಂದ ಖಂಡನೆ

ಶುಕ್ರವಾರ ಬೆಳಗ್ಗೆ ಕೆಲ ವಾಟ್ಸಾಪ್ ಗ್ರೂಪ್ ಗಳಲ್ಲಿ ಕಾರಿಯಪ್ಪ ಮತ್ತು ಜನರಲ್ ತಿಮ್ಮಯ್ಯ ವಿರುದ್ಧದ ಅವಹೇಳನಕಾರಿ ಹೇಳಿಕೆಗಳು ಹರಿದಾಡಿವೆ. ಅಪರಿಚಿತ ವ್ಯಕ್ತಿಯೊಬ್ಬರಿಂದ ಈ ಮೇಸೆಜ್ ಕಳುಹಿಸಲಾಗಿದೆ. ಮೊಬೈಲ್ ಆ್ಯಪ್ ನಲ್ಲಿ ಅವರ ಹಸರು ಶ್ರಿವಾಸ್ತವ ಭಟ್ ಎಂದು ತೋರಿಸಲಾಗುತ್ತಿದೆ

ಮಡಿಕೇರಿ: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರಿಯಪ್ಪ ಹಾಗೂ ಜನರಲ್ ತಿಮ್ಮಯ್ಯ ವಿರುದ್ಧದ ಅವಹೇಳನಾಕಾರಿ ಹೇಳಿಕೆಗೆ ಕೊಡಗು ನಿವಾಸಿಗಳು, ವಿವಿಧ ಕೊಡವ ಸಮಾಜಗಳಿಂದ ತೀವ್ರ ಖಂಡನೆ ವ್ಯಕ್ತವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ನಿವಾಸಿಯೊಬ್ಬರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

ಶುಕ್ರವಾರ ಬೆಳಗ್ಗೆ ಕೆಲ ವಾಟ್ಸಾಪ್ ಗ್ರೂಪ್ ಗಳಲ್ಲಿ ಕಾರಿಯಪ್ಪ ಮತ್ತು ಜನರಲ್ ತಿಮ್ಮಯ್ಯ ವಿರುದ್ಧದ ಅವಹೇಳನಕಾರಿ ಹೇಳಿಕೆಗಳು ಹರಿದಾಡಿವೆ. ಅಪರಿಚಿತ ವ್ಯಕ್ತಿಯೊಬ್ಬರಿಂದ ಈ ಮೇಸೆಜ್ ಕಳುಹಿಸಲಾಗಿದೆ. ಮೊಬೈಲ್ ಆ್ಯಪ್ ನಲ್ಲಿ ಅವರ ಹಸರು ಶ್ರಿವಾಸ್ತವ ಭಟ್ ಎಂದು ತೋರಿಸಲಾಗುತ್ತಿದೆ. ಕೊಡವ ಸಂಘಟನೆಗಳು ಹಾಗೂ ಜಿಲ್ಲೆಯ ನಿವಾಸಿಗಳು ಹೇಳಿಕೆ ಖಂಡಿಸಿದ್ದರೂ ಅನೇಕ ಸೋಶಿಯಲ್ ಮೀಡಿಯಾ ಗ್ರೂಪ್ ಗಳಲ್ಲಿ ಅದನ್ನು ಶೇರ್ ಮಾಡಲಾಗಿದೆ.

ಶ್ರೀವಾಸ್ತವ ಭಟ್ ಎನ್ನಲಾದ ಅಪರಿಚಿತ ವ್ಯಕ್ತಿ ವಿರುದ್ಧ ಕೊಡವಾಮೇರ ಕೊಂಡಾಟ ಎಸ್ಪಿ ಕೆ ರಾಜರಾಜನ್ ಗೆ ದೂರು ಸಲ್ಲಿಸಿದ್ದರೂ ಹಲವು ಪೊಲೀಸ್ ಠಾಣೆಗಳಲ್ಲಿ ವಿವಿಧ ಕೊಡವ ಸಮಾಜಗಳಿಂದ ದೂರು ದಾಖಲಿಸಲಾಗಿದೆ. ಸಂಸದ ಯದುವೀರ್ ಒಡೆಯರ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿದ್ದಾರೆ.

ದೇಶದ ಪ್ರಗತಿಗೆ ಅಪ್ರತಿಮ ಕೊಡುಗೆ ನೀಡಿರುವ ಕೊಡಗಿನ ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಮತ್ತು ಜನರಲ್ ತಿಮ್ಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಯದುವೀರ್ ಆಗ್ರಹಿಸಿದ್ದಾರೆ.

ಸೇವೆ ಮತ್ತು ತ್ಯಾಗ ನಮ್ಮ ದೇಶದ ಭದ್ರತೆ ಮತ್ತು ಏಕತೆಯನ್ನು ರೂಪಿಸಿರುವುದರಿಂದ, ಅವರಿಗೆ ಅಪಾರವಾದ ಗೌರವ ನೀಡುವುದು ನಮ್ಮ ಕರ್ತವ್ಯವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಯದುವೀರ್ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ. ಆರೋಪಿಯನ್ನು ಕೂಡಲೇ ಬಂಧಿಸುವಂತೆ ಕೊಡವ ಮಕ್ಕಡ ಕೂಟ, ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ರಾಜ್ಯಾದ್ಯಂತ ವಿವಿಧ ಕೊಡವ ಸಮಾಜಗಳು ಒತ್ತಾಯಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT