ಮೃತಪಟ್ಟ ಮಕ್ಕಳ ಜೊತೆಯಲ್ಲಿರುವ ತಾಯಿಯ ಚಿತ್ರ 
ರಾಜ್ಯ

ಬೆಂಗಳೂರು: ಇಬ್ಬರು ಮಕ್ಕಳ ಹತ್ಯೆ! ಪತ್ನಿ ವಿರುದ್ಧ ಪತಿಯ ಆರೋಪ

ವೈವಾಹಿಕ ವಿವಾದದಿಂದಾಗಿ ತನ್ನ ಪತ್ನಿ ಮಮತಾ ಮಕ್ಕಳನ್ನು ಹತ್ಯೆ ಮಾಡಿದ್ದಾಳೆ ಎಂದು ಕೊಲೆಯಾದ ಮಕ್ಕಳ ತಂದೆ ಸುನೀಲ್ ಕುಮಾರ್ ಸಾಹೋ ಆರೋಪಿಸಿದ್ದಾರೆ. ಜಾರ್ಖಂಡ್ ಮೂಲಕ ಸಾಹೋ ಗುರುವಾರ ರಾತ್ರಿ 9-30ಕ್ಕೆ ಮನೆಗೆ ವಾಪಸ್ಸಾದಾಗ ಮಕ್ಕಳ ಮೃತದೇಹ ಕಂಡುಬಂದಿದೆ.

ಬೆಂಗಳೂರು: ನಗರದ ಸುಬ್ರಹ್ಮಣ್ಯಪುರದ ಮನೆಯೊಂದರಲ್ಲಿ ಇಬ್ಬರು ಮಕ್ಕಳ ಹತ್ಯೆಯಾಗಿದೆ. ಹಗ್ಗದಿಂದ ಕುತ್ತಿಗೆ ಬಿಗಿದು ಶುಭಂ (7) ಮತ್ತು ಸಿಯಾ ಹತ್ಯೆ ಮಾಡಿರುವ ಆರೋಪ ಕೇಳಿಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.

ವೈವಾಹಿಕ ವಿವಾದದಿಂದಾಗಿ ತನ್ನ ಪತ್ನಿ ಮಮತಾ ಮಕ್ಕಳನ್ನು ಹತ್ಯೆ ಮಾಡಿದ್ದಾಳೆ ಎಂದು ಕೊಲೆಯಾದ ಮಕ್ಕಳ ತಂದೆ ಸುನೀಲ್ ಕುಮಾರ್ ಸಾಹೋ ಆರೋಪಿಸಿದ್ದಾರೆ. ಜಾರ್ಖಂಡ್ ಮೂಲಕ ಸಾಹೋ ಗುರುವಾರ ರಾತ್ರಿ 9-30ಕ್ಕೆ ಮನೆಗೆ ವಾಪಸ್ಸಾದಾಗ ಮಕ್ಕಳ ಮೃತದೇಹ ಕಂಡುಬಂದಿದೆ.

ಕೂಡಲೇ ಅವರು ಮಕ್ಕಳು ಹಾಗೂ ಸ್ವಲ್ಪ ಕುತ್ತಿಗೆ ಗಾಯವಾಗಿದ್ದ ಪತ್ನಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ದಾಂಪತ್ಯ ವಿವಾದದಿಂದ ಹತಾಶೆಗೊಂಡು ತನ್ನ ಪತ್ನಿಯೇ ಮಕ್ಕಳನ್ನು ಹತ್ಯೆ ಮಾಡಿದ್ದಾರೆ ಎಂದು ಸಾಹೋ ದೂರಿನಲ್ಲಿ ಆರೋಪಿಸಿದ್ದಾರೆ.

ಆದರೆ, ಕೊಲೆ ಆರೋಪವನ್ನು ಮಮತಾ ನಿರಾಕರಿಸಿದ್ದಾರೆ. ಕೊಲೆ ನಡೆದಾಗ ಮಮತಾ ಮನೆಯಲ್ಲಿ ಇದ್ದರು ಎಂಬುದು ಗೊತ್ತಾಗಿದೆ. ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ವೇಳೆ ಘಟನೆ ನಡೆದಾಗ ತಂದೆ ಮನೆಯಲ್ಲಿ ಇರಲಿಲ್ಲ ಎಂಬುದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆ ಪ್ರಕಾರ, ಮಕ್ಕಳನ್ನು ಹಗ್ಗದಿಂದ ಬಿಗಿದು ಸಾಯಿಸಿರುವುದು ತಿಳಿದುಬಂದಿದೆ. ಕೊಲೆಗೆ ಯಾರು ಕಾರಣರು ಎಂಬುದಕ್ಕೆ ತಂದೆ- ತಾಯಿ ಹೇಳಿಕೆಗಳು ಸರಿಯಾದ ಸಾಕ್ಷಿಯಾಗಿ ಕಂಡುಬಂದಿಲ್ಲ. ಕೊಲೆ ಕೇಸ್ ದಾಖಲಿಸಿಕೊಳ್ಳಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ( ದಕ್ಷಿಣ) ಲೋಕೇಶ್ ಬಿ ಜಗಲಸರ್ ಹೇಳಿದ್ದಾರೆ.

ಪ್ರಕರಣದ ತನಿಖೆ ಮುಂದುವರೆದಿದೆ. ಮಕ್ಕಳ ತಾಯಿಯ ಕುತ್ತಿಗೆಯಲ್ಲಿ ಸಣ್ಣ ಪ್ರಮಾಣದ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಕ್ಕೆ ಆತ್ಮಹತ್ಯೆ ಯತ್ನನಾ ಅಥವಾ ಬೇರೆಯವರು ಕಾರಣನಾ ಎಂಬುದರ ಬಗ್ಗೆ ತನಿಖೆ ಮುಂದುವರೆದಿದೆ. ದಾಂಪತ್ಯ ವಿವಾದದಿಂದ ಕೊಲೆ ನಡೆದಿರಬಹುದೆಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಆದಾಗ್ಯೂ, ತನಿಖೆ ಮುಂದುವರೆದಿದೆ. ಎಲ್ಲಾ ಹೇಳಿಕೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಜಗಲಸರ್ ತಿಳಿಸಿದರು.

ಘಟನೆ ಕುರಿತು ಮುಂದಿನ ತನಿಖೆಗೆ ತಾಂತ್ರಿಕ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಮಕ್ಕಳ ತಾಯಿ ಇನ್ನೂ ಆಸ್ಪತ್ರೆಯಲ್ಲಿರುವುದರಿಂದ ಯಾರನ್ನೂ ಬಂಧಿಸಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT