ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಭಾರತ ವಿಶ್ವದ 5ನೇ ಬೃಹತ್ ಆರ್ಥಿಕ ಶಕ್ತಿಯಾಗುತ್ತಿದ್ದು, ಉಕ್ಕು ಉದ್ಯಮ ಬಹುದೊಡ್ಡ ಕೊಡುಗೆ ನೀಡುತ್ತಿದೆ: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ

ರಾಷ್ಟ್ರ ನಿರ್ಮಾಣದಲ್ಲಿ ಉಕ್ಕಿನ ಉದ್ಯಮದ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಪರಿವರ್ತಿಸಲು ಶ್ರಮಿಸಲಾಗುತ್ತಿದೆ.

ಬೆಂಗಳೂರು: ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಪರಿವರ್ತಿಸಲು ಉಕ್ಕು ಉದ್ಯಮ ಬಹುದೊಡ್ಡ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಗುರುವಾರ ಹೇಳಿದರು.

ಭಾರತೀಯ ಲೋಹ ಸಂಸ್ಥೆ (ಐಐಎಂ) ಹಮ್ಮಿಕೊಂಡಿದ್ದ ‘ಲೋಹಶಾಸ್ತ್ರಜ್ಞ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಷ್ಟ್ರ ನಿರ್ಮಾಣದಲ್ಲಿ ಉಕ್ಕಿನ ಉದ್ಯಮದ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಪರಿವರ್ತಿಸಲು ಶ್ರಮಿಸಲಾಗುತ್ತಿದೆ. ಈ ರೂಪಾಂತರಕ್ಕೆ ಉಕ್ಕು ಪ್ರಮುಖ ಕೇಂದ್ರವಾಗಿ ಉಳಿದಿದ್ದು, ಜಾಗತಿಕ ವೇದಿಕೆಯಲ್ಲಿ ದೇಶದ ಸ್ಥಿತಿಸ್ಥಾಪಕತ್ವವನ್ನು ಪ್ರದರ್ಶಿಸುತ್ತಿದೆ ಎಂದು ಹೇಳಿದರು.

ಇದೇ ವೇಳೆ ತಮ್ಮ ಕ್ಷೇತ್ರದ ಸಾಧನೆಗಳನ್ನು ಸಚಿವರು ಶ್ಲಾಘಿಸಿದರು. ವಿಶೇಷ ಉಕ್ಕು, ಹಸಿರು ಉಕ್ಕು ತಯಾರಿಕೆಗೆ ಆದ್ಯತೆ ನೀಡಲಾಗಿದೆ. ಉಕ್ಕಿನ ಸುಸ್ಥಿರ ಉತ್ಪಾದನೆಗೆ ಜಲಜನಕ ಆಧಾರಿತ ಉಕ್ಕು ತಯಾರಿಕೆ ಮತ್ತು ಮರು ಬಳಕೆಯನ್ನು ಉತ್ತೇಜಿಸಲಾಗುತ್ತಿದೆ. ಉತ್ಪಾದನಾ ಸಂಪರ್ಕ ಉಪಕ್ರಮ ಸೇರಿದಂತೆ ಹಲವಾರು ಪರಿಣಾಮಕಾರಿ ಕಾರ್ಯಕ್ರಮಗಳನ್ನು ಜಾರಿಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಭಾರತ ಜಗತ್ತಿನ ಐದನೇ ಬೃಹತ್ ಆರ್ಥಿಕ ಶಕ್ತಿಯಾಗುತ್ತಿದೆ. ಈ ಪ್ರಯತ್ನಕ್ಕೆ ಉಕ್ಕು ಉದ್ಯಮ ಬಹುದೊಡ್ಡ ಕೊಡುಗೆ ನೀಡುತ್ತಿದೆ. ಉಕ್ಕು ಕ್ಷೇತ್ರದಲ್ಲಿ ಸುಸ್ಥಿರ ಮತ್ತು ಚಲನಶೀಲ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಅದಕ್ಕೆ ಪೂರಕವಾಗಿ ನಿರ್ದಿಷ್ಟ ಕಾರ್ಯಸೂಚಿಗಳನ್ನು ರೂಪಿಸಲಾಗಿದೆ. ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚು ಪ್ರಾಮುಖ್ಯ ನೀಡುವುದರ ಜತೆಗೆ, ಉಕ್ಕು ಉತ್ಪಾದನೆ ಪ್ರಕ್ರಿಯೆಯಲ್ಲಿ ಉಂಟಾಗುತ್ತಿರುವ ವಾಯುಮಾಲಿನ್ಯವನ್ನು ಶೂನ್ಯ ಮಟ್ಟಕ್ಕೆ ತರುವ ಗುರಿ ಹೊಂದಲಾಗಿದೆ. 2070ರ ವೇಳೆಗೆ ಈ ಗುರಿಯನ್ನು ಖಚಿತವಾಗಿ ಸಾಧಿಸಲಾಗುವುದು ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಜಾಗತಿಕ ಪರಿಸರ ಸಮತೋಲನದ ಉದ್ದೇಶದ ಹಿನ್ನೆಲೆಯಲ್ಲಿ ಉಕ್ಕಿನ ಸುಸ್ಥಿರ ಉತ್ಪಾದನೆಗೆ ಹೈಡ್ರೋಜನ್ ಆಧಾರಿತ ಉಕ್ಕು ತಯಾರಿಕೆ ಮತ್ತು ಉಕ್ಕಿನ ಮರು ಬಳಕೆಯನ್ನು ಉತ್ತೇಜಿಸಲಾಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel