ಮಂಡ್ಯದಲ್ಲಿ ನಡೆದ ಬಿಜೆಪಿ ಪ್ರತಿಭಟನೆ 
ರಾಜ್ಯ

ವಕ್ಫ್ ವಿರುದ್ಧ ಸಿಡಿದೆದ್ದ BJP: 'ನಮ್ಮ ಭೂಮಿ, ನಮ್ಮ ಹಕ್ಕು' ಘೋಷಣೆಯಡಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭ

ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಳಿದಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕೆಂದು ಆಗ್ರಹಿಸಿದೆ.

ಬೆಂಗಳೂರು: ವಕ್ಫ್ ನೋಟಿಸ್​ಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ, ರಾಜ್ಯದಾದ್ಯಂತ ‘ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಯಡಿ’ ಪ್ರತಿಭಟನೆ ಆರಂಭಿಸಿದೆ.

ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಳಿದಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕೆಂದು ಆಗ್ರಹಿಸಿದೆ.

ಶುಕ್ರವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಬಿಜೆಪಿ ನಾಯಕರು, ರೈತ ವಿರೋಧಿ ಸಚಿವ ಜಮೀರ್ ಅಹಮ್ಮದ್ ಖಾನ್ ವಜಾಗೊಳಿಸಿ, ಅಲ್ಪಸಂಖ್ಯಾತರ ಓಲೈಕೆಗಾಗಿ ರೈತರ ಬದುಕಿಗೆ ಕೊಳ್ಳೆ ಇಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಧಿಕ್ಕಾರ, ಮಠ, ಮಂದಿರ, ಅನ್ನದಾತರ ಜಾಗಕ್ಕೂ ಬೇಲಿ ಹಾಕಿದ ವಕ್ಫ್ ಗೆ ಧಿಕ್ಕಾರ ಎನ್ನುವ ಬಿತ್ತಿ ಫಲಕಗಳನ್ನು ಪ್ರದರ್ಶಿಸಿದರು. ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನೆ ನಡೆಸಿ, ಡಿಸಿ ಕಚೇರಿ ಎದುರಿನ ರಸ್ತೆಯಲ್ಲಿ ಧರಣಿ ಹಮ್ಮಿಕೊಂಡರು.

ಅಶೋಕ ಮಾತನಾಡಿ, ವಕ್ಫ್ ಬೋರ್ಡ್ ನೋಟೀಸ್ ಜಾರಿ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಜನ ದಂಗೆ ಏಳುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನವಾಗಿದ್ದಾರೆ. ಸಣ್ಣ ರೈತರ ಜಮೀನುಗಳನ್ನು ಕಿತ್ತುಕೊಳ್ಳುವುದು ಅವರಿಗೆ ಸಾಮಾನ್ಯ ಸಮಸ್ಯೆಯಾಗಿದೆ ಎಂದು ಕಿಡಿಕಾರಿದರು.

ಸರ್ಕಾರ ಆರೋಪವನ್ನು ನಿರಾಕರಿಸುತ್ತಿದೆ, ಆದರೆ, ರೈತರು, ಮಠಾಧೀಶರು ಮತ್ತು ಜನರೇ ಕೆ ಪ್ರತಿಭಟನೆಗೆ ಬರುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಅಲ್ಪಸಂಖ್ಯಾತ ಸಮುದಾಯದವರನ್ನು ಓಲೈಸುವ ಕಾರ್ಯದಲ್ಲಿ ನಿರತವಾಗಿದೆ, ಸಮಾಜ ವಿರೋಧಿ ಚಟುವಟಿಕೆಗಳೂ ಹೆಚ್ಚಾಗಿವೆ. ಬಿಜೆಪಿ ಆಡಳಿತದಲ್ಲಿ ನಿಯಂತ್ರಣದಲ್ಲಿದ್ದ ನಕ್ಸಲ್ ಚಟುವಟಿಕೆಗಳು ಕರ್ನಾಟಕದಲ್ಲಿ ಮತ್ತೆ ಆರಂಭವಾಗಿದೆ. ಕಾಂಗ್ರೆಸ್ ಅಧಿಕಾರದಲ್ಲಿರುವುದು ನಕ್ಸಲ್ ಚಟುವಟಿಕೆ ಮತ್ತು 'ಲವ್ ಜಿಹಾದ್'ನಲ್ಲಿ ತೊಡಗಿರುವವರಿಗೆ ಉತ್ತಮ ವಾತಾವರಣ ನಿರ್ಮಾಣವಾದಂತಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ವಕ್ಫ್ ಮಂಡಳಿಯು 400 ವರ್ಷಗಳಷ್ಟು ಹಳೆಯದಾದ ದೇವಾಲಯದ ಮೇಲೆ ಹಕ್ಕು ಸಾಧಿಸಿದೆ ಎಂದು ವಾಗ್ದಾಳಿ ನಡೆಸಿದರು.

ಬಳಿಕ ಮಾತನಾಡಿದ ಶೋಭಾ ಕರಂದ್ಲಾಜೆಯವರು, ಸ್ವಾತಂತ್ರ್ಯ ಪೂರ್ವದಲ್ಲಿ ಕೇವಲ 10,000ಗಳಷ್ಟಿದ್ದ ವಕ್ಫ್ ಆಸ್ತಿಗಳು, ಈಗ 9.5 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT