ಸಾಂಕೇತಿಕ ಚಿತ್ರ 
ರಾಜ್ಯ

ಬಾಗಲಕೋಟೆ ಹೇರ್ ಡ್ರೈಯರ್ ಸ್ಫೋಟ ಪ್ರಕರಣ: ಕ್ವಾರಿ ಕೆಲಸಗಾರನ ಬಂಧನ

ಕ್ವಾರಿ ಕೆಲಸಗಾರ ಸಿದ್ದಪ್ಪ ಶೀಲವಂತ (35) ಬಂಧಿತ ಆರೋಪಿ. ನವೆಂಬರ್ 15 ರಂದು ಶಶಿಕಲಾ ಕೊಲೆ ಮಾಡಲು ಸಂಚು ರೂಪಿಸಿದ್ದನು.

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಹೇರ್ ಡ್ರೈಯರ್ ಸ್ಫೋಟ ಪ್ರಕರಣ ಕ್ವಾರಿ ಕಾರ್ಮಿಕನೊಬ್ಬನ ಸಂಚು ಎಂದು ತನಿಖೆ ವೇಳೆ ಬಹಿರಂಗವಾಗಿದೆ. ಕೊಲೆ ಮಾಡುವ ಉದ್ದೇಶದಿಂದ ಹೇರ್ ಡ್ರೈಯರ್ ಸ್ಫೋಟಿಸಿರುವುದು ಪೊಲೀಸ್ ತನಿಖೆಯಿಂದ ಬಹಿರಂಗವಾಗಿದ್ದು, ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ.

ಕ್ವಾರಿ ಕೆಲಸಗಾರ ಸಿದ್ದಪ್ಪ ಶೀಲವಂತ (35) ಬಂಧಿತ ಆರೋಪಿ. ನವೆಂಬರ್ 15 ರಂದು ಶಶಿಕಲಾ ಕೊಲೆ ಮಾಡಲು ಸಂಚು ರೂಪಿಸಿದ್ದನು, ಆರೋಪಿ ಸಿದ್ದಪ್ಪ ಹಾಗೂ ಬಸವ್ವ ರಾಜೇಶ್ವರಿ ನಡುವೆ ಅನೈತಿಕ ಸಂಬಂಧ ಇತ್ತು ಎನ್ನಲಾಗಿದೆ. ಈ ಅಕ್ರಮ ಸಂಬಂಧ ವಿಚಾರಕ್ಕೆ ಬಸಮ್ಮನ ಸ್ನೇಹಿತೆ ಶಶಿಕಲಾ ಎಂಬವರು ತಕರಾರು ಮಾಡಿದ್ದರು. ಹೀಗಾಗಿ ಬಸಮ್ಮ ಆರೋಪಿಯಿಂದ ದೂರಾಗಿದ್ದಳು. ಇದರಿಂದ ಆಕ್ರೋಶಗೊಂಡಿದ್ದ ಆರೋಪಿಯು ಶಶಿಕಲಾ ಅವರ ಕೊಲೆಗೆ ಸಂಚು ರೂಪಿಸಿದ್ದ ಎಂದು ತನಿಖೆ ವೇಳೆ ಒಪ್ಪಿಕೊಂಡಿದ್ದಾನೆ.

ಆರೋಪಿ ತಾನೇ ಹೇರ್ ಡ್ರೈಯರ್ ಖರೀದಿಸಿ, ಹೇರ್ ಡ್ರೈಯರ್ ಸ್ಫೋಟಿಸಲು ಅದರೊಳಗೆ ಡೆಟೊನೇಟರ್ ಬಳಸಿ ಶಶಿಕಲಾ ಅವರ ವಿಳಾಸಕ್ಕೆ ಕಳುಹಿಸಿದ್ದಾನೆ. ಆದರೆ ಊರಲ್ಲಿ ಇರದ ಶಶಿಕಲಾ ಅವರು ತನ್ನ ಸ್ನೇಹಿತೆ ಬಸಮ್ಮ ಅವರ ಬಳಿ ಹೇರ್ ಡ್ರೈಯರ್ ಪಡೆಯುವಂತೆ ತಿಳಿಸಿದ್ದಾರೆ ಎನ್ನಲಾಗಿದೆ. ಸ್ನೇಹಿತೆ ಶಶಿಕಲಾ ಮಾಹಿತಿಯಂತೆ ಡಿಟಿಡಿಸಿ ಕೋರಿಯರ್ ಸೆಂಟರ್ ಗೆ ತೆರಳಿ ಬಸಮ್ಮ ಹೇರ್ ಡ್ರೈಯರ್ ಪಡೆದು ಮನೆಗೆ ಮರಳಿದ ಬಸಮ್ಮ ಹೇರ್ ಡ್ರೈಯರ್ ಆನ್ ಮಾಡಿದ್ದಾರೆ. ಹೇರ್ ಡ್ರೈಯರ್ ಆನ್ ಮಾಡುತ್ತಿದ್ದಂತೆ ಅದು ಸ್ಫೋಟಗೊಂಡು ಅವರ ಕೈಗಳಿಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT