ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ರೌಡಿ ಶೀಟರ್ ಬಂಧನ, ದಾಳಿ ಸಂಚು ವಿಫಲ

ಉಳ್ಳಾಲವೊಂದರಲ್ಲಿಯೇ ಕನಿಷ್ಠ 10 ಪ್ರಕರಣಗಳು ದಾವೂದ್ ವಿರುದ್ಧ ದಾಖಲಾಗಿವೆ ಎಂದು ಕಮಿಷನರ್ ಬಹಿರಂಗಪಡಿಸಿದ್ದಾರೆ.

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಕೇಸ್ ದಾಖಲಾಗಿದ್ದ ರೌಡಿ ಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಅಪರಾಧ ನಿಯಂತ್ರಣ ದಳ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಎದುರಾಳಿ ಗ್ಯಾಂಗ್‌ಗಳ ಸದಸ್ಯರ ಮೇಲೆ ದಾಳಿ ಮಾಡುವ ಆತನ ಸಂಚನ್ನು ಸಹ ವಿಫಲಗೊಳಿಸಲಾಗಿದೆ.

ಬಾವಕ್ಕ ಅಲಿಯಾಸ್ ಅಬೂಬಕರ್ ಅವರ ಪುತ್ರ ಮತ್ತು ಉಳ್ಳಾಲದ ಧರ್ಮ ನಗರದ ನಿವಾಸಿ ದಾವೂದ್ ಶುಕ್ರವಾರ ತಲಪಾಡಿ-ದೇವಿಪುರ ರಸ್ತೆ ಬಳಿ ಎದುರಾಳಿ ತಂಡದ ಸದಸ್ಯರ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದಾಗ ಬಂಧಿಸಲಾಯಿತು ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ತಿಳಿಸಿದ್ದಾರೆ.

ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನರೇಂದ್ರ ನೇತೃತ್ವದ ತಂಡ ದಾವೂದ್ ನನ್ನು ಬಂಧಿಸಲು ಯತ್ನಿಸಿದಾಗ ಆತ ಅಧಿಕಾರಿಗಳ ಮೇಲೆ ಮಚ್ಚಿನಿಂದ ದಾಳಿ ಮಾಡಿದ್ದು, ನರೇಂದ್ರ ಮತ್ತು ಇತರರನ್ನು ಗಾಯಗೊಳಿಸಿದ್ದಾರೆ. ಹೀಗಿದ್ದರೂ ತಂಡ ಆತನನ್ನು ಉಳ್ಳಾಲ ಠಾಣೆಗೆ ಸ್ಥಳಾಂತರ ಮಾಡಿದೆ. ದಾವೂದ್ ಈಗ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 352, 109(1), 121(1), 121(2), 115(2), 132, 3(5), ಮತ್ತು 351(1) ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಎದುರಿಸುತ್ತಿದ್ದಾನೆ.

ದಾವೂದ್ ಕೊಲೆ ಸೇರಿದಂತೆ ಹಲವಾರು ಘೋರ ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ ಮತ್ತು ಉಳ್ಳಾಲ, ಮಂಗಳೂರು ದಕ್ಷಿಣ ಮತ್ತು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಮಿನಲ್ ದಾಖಲೆ ಹೊಂದಿದ್ದು, ಉಳ್ಳಾಲವೊಂದರಲ್ಲಿಯೇ ಕನಿಷ್ಠ 10 ಪ್ರಕರಣಗಳು ದಾವೂದ್ ವಿರುದ್ಧ ದಾಖಲಾಗಿವೆ ಎಂದು ಕಮಿಷನರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT