ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ರೌಡಿ ಶೀಟರ್ ಬಂಧನ, ದಾಳಿ ಸಂಚು ವಿಫಲ

ಉಳ್ಳಾಲವೊಂದರಲ್ಲಿಯೇ ಕನಿಷ್ಠ 10 ಪ್ರಕರಣಗಳು ದಾವೂದ್ ವಿರುದ್ಧ ದಾಖಲಾಗಿವೆ ಎಂದು ಕಮಿಷನರ್ ಬಹಿರಂಗಪಡಿಸಿದ್ದಾರೆ.

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಕೇಸ್ ದಾಖಲಾಗಿದ್ದ ರೌಡಿ ಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಅಪರಾಧ ನಿಯಂತ್ರಣ ದಳ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಎದುರಾಳಿ ಗ್ಯಾಂಗ್‌ಗಳ ಸದಸ್ಯರ ಮೇಲೆ ದಾಳಿ ಮಾಡುವ ಆತನ ಸಂಚನ್ನು ಸಹ ವಿಫಲಗೊಳಿಸಲಾಗಿದೆ.

ಬಾವಕ್ಕ ಅಲಿಯಾಸ್ ಅಬೂಬಕರ್ ಅವರ ಪುತ್ರ ಮತ್ತು ಉಳ್ಳಾಲದ ಧರ್ಮ ನಗರದ ನಿವಾಸಿ ದಾವೂದ್ ಶುಕ್ರವಾರ ತಲಪಾಡಿ-ದೇವಿಪುರ ರಸ್ತೆ ಬಳಿ ಎದುರಾಳಿ ತಂಡದ ಸದಸ್ಯರ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದಾಗ ಬಂಧಿಸಲಾಯಿತು ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ತಿಳಿಸಿದ್ದಾರೆ.

ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನರೇಂದ್ರ ನೇತೃತ್ವದ ತಂಡ ದಾವೂದ್ ನನ್ನು ಬಂಧಿಸಲು ಯತ್ನಿಸಿದಾಗ ಆತ ಅಧಿಕಾರಿಗಳ ಮೇಲೆ ಮಚ್ಚಿನಿಂದ ದಾಳಿ ಮಾಡಿದ್ದು, ನರೇಂದ್ರ ಮತ್ತು ಇತರರನ್ನು ಗಾಯಗೊಳಿಸಿದ್ದಾರೆ. ಹೀಗಿದ್ದರೂ ತಂಡ ಆತನನ್ನು ಉಳ್ಳಾಲ ಠಾಣೆಗೆ ಸ್ಥಳಾಂತರ ಮಾಡಿದೆ. ದಾವೂದ್ ಈಗ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 352, 109(1), 121(1), 121(2), 115(2), 132, 3(5), ಮತ್ತು 351(1) ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಎದುರಿಸುತ್ತಿದ್ದಾನೆ.

ದಾವೂದ್ ಕೊಲೆ ಸೇರಿದಂತೆ ಹಲವಾರು ಘೋರ ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ ಮತ್ತು ಉಳ್ಳಾಲ, ಮಂಗಳೂರು ದಕ್ಷಿಣ ಮತ್ತು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಮಿನಲ್ ದಾಖಲೆ ಹೊಂದಿದ್ದು, ಉಳ್ಳಾಲವೊಂದರಲ್ಲಿಯೇ ಕನಿಷ್ಠ 10 ಪ್ರಕರಣಗಳು ದಾವೂದ್ ವಿರುದ್ಧ ದಾಖಲಾಗಿವೆ ಎಂದು ಕಮಿಷನರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT