ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ರೌಡಿ ಶೀಟರ್ ಬಂಧನ, ದಾಳಿ ಸಂಚು ವಿಫಲ

ಉಳ್ಳಾಲವೊಂದರಲ್ಲಿಯೇ ಕನಿಷ್ಠ 10 ಪ್ರಕರಣಗಳು ದಾವೂದ್ ವಿರುದ್ಧ ದಾಖಲಾಗಿವೆ ಎಂದು ಕಮಿಷನರ್ ಬಹಿರಂಗಪಡಿಸಿದ್ದಾರೆ.

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಕೇಸ್ ದಾಖಲಾಗಿದ್ದ ರೌಡಿ ಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಅಪರಾಧ ನಿಯಂತ್ರಣ ದಳ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಎದುರಾಳಿ ಗ್ಯಾಂಗ್‌ಗಳ ಸದಸ್ಯರ ಮೇಲೆ ದಾಳಿ ಮಾಡುವ ಆತನ ಸಂಚನ್ನು ಸಹ ವಿಫಲಗೊಳಿಸಲಾಗಿದೆ.

ಬಾವಕ್ಕ ಅಲಿಯಾಸ್ ಅಬೂಬಕರ್ ಅವರ ಪುತ್ರ ಮತ್ತು ಉಳ್ಳಾಲದ ಧರ್ಮ ನಗರದ ನಿವಾಸಿ ದಾವೂದ್ ಶುಕ್ರವಾರ ತಲಪಾಡಿ-ದೇವಿಪುರ ರಸ್ತೆ ಬಳಿ ಎದುರಾಳಿ ತಂಡದ ಸದಸ್ಯರ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದಾಗ ಬಂಧಿಸಲಾಯಿತು ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ತಿಳಿಸಿದ್ದಾರೆ.

ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನರೇಂದ್ರ ನೇತೃತ್ವದ ತಂಡ ದಾವೂದ್ ನನ್ನು ಬಂಧಿಸಲು ಯತ್ನಿಸಿದಾಗ ಆತ ಅಧಿಕಾರಿಗಳ ಮೇಲೆ ಮಚ್ಚಿನಿಂದ ದಾಳಿ ಮಾಡಿದ್ದು, ನರೇಂದ್ರ ಮತ್ತು ಇತರರನ್ನು ಗಾಯಗೊಳಿಸಿದ್ದಾರೆ. ಹೀಗಿದ್ದರೂ ತಂಡ ಆತನನ್ನು ಉಳ್ಳಾಲ ಠಾಣೆಗೆ ಸ್ಥಳಾಂತರ ಮಾಡಿದೆ. ದಾವೂದ್ ಈಗ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 352, 109(1), 121(1), 121(2), 115(2), 132, 3(5), ಮತ್ತು 351(1) ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಎದುರಿಸುತ್ತಿದ್ದಾನೆ.

ದಾವೂದ್ ಕೊಲೆ ಸೇರಿದಂತೆ ಹಲವಾರು ಘೋರ ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ ಮತ್ತು ಉಳ್ಳಾಲ, ಮಂಗಳೂರು ದಕ್ಷಿಣ ಮತ್ತು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಮಿನಲ್ ದಾಖಲೆ ಹೊಂದಿದ್ದು, ಉಳ್ಳಾಲವೊಂದರಲ್ಲಿಯೇ ಕನಿಷ್ಠ 10 ಪ್ರಕರಣಗಳು ದಾವೂದ್ ವಿರುದ್ಧ ದಾಖಲಾಗಿವೆ ಎಂದು ಕಮಿಷನರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!