ಅನ್ನಪೂರ್ಣ ತುಕಾರಾಂ 
ರಾಜ್ಯ

ಮೂಲ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ; ಕ್ಷೇತ್ರಕ್ಕೆ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ತರುವುದು ನನ್ನ ಗುರಿ: ಅನ್ನಪೂರ್ಣ ತುಕಾರಾಂ (ಸಂದರ್ಶನ)

Manjula VN

ಬೆಂಗಳೂರು: ಬಳ್ಳಾರಿ ಜಿಲ್ಲೆ ಸಂಡೂರು ಎಸ್‌ಟಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇ. ಅನ್ನಪೂರ್ಣ ಗೆಲುವು ಸಾಧಿಸಿದ್ದು, ಪತಿ ಮತ್ತು ಸಂಸದ ಇ. ತುಕಾರಾಂ ಅವರ ರಾಜೀನಾಮೆಯಿಂದ ತೆರವಾಗಿದ್ದ ಕ್ಷೇತ್ರವನ್ನು ಕಾಂಗ್ರೆಸ್‌ ಮತ್ತೆ ತನ್ನದಾಗಿಸಿಕೊಂಡಿದೆ.

ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರ ಪ್ರಬಲ ಪೈಪೋಟಿಯ ನಡುವೆಯೂ ಗೆಲುವಿನ ನಗೆ ಬೀರುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ. ಆ ಮೂಲಕ, ಸಂಡೂರು ಕಾಂಗ್ರೆಸ್‌ನ ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಅನ್ನಪೂರ್ಣ ತೂಕಾರಾಂ ಅವರು, ಕ್ಷೇತ್ರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವ ಗುರಿಯನ್ನು ಹೊಂದಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಉತ್ಸುಕರಾಗಿದ್ದಾರೆ.

ಚುನಾವಣಾ ಯಶಸ್ಸು ಮತ್ತು ಸಂಡೂರಿನ ಯೋಜನೆಗಳ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದು, ಸಂದರ್ಶನದ ಕೆಲ ಆಯ್ದ ಭಾಗಗಳು ಇಂತಿವೆ...

ಸಂಡೂರಿನ ಅಭಿವೃದ್ಧಿಗೆ ನಿಮ್ಮ ಯೋಜನೆಗಳೇನು?

ಸುರಕ್ಷಿತ ಕುಡಿಯುವ ನೀರು ಒದಗಿಸುವುದು, ರಸ್ತೆಗಳನ್ನು ಸುಧಾರಿಸುವುದು ಮತ್ತು ಸಮಯೋಚಿತ ಬಸ್ ಸೇವೆಯನ್ನು ಖಚಿತಪಡಿಸಿಕೊಳ್ಳುವುದು ಮುಂತಾದ ಮೂಲಭೂತ ಸೌಕರ್ಯಗಳನ್ನು ಪರಿಹರಿಸುವತ್ತ ನನ್ನ ಗಮನವಿದೆ. ಸಂಡೂರು ಕ್ಷೇತ್ರದ ಜನತೆ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಿವು. ಹೆಚ್ಚುವರಿಯಾಗಿ, ಸಂಡೂರಿನಲ್ಲಿ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವುದು ನನ್ನ ಗುರಿಯಾಗಿದೆ. ನನ್ನ ಅಧಿಕಾರಾವಧಿಯಲ್ಲಿ ಇದನ್ನು ನನಸಾಗಿಸಲು ಬದ್ಧಳಾಗಿದ್ದೇನೆ.

ನೀವು ರಾಜಕೀಯ ಕುಟುಂಬದಿಂದ ಬಂದವರು. ಶಾಸಕರಾಗಿ ನಿಮ್ಮ ಹೊಸ ಜವಾಬ್ದಾರಿಗೆ ಇದು ಸಹಾಯ ಮಾಡುತ್ತದೆಯೇ?

ರಾಜಕೀಯ ಕುಟುಂಬದಿಂದ ಬಂದಿರುವುದು ಹೆಮ್ಮೆಯ ವಿಷಯ, ಇದು ನನ್ನ ರಾಜಕೀಯ ಪ್ರಯಾಣದಲ್ಲಿ ನನಗೆ ಸಹಾಯ ಮಾಡುತ್ತದೆ. ಬಳ್ಳಾರಿ ಸಂಸದರಾಗಿರುವ ನನ್ನ ಪತಿ ಇ ತುಕಾರಾಂ ಅವರು ಸಂಡೂರು ಕ್ಷೇತ್ರದಲ್ಲಿ (ಎಸ್‌ಟಿಗೆ ಮೀಸಲು) ನಾಲ್ಕು ಬಾರಿ ಶಾಸಕರಾಗಿದ್ದರು. ಸಾರ್ವಜನಿಕ ಸೇವೆಯಲ್ಲಿ ಅವರ ಬದ್ಧತೆಯನ್ನು ನಾನು ನೋಡಿದ್ದೇನೆ. ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಅವರ ಅನುಭವ ನನಗೆ ಮಾರ್ಗದರ್ಶನ ನೀಡುತ್ತದೆ. ಅವರು ಯಾವಾಗಲೂ ನನ್ನ ಬೆಂಬಲಕ್ಕೆ ನಿಂತಿದ್ದು, ಅತ್ಯಮೂಲ್ಯ ಸಲಹೆಗಳನ್ನು ನೀಡುತ್ತಾರೆ.

ಪ್ರಚಾರದ ವೇಳೆ ಸಿಎಂ, ಸಂಪುಟ ಸಚಿವರು ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ಕೆಲಸ ಮಾಡಿದ ಅನುಭವ ಹೇಗಿತ್ತು?

ನಿಜವಾಗಿಯೂ ರೋಮಾಂಚನಕಾರಿ ಅನುಭವವಾಗಿತ್ತು. ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ನೆಲಮಟ್ಟದ ತೊಡಗಿಸಿಕೊಳ್ಳುವಿಕೆ ಅತ್ಯಗತ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ದಿನ ಸಂಡೂರಿನಲ್ಲಿ ಮೊಕ್ಕಾಂ ಹೂಡಿ 15ಕ್ಕೂ ಹೆಚ್ಚು ರ್ಯಾಲಿಗಳಲ್ಲಿ ಭಾಗವಹಿಸಿದ್ದು ನನ್ನ ಗೆಲುವಿನ ಮೇಲೆ ಮಹತ್ವದ ಪ್ರಭಾವ ಬೀರಿದೆ. ಸಂತೋಷ್ ಲಾಡ್ ಮೊದಲ ದಿನದಿಂದ ಶ್ರಮಿಸಿದರು, ಸಮುದಾಯದ ಮುಖಂಡರೊಂದಿಗೆ ಸಭೆಗಳನ್ನು ನಡೆಸಿದರು ಮತ್ತು ರ್ಯಾಲಿಗಳನ್ನು ಆಯೋಜಿಸಿದರು. ಅವರ ಅನುಭವ ಮತ್ತು ಪ್ರಯತ್ನಗಳು ಚುನಾವಣಾ ಫಲಿತಾಂಶದ ಮೇಲೆ ಹೆಚ್ಚು ಪ್ರಭಾವ ಬೀರಿವೆ. ಅಂತಿಮವಾಗಿ, 24x7 ಕೆಲಸ ಮಾಡಿದ ಕಾಂಗ್ರೆಸ್ ಕಾರ್ಯಕರ್ತರ ಅವಿರತ ಪ್ರಯತ್ನದಿಂದ ನನ್ನ ಗೆಲುವು ಸಾಧ್ಯವಾಯಿತು. ನನ್ನ ಯಶಸ್ಸಿಗೆ ಇವರೇ ಕಾರಣ.

ಬಿಜೆಪಿ ಕುಟುಂಬ ರಾಜಕಾರಣವನ್ನು ಟೀಕಿಸಿದೆ...ಇತ್ತೀಚಿನ ಉಪಚುನಾವಣೆಗಳಲ್ಲಿ ಮತದಾರರು ಇಬ್ಬರು ಸಿಎಂಗಳ ಪುತ್ರರನ್ನು ತಿರಸ್ಕರಿಸಿದ್ದಾರೆ. ಸಂಡೂರು ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು ಹೇಗೆ?

ಶಿಗ್ಗಾಂವಿ ಮತ್ತು ಚನ್ನಪಟ್ಟಣದ ಮತದಾರರ ಆಯ್ಕೆಯ ಬಗ್ಗೆ ನಾನು ಪ್ರತಿಕ್ರಿಯಿಸಲಾರೆ. ಆದರೆ ಉಪಚುನಾವಣೆಯಲ್ಲಿ ಇಬ್ಬರು ಸಿಎಂ ಪುತ್ರರು ಸೋತಿದ್ದು ನಿಜ. ಬಹುಶಃ ಬಿಜೆಪಿ ಮತ್ತು ಜೆಡಿಎಸ್‌ನ ಕಾರ್ಯತಂತ್ರಗಳು ಆ ಕ್ಷೇತ್ರಗಳ ಮತದಾರರಿಗೆ ಇಷ್ಟವಾಗಿಲ್ಲ. ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಉಪಕ್ರಮಗಳು ಮತ್ತು ನಮ್ಮ ಐದು ಗ್ಯಾರಂಟಿ ಯೋಜನೆಗಳು ಸಂಡೂರಿನಲ್ಲಿ ನಮ್ಮ ಗೆಲುವನ್ನು ಖಾತ್ರಿಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿವೆ ಎಂಬುದನ್ನು ನಾನು ದೃಢವಾಗಿ ನಂಬುತ್ತೇನೆಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT