ಸಂಗ್ರಹ ಚಿತ್ರ PTI
ರಾಜ್ಯ

ಪುತ್ತೂರು: ದಲಿತ ಕೂಲಿ ಕಾರ್ಮಿಕನ ಮೃತದೇಹ ರಸ್ತೆ ಬದಿಯಲ್ಲಿ ಇರಿಸಿದ್ದ ಪ್ರಕರಣ; ನಾಲ್ವರ ಬಂಧನ

ತೌರೋ ಸಿಮೆಂಟ್ ಫ್ಯಾಬ್ರಿಕೇಷನ್ ಘಟಕದಲ್ಲಿ ಸಹಾಯಕ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದ ಸುಳ್ಯದ ಕೆರೆಮೂಲೆ ನಿವಾಸಿ ಶಿವಪ್ಪ (70) ನವೆಂಬರ್ 16ರಂದು ಕೆಲಸದ ಸಮಯದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದರು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ದಲಿತ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ತೌರೋ ಸಿಮೆಂಟ್ ಫ್ಯಾಬ್ರಿಕೇಷನ್ ಘಟಕದಲ್ಲಿ ಸಹಾಯಕ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದ ಸುಳ್ಯದ ಕೆರೆಮೂಲೆ ನಿವಾಸಿ ಶಿವಪ್ಪ (70) ನವೆಂಬರ್ 16ರಂದು ಕೆಲಸದ ಸಮಯದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದರು.

ವೈದ್ಯಕೀಯ ನೆರವು ನೀಡದೆ ಅವರ ಕುಟುಂಬಕ್ಕೆ ತಿಳಿಸುವ ಬದಲು, ಕಾರ್ಖಾನೆಯ ಮಾಲೀಕ ಹೆನ್ರಿ ಟೌರೊ, ಶಿವಪ್ಪನ ದೇಹವನ್ನು ಪಿಕಪ್ ಟ್ರಕ್‌ಗೆ ತುಂಬಿ ಅವರ ಮನೆಯ ಬಳಿ ಎಸೆದು ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯು ಪುತ್ತೂರಿನ ಆದಿ ದ್ರಾವಿಡ ಸಮಾಜ ಸೇವಾ ಸಂಘ ಸೇರಿದಂತೆ ಪುತ್ತೂರಿನ ದಲಿತ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಸಮಗ್ರ ತನಿಖೆಗೆ ಆಗ್ರಹಿಸಿದ್ದವು.

ಆರೋಪಿಗಳನ್ನು ಬಂಧಿಸುವಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಪ್ರತಿಭಟನೆಗಳ ಮೂಲಕ ಸಾರ್ವಜನಿಕ ಒತ್ತಡವನ್ನು ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ತೌರೊ, ಆತನ ಮಗ ಕಿರಣ್, ಸಹಾಯಕ ಪ್ರಕಾಶ್ ಮತ್ತು ಸ್ಟ್ಯಾನಿ ಎಂಬ ಮೇಸ್ತ್ರಿಯನ್ನು ಬಂಧಿಸಲಾಗಿದೆ.

ಶಿವಪ್ಪ ಅವರ ಅಳಿಯ ನೀಡಿದ ದೂರಿನ ಪ್ರಕಾರ ಆರೋಪಿಗಳು ನ.16 ರಂದು ಸಂಜೆ ಶಿವಪ್ಪನನ್ನು ರಸ್ತೆ ಬದಿ ಎಸೆದು ಹೋಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಗಲೇ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮೃತದೇಹಕ್ಕೆ ಅಗೌವರ ತೋರಿದ ಆರೋಪಗಳನ್ನು ಪರಿಶೀಲಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO

LeT ಜೊತೆಗೆ ಒಪ್ಪಂದ; ಹಮಾಸ್ 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿ; ಭಾರತಕ್ಕೆ ಇಸ್ರೇಲ್ ಒತ್ತಾಯ!

ಮದುವೆ ರದ್ದು ಬೆನ್ನಲ್ಲೇ ಪರಸ್ಪರ 'ಅನ್‌ಫಾಲೋ' ಮಾಡಿಕೊಂಡ ಸ್ಮೃತಿ ಮಂಧಾನ, ಪಲಾಶ್ ಮುಚ್ಚಲ್!

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!

KSCA ಚುನಾವಣೆ: 191 ಮತಗಳ ಅಂತರದಿಂದ ಗೆದ್ದ ವೆಂಕಟೇಶ್ ಪ್ರಸಾದ್; ನೂತನ ಅಧ್ಯಕ್ಷರಾಗಿ ಆಯ್ಕೆ

SCROLL FOR NEXT