ಸಿಎಂ ಸಿದ್ದರಾಮಯ್ಯ 
ರಾಜ್ಯ

ಶಾಲಾ, ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯ: ಸಿಎಂ ಸಿದ್ದರಾಮಯ್ಯ

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಎಲ್ಲ ಮಕ್ಕಳಿಗೂ ಸಂವಿಧಾನ ಅರ್ಥವಾಗಬೇಕು. ಹೀಗಾಗಿ ಶಾಲೆಗಳಲ್ಲೇ ಸಂವಿಧಾನ ಪೀಠಿಕೆ ಓದಿಸುತ್ತಿದ್ದೇವೆ ಎಂದರು.

ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಎಲ್ಲ ಮಕ್ಕಳಿಗೂ ಸಂವಿಧಾನ ಅರ್ಥವಾಗಬೇಕು. ಹೀಗಾಗಿ ಶಾಲೆಗಳಲ್ಲೇ ಸಂವಿಧಾನ ಪೀಠಿಕೆ ಓದಿಸುತ್ತಿದ್ದೇವೆ ಎಂದರು.

ಸಂವಿಧಾನ ಅಂಗೀಕಾರವಾಗಿ ಇಂದಿಗೆ 75 ವರ್ಷ ಆಯ್ತು. ಈ ದಿನವನ್ನು ನಾವು ಸಂವಿಧಾನ ದಿನ ಎಂದು ಆಚರಣೆ ಮಾಡುತ್ತಿದ್ದೇವೆ. ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಸಂಸ್ಥೆಗಳು ಸಂವಿಧಾನದಡಿಯಲ್ಲೇ ನಡೆಯಬೇಕು ಎಂದರು.

ಸಂವಿಧಾನ ಜಾರಿಗೆ ಬಂದು ಮುಂದಿನ ವರ್ಷ ಜನವರಿಗೆ 75 ವರ್ಷ ತುಂಬಲಿದೆ. ದೀರ್ಘಕಾಲದ ಶಾಂತಿಯಲ್ಲಿರುವ ಸಂವಿಧಾನ ಎಂದರೆ ಅದು ಭಾರತದ ಸಂವಿಧಾನ. ಸಂವಿಧಾನ ಎಷ್ಟೇ ಚೆನ್ನಾಗಿದ್ದರೂ ಒಳ್ಳೆಯವರ ಕೈಯಲ್ಲಿ ಇದ್ದರೆ ಒಳ್ಳೆಯದಾಗುತ್ತದೆ. ಕೆಟ್ಟವರ ಕೈಯಲ್ಲಿ ‌ಇದ್ದರೆ ಕೆಟ್ಟದಾಗುತ್ತೆ ಅಂತ ಬಿಆರ್​ ಅಂಬೇಡ್ಕರ್​ ಅವರು ಹೇಳಿದ್ದಾರೆ ಎಂದು ಸಿಎಂ ತಿಳಿಸಿದರು.

ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳಿದ್ದರು. ವೀರ್​ ಸಾವರ್ಕರ್, ಆರ್​ಎಸ್​ಎಸ್​ನ ಸರ ಸಂಘಚಾಲಕರಾಗಿದ್ದ ಎಂಎಸ್​ ಗೋಲ್ವಾಲ್ಕರ್ ವಿರೋಧ ಮಾಡಿದ್ದರು. ಜಗತ್ತಿನ ಅನೇಕ ರಾಷ್ಟ್ರಗಳ ಸಂವಿಧಾನದ ಅಭ್ಯಾಸ, ಅನುಭವದ ಆಧಾರದ ಮೇಲೆ ಸಂವಿಧಾನ ರಚನೆ ಮಾಡಲಾಗಿದೆ. ಇದು ಲಿಖಿತ ಸಂವಿಧಾನ. ಇದಕ್ಕಿಂತ ಮೊದಲು ಅಲಿಖಿತ ಸಂವಿಧಾನ ಇತ್ತು. ಅದು ಒಬ್ಬರು ಮತ್ತೊಬ್ಬರನ್ನು ದ್ವೇಷಿಸುವ ರೀತಿ ಇತ್ತು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT