ಸಿಎಂ ಸಿದ್ದರಾಮಯ್ಯ 
ರಾಜ್ಯ

ಶಾಲಾ, ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯ: ಸಿಎಂ ಸಿದ್ದರಾಮಯ್ಯ

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಎಲ್ಲ ಮಕ್ಕಳಿಗೂ ಸಂವಿಧಾನ ಅರ್ಥವಾಗಬೇಕು. ಹೀಗಾಗಿ ಶಾಲೆಗಳಲ್ಲೇ ಸಂವಿಧಾನ ಪೀಠಿಕೆ ಓದಿಸುತ್ತಿದ್ದೇವೆ ಎಂದರು.

ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಎಲ್ಲ ಮಕ್ಕಳಿಗೂ ಸಂವಿಧಾನ ಅರ್ಥವಾಗಬೇಕು. ಹೀಗಾಗಿ ಶಾಲೆಗಳಲ್ಲೇ ಸಂವಿಧಾನ ಪೀಠಿಕೆ ಓದಿಸುತ್ತಿದ್ದೇವೆ ಎಂದರು.

ಸಂವಿಧಾನ ಅಂಗೀಕಾರವಾಗಿ ಇಂದಿಗೆ 75 ವರ್ಷ ಆಯ್ತು. ಈ ದಿನವನ್ನು ನಾವು ಸಂವಿಧಾನ ದಿನ ಎಂದು ಆಚರಣೆ ಮಾಡುತ್ತಿದ್ದೇವೆ. ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಸಂಸ್ಥೆಗಳು ಸಂವಿಧಾನದಡಿಯಲ್ಲೇ ನಡೆಯಬೇಕು ಎಂದರು.

ಸಂವಿಧಾನ ಜಾರಿಗೆ ಬಂದು ಮುಂದಿನ ವರ್ಷ ಜನವರಿಗೆ 75 ವರ್ಷ ತುಂಬಲಿದೆ. ದೀರ್ಘಕಾಲದ ಶಾಂತಿಯಲ್ಲಿರುವ ಸಂವಿಧಾನ ಎಂದರೆ ಅದು ಭಾರತದ ಸಂವಿಧಾನ. ಸಂವಿಧಾನ ಎಷ್ಟೇ ಚೆನ್ನಾಗಿದ್ದರೂ ಒಳ್ಳೆಯವರ ಕೈಯಲ್ಲಿ ಇದ್ದರೆ ಒಳ್ಳೆಯದಾಗುತ್ತದೆ. ಕೆಟ್ಟವರ ಕೈಯಲ್ಲಿ ‌ಇದ್ದರೆ ಕೆಟ್ಟದಾಗುತ್ತೆ ಅಂತ ಬಿಆರ್​ ಅಂಬೇಡ್ಕರ್​ ಅವರು ಹೇಳಿದ್ದಾರೆ ಎಂದು ಸಿಎಂ ತಿಳಿಸಿದರು.

ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳಿದ್ದರು. ವೀರ್​ ಸಾವರ್ಕರ್, ಆರ್​ಎಸ್​ಎಸ್​ನ ಸರ ಸಂಘಚಾಲಕರಾಗಿದ್ದ ಎಂಎಸ್​ ಗೋಲ್ವಾಲ್ಕರ್ ವಿರೋಧ ಮಾಡಿದ್ದರು. ಜಗತ್ತಿನ ಅನೇಕ ರಾಷ್ಟ್ರಗಳ ಸಂವಿಧಾನದ ಅಭ್ಯಾಸ, ಅನುಭವದ ಆಧಾರದ ಮೇಲೆ ಸಂವಿಧಾನ ರಚನೆ ಮಾಡಲಾಗಿದೆ. ಇದು ಲಿಖಿತ ಸಂವಿಧಾನ. ಇದಕ್ಕಿಂತ ಮೊದಲು ಅಲಿಖಿತ ಸಂವಿಧಾನ ಇತ್ತು. ಅದು ಒಬ್ಬರು ಮತ್ತೊಬ್ಬರನ್ನು ದ್ವೇಷಿಸುವ ರೀತಿ ಇತ್ತು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT