ಸಂವಿಧಾನ ಪ್ರಸ್ತಾವನೆ 
ರಾಜ್ಯ

ಸಂವಿಧಾನ ದಿನ: ಬೆಂಗಳೂರು ಸೇರಿದಂತೆ ರಾಜ್ಯದ 10 ನಗರಗಳಲ್ಲಿ ಸಂವಿಧಾನ ಪೀಠಿಕೆ ಪ್ರತಿಕೃತಿ ನಿರ್ಮಾಣ

ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಸಂವಿಧಾನದ ಸಂದೇಶವನ್ನು ತಿಳಿಸಲು ಸಮಾಜ ಕಲ್ಯಾಣ ಇಲಾಖೆಯು ಈ ರೀತಿಯ ಮೊದಲ ಕ್ರಮ ಕೈಗೊಂಡಿದ್ದು, ಇದಕ್ಕಾಗಿ 3 ಕೋಟಿ ರೂ. ವೆಚ್ಚ ಮಾಡಲು ಉದ್ದೇಶಿಸಿದೆ.

ಶಿವಮೊಗ್ಗ: ಸಂವಿಧಾನದ ಅರಿವು ಮೂಡಿಸುವ ಪ್ರಯತ್ನದ ಭಾಗವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 10 ನಗರಗಳ ಪ್ರಮುಖ ಉದ್ಯಾನವನಗಳಲ್ಲಿ ಸಂವಿಧಾನ ಪೀಠಿಕೆ ಪ್ರತಿಕೃತಿ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಸಂವಿಧಾನದ ಸಂದೇಶವನ್ನು ತಿಳಿಸಲು ಸಮಾಜ ಕಲ್ಯಾಣ ಇಲಾಖೆಯು ಈ ರೀತಿಯ ಮೊದಲ ಕ್ರಮ ಕೈಗೊಂಡಿದ್ದು, ಇದಕ್ಕಾಗಿ 3 ಕೋಟಿ ರೂ. ವೆಚ್ಚ ಮಾಡಲು ಉದ್ದೇಶಿಸಿದೆ.

ಬೆಂಗಳೂರು, ಶಿವಮೊಗ್ಗ, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ತುಮಕೂರು ಮತ್ತು ವಿಜಯಪುರದಲ್ಲಿ ಈ ಪ್ರತಿಕೃತಿ ನಿರ್ಮಾಣ ಮಾಡಲಾಗುತ್ತಿದೆ. ಇದು 10 ಅಡಿ ಎತ್ತರ ಮತ್ತು 6 ಅಡಿ ಅಗಲವಿದ್ದು, ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಇರಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಎಲ್.ನರಸಿಂಹಮೂರ್ತಿ ಸರಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರತಿಕೃತಿ ನಿರ್ಮಿಸಲು ಮತ್ತು ಸಂವಿಧಾನದ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಪ್ರತಿ ನಗರ ಪಾಲಿಕೆಗೆ ರೂ.25 ಲಕ್ಷ ಮತ್ತು ಬಿಬಿಎಂಪಿಗೆ 50 ಲಕ್ಷ ರೂ. ನೀಡಲಾಗುತ್ತಿದೆ.

ಶಿವಮೊಗ್ಗದ ಅಲ್ಲಮಪ್ರಭು ಫ್ರೀಡಂ ಪಾರ್ಕ್‌ನಲ್ಲಿ ಇಟ್ಟಿಗೆ ಮತ್ತು ಗ್ರಾನೈಟ್ ಬಳಸಿ ಪ್ರತಿಕೃತಿ ನಿರ್ಮಿಸಲಾಗುತ್ತಿದೆ. ಮುಂದಿನ ವರ್ಷ ಗಣರಾಜ್ಯೋತ್ಸವದಂದು ಸಂವಿಧಾನ ಪೀಠಿಕೆ ಪ್ರತಿಕೃತಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲೇಶಪ್ಪ ಡಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಜೂನ್ 2023 ರಲ್ಲಿ ರಾಜ್ಯ ಸರ್ಕಾರವು ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಪ್ರತಿದಿನ ಓದುವುದನ್ನು ಕಡ್ಡಾಯಗೊಳಿಸಿ ಆದೇಶವನ್ನು ಹೊರಡಿಸಿತು. ಎಲ್ಲಾ ಸರ್ಕಾರಿ ಕಛೇರಿಗಳಲ್ಲೂ ಪ್ರಸ್ತಾವನೆಯನ್ನು ಪ್ರದರ್ಶಿಸಲಾಗುತ್ತಿದೆ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ರಾಜ್ಯ ಸರ್ಕಾರ ಸಂವಿಧಾನ ಪೀಠಿಕೆ ಓದುವ ಮೆಗಾ ಕಾರ್ಯಕ್ರಮವನ್ನು ಆಯೋಜಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT