ಮಕ್ಕಳ ಹಕ್ಕುಗಳ ಸಂಸತ್ ಕಾರ್ಯಕ್ರಮ 
ರಾಜ್ಯ

ಮಕ್ಕಳ ಹಕ್ಕುಗಳ ಸಂಸತ್ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಗೈರು: ನಿರಾಸೆಗೊಂಡ ಚಿಣ್ಣರು

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಬದಲಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಜರಾಗಿದ್ದರು. ಈ ವೇಳೆ ವಿದ್ಯಾರ್ಥಿಗಳ ಸಲಹೆ ಹಾಗೂ ಮನವಿಯನ್ನು ಆಲಿಸಿ ಸ್ಪಂದನೆ ನೀಡಿದರು.

ಬೆಂಗಳೂರು: ಕರ್ನಾಟಕ ಮಕ್ಕಳ ಹಕ್ಕುಗಳ ವೀಕ್ಷಣಾಲಯ ಆಯೋಜಿಸಿದ್ದ ಮಕ್ಕಳ ಹಕ್ಕುಗಳ ಸಂಸತ್ ಸಮಾಲೋಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೈರು ಹಾಜರಾದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ರಾಜ್ಯದ 25 ಜಿಲ್ಲೆಗಳ 62 ವಿದ್ಯಾರ್ಥಿಗಳು ನಿರಾಸೆಗೊಂಡರು.

ಗೈರು ಹಾಜರು ಕುರಿತು ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಕಾರ್ಯಕ್ರಮದ ಬಗ್ಗೆ ಆಯೋಜಕರು ನನಗೆ ಮಾಹಿತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ.

ಈ ನಡುುವೆ ಸಮಾಲೋಚನೆ ವೇಳೆ ಮಕ್ಕಳು, ಶಿಕ್ಷಣ, ಆರೋಗ್ಯ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿದರು.

ಗ್ರಾಮೀಣ ಮತ್ತು ಗಡಿಭಾಗದ ಶಾಲೆಗಳಲ್ಲಿ ವಿಶೇಷವಾಗಿ ಗಣಿತ ಮತ್ತು ವಿಜ್ಞಾನ ವಿಷಯಗಳ ಶಿಕ್ಷಕರ ಕೊರತೆ ವಿಚಾರ ಪ್ರಸ್ತಾಪಿಸಿ ಹಲವರ ಗಮನಸೆಳೆದರು, ಇದು ಶೈಕ್ಷಣಿಕ ಹಿನ್ನಡೆಗೆ ಕಾರಣವಾಗಿದ್ದು, ಈ ಕೊರತೆಗಳನ್ನು ನೀಗಿಸಲು ಕೂಡಲೇ ನೇಮಕಾತಿ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿಕೊಂಡರು.

ಅಪೌಷ್ಟಿಕತೆಯಿಂದ ಬಳಲುತ್ತಿರುವ ವಿದ್ಯಾರ್ಥಿನಿಯರಿಗೆ ಕಿಶೋರಿ ಯೋಜನೆಯಿಂದ ಅನುಕೂಲವಾಗಿದ್ದು, ರಕ್ತಹೀನತೆಯನ್ನು ತಡೆಗಟ್ಟುವಲ್ಲಿ ಮತ್ತು ಆರೋಗ್ಯವನ್ನು ಸುಧಾರಿಸುವಲ್ಲಿ ಸಕಾರಾತ್ಮಕ ಪರಿಣಾಮ ಬೀರಿದೆ. ಹೀಗಾಗಿ ಸರ್ಕಾರ ಯೋಜನೆಯನ್ನು ಪುನರಾರಂಭಿಸಬೇಕೆಂದು ವಿದ್ಯಾರ್ಥಿಯೊಬ್ಬರು ಸರ್ಕಾರವನ್ನು ಒತ್ತಾಯಿಸಿದರು.

ಹಾಸನ ಜಿಲ್ಲೆಯ ಪೂರ್ವಿಕಾ ಎಂಬ ಬಾಲಕಿ, ಹವಾಮಾನ ಬದಲಾವಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಶಿಕ್ಷಣ ಮತ್ತು ದೈನಂದಿನ ಜೀವನದ ಮೇಲೆ ಅದರ ದುಷ್ಪರಿಣಾಮಗಳನ್ನು ವಿವರಿಸಿದರು.

ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಮತ್ತು ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಸೌರ ಮತ್ತು ಪವನ ಶಕ್ತಿಯಂತಹ ನವೀಕರಿಸಬಹುದಾದ ಇಂಧನ ಯೋಜನೆಗಳನ್ನು ಪ್ರೋತ್ಸಾಹಿಸಲು ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು. ಇದಲ್ಲದೆ, ಪರಿಸರ ಸ್ನೇಹಿ ಸ್ಯಾನಿಟರಿ ಪ್ಯಾಡ್ ಬಗ್ಗೆಯೂ ವಿದ್ಯಾರ್ಥಿಗಳು ಸಮಾಲೋಚನೆ ನಡೆಸಿದರು.

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಬದಲಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಜರಾಗಿದ್ದರು. ಈ ವೇಳೆ ವಿದ್ಯಾರ್ಥಿಗಳ ಸಲಹೆ ಹಾಗೂ ಮನವಿಯನ್ನು ಆಲಿಸಿ ಸ್ಪಂದನೆ ನೀಡಿದರು. ಇದೇ ವೇಳೆ ಸಿಎಂ ಗೈರುಹಾಜರಾಗಿದ್ದಕ್ಕೆ ಕೆಲ ಮಕ್ಕಳು ಬೇಸರ ವ್ಯಕ್ತಪಡಿಸಿದ್ದರು ಅಲ್ಲದೆ, ಮುಖ್ಯಮಂತ್ರಿಗಳಿದ್ದಿದ್ದರೆ ಮತ್ತಷ್ಟು ಪ್ರಶ್ನೆಗಳನ್ನು ಕೇಳಬಹುತಿತ್ತು ಎಂದು ಹೇಳಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT