ಮೃತ ಮಹಿಳೆ. 
ರಾಜ್ಯ

ಬೆಂಗಳೂರು: ಸ್ನಾನಕ್ಕೆ ತೆರಳಿದ್ದ ಮಹಿಳೆ ನಿಗೂಢ ಸಾವು; ತನಿಖೆ ಆರಂಭ

ಸ್ನಾನಕ್ಕೆ ಹೋದ ಆಕೆ ಎಷ್ಟು ಹೊತ್ತಾದರೂ ಹೊರಗೆ ಬರಲಿಲ್ಲ. ಬೆಳಿಗ್ಗೆ 9:55 ರ ಸುಮಾರಿಗೆ ಹೋಗಿ ಮಾತನಾಡಿಸಿದಾಗ ಪ್ರತಿಕ್ರಿಯೆ ಬರಲಿಲ್ಲ.

ಬೆಂಗಳೂರು: ನೆಲಮಂಗಲದಲ್ಲಿರುವ ತನ್ನ ಸಂಬಂಧಿಯನ್ನು ಭೇಟಿ ಮಾಡಲು ಬಂದಿದ್ದ ಆಂಧ್ರಪ್ರದೇಶದ ತಿರುಪತಿ ಮೂಲದ ಮಹಿಳೆಯೊಬ್ಬರು ಸ್ನಾನಗೃಹದಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.

ಮೃತ ಮಹಿಳೆಯನ್ನು ಲಕ್ಷ್ಮೀ (25) ಎಂದು ಗುರ್ತಿಸಲಾಗಿದೆ. ಆಂಧ್ರದ ತಿರುಪತಿಯಿಂದ ಅಡೇಪೇಟೆಯಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಲಕ್ಷ್ಮೀ ಅವರು ಪತ್ನಿ ವೆಂಕಟರಮಣ ಅವರೊಂದಿಗೆ ಬಂದಿದ್ದಾರೆ. ಕುಟುಂಬವು ಮಲ್ಲೇಶ್ವರಂನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಬೇಕಿತ್ತು. ಬೆಳಗ್ಗೆ 9.30ರ ಸುಮಾರಿಗೆ ಸ್ನಾನ ಮಾಡಲು ಲಕ್ಷ್ಮೀ ಸ್ನಾನಗೃಹಕ್ಕೆ ತೆರಳಿದ್ದಾರೆ.

25 ನಿಮಿಷ ಕಳೆದರೂ ಆಕೆ ಹೊರಗೆ ಬಾರದಿದ್ದಾಗ ಪತಿ ತಪಾಸಣೆಗೆ ಹೋಗಿ ನೋಡಿದಾಗ ಪ್ರಜ್ಞೆ ತಪ್ಪಿ ಬಿದ್ದಿರುವುದು ಕಂಡು ಬಂದಿದೆ. ಕೂಡಲೇ ಆಕೆಯನ್ನು ಆಂಬ್ಯುಲೆನ್ಸ್‌ನಲ್ಲಿ ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ವೈದ್ಯರು ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ವೆಂಕಟರಮಣ ಅವರು, ಪತ್ನಿ ಹೇಗೆ ಸಾವನ್ನಪ್ಪಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಸ್ನಾನಕ್ಕೆ ಹೋದ ಆಕೆ ಎಷ್ಟು ಹೊತ್ತಾದರೂ ಹೊರಗೆ ಬರಲಿಲ್ಲ. ಬೆಳಿಗ್ಗೆ 9:55 ರ ಸುಮಾರಿಗೆ ಹೋಗಿ ಮಾತನಾಡಿಸಿದಾಗ ಪ್ರತಿಕ್ರಿಯೆ ಬರಲಿಲ್ಲ. ಬಾಗಿಲು ತೆಗೆದು ನೋಡಿದಾಗ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡು ಬಂದಿತು. ದೇಹವು ಸಂಪೂರ್ಣ ಕೋಲ್ಡ್ ಆಗಿತ್ತು. ನಾನು ಮತ್ತು ನನ್ನ ತಂಗಿ ಬಿಟ್ಟರೆ ಮನೆಯಲ್ಲಿ ಯಾರೂ ಇರಲಿಲ್ಲ. ಬಾತ್ ರೂಂನಲ್ಲಿ ಗ್ಯಾಸ್ ಗೀಸರ್ ಆಫ್ ಆಗಿತ್ತು. ಆದರೆ, ನನ್ನ ಹೆಂಡತಿಯ ಮುಖದಲ್ಲಿ ಗೀಚಿರುವ ಗುರುತುಗಳು ಕಂಡು ಬಂದಿತ್ತು ಎಂದು ಹೇಳಿದ್ದಾರೆ.

ಇದೀಗ ಸ್ಥಳಕ್ಕೆ ಎಫ್‌ಎಸ್‌ಎಲ್ ಮತ್ತು ಎಸ್‌ಒಸಿಒ ತಂಡಗಳು ಭೇಟಿ ನೀಡಿ ಮಾದರಿ ಮತ್ತು ಸುಳಿವುಗಳನ್ನು ಸಂಗ್ರಹಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಬಾತ್‌ರೂಮ್‌ನೊಳಗಿನ ಗ್ಯಾಸ್ ಗೀಸರ್‌ನಿಂದ ವಿಷಕಾರಿ ಕಾರ್ಬನ್ ಮಾನಾಕ್ಸೈಡ್ ಅನಿಲವನ್ನು ಉಸಿರಾಡಿದ್ದರಿಂದ ಆಕೆ ಸಾವನ್ನಪ್ಪಿರುವ ಸಾಧ್ಯತೆಗಳಿವೆ. ಆದರೆ, ಗೀಸರ್ ಆಫ್ ಆಗಿತ್ತು ಆಕೆಯ ಪತಿ ಹೇಳಿದ್ದಾರೆ. ಆಕೆಯ ಮುಖದ ಮೇಲಿನ ಗೀರುಗಳ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT