ಡಿ ಕೆ ಶಿವಕುಮಾರ್-ಸಿದ್ದರಾಮಯ್ಯ  
ರಾಜ್ಯ

ಆದಿವಾಸಿಗಳಿಗೆ ಮೂಲ ಸೌಕರ್ಯ, ಆಸ್ತಿ ಪತ್ರ ನೀಡಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಆದಿವಾಸಿಗಳಿಗೆ ಸೂಕ್ತ ವಸತಿ, ಕುಡಿಯುವ ನೀರು, ನೈರ್ಮಲ್ಯ, ರಸ್ತೆ ಸಂಪರ್ಕ ಮತ್ತು ವಿದ್ಯುತ್ ನೀಡಲು ಕ್ರಮಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಅರಣ್ಯದ ಅಂಚಿನಲ್ಲಿರುವ ಭೂಮಿಯನ್ನು ಗುರುತಿಸಿ ಅಭಿವೃದ್ಧಿ ಪಡಿಸಬೇಕು.

ಬೆಂಗಳೂರು: ಅರಣ್ಯದ ಅಂಚಿನಲ್ಲಿ ವಾಸಿಸುವ ಆದಿವಾಸಿಗಳಿಗೆ ಸೂಕ್ತ ಮೂಲ ಸೌಕರ್ಯ, ಹಾಗೂ ಆಸ್ತಿ ಮಾರಾಟ ಪತ್ರಗಳನ್ನು ನೀಡುವಂತೆ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸೂಚನೆ ನೀಡಿದರು.

ಸಚಿವ ಈಶ್ವರ ಬಿ ಖಂಡ್ರೆ ಮತ್ತು ಇತರ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಅವರು, ಆದಿವಾಸಿಗಳಿಗೆ ಸೂಕ್ತ ವಸತಿ, ಕುಡಿಯುವ ನೀರು, ನೈರ್ಮಲ್ಯ, ರಸ್ತೆ ಸಂಪರ್ಕ ಮತ್ತು ವಿದ್ಯುತ್ ನೀಡಲು ಕ್ರಮಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಅರಣ್ಯದ ಅಂಚಿನಲ್ಲಿರುವ ಭೂಮಿಯನ್ನು ಗುರುತಿಸಿ ಅಭಿವೃದ್ಧಿ ಪಡಿಸಬೇಕು. ನಿವೇಶನ ರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಡಿ ಮನೆ ಮಂಜೂರು ಮಾಡಲು ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

ಇದೇ ವೇಳೆ ಅಧಿಕಾರಿಗಳು ಮೈಸೂರಿನಲ್ಲಿ 2,963 ಕುಟುಂಬಗಳಿಗೆ ನಿವೇಶನ ಇಲ್ಲದಿರುವುದು, 1,222 ಕುಟುಂಬಗಳಿಗೆ ನಿವೇಶನಗಳಿವೆ, ಆದರೆ, ಮನೆಗಳಿಲ್ಲ. ಚಾಮರಾಜನಗರದಲ್ಲಿ 5,164 ಕುಟುಂಬಗಳು ಶಾಶ್ವತ ಮನೆಗಳನ್ನು ಹೊಂದಿವೆ. 234 ಕುಟುಂಬಗಳಿಗೆ ನಿವೇಶನ ಇಲ್ಲ, 2,761 ಕುಟುಂಬಗಳು ನಿವೇಶನ ಹೊಂದಿದ್ದರೂ ಮನೆಗಳಿಲ್ಲ, ಕೊಡಗಿನಲ್ಲಿ 2,882 ಕುಟುಂಬಗಳು ಶಾಶ್ವತ ಮನೆಗಳನ್ನು ಹೊಂದಿವೆ. ಅಲ್ಲದೆ, 1,050 ಕುಟುಂಬಗಳಿಗೆ ನಿವೇಶನಗಳಿಲ್ಲ ಮತ್ತು 1,182 ಕುಟುಂಬಗಳಿಗೆ ಮನೆಗಳಿಲ್ಲ ಎಂದು ಮಾಹಿತಿ ನೀಡಿದರು.

ಮೈಸೂರು ವಿಭಾಗದಲ್ಲಿ ಅರಣ್ಯದ ಅಂಚಿನಲ್ಲಿರುವ 194 ಕುಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿರುವ ಬಗ್ಗೆ ಸಿಎಂ ಗಮನಕ್ಕೆ ತಂದರು. ಅರಣ್ಯದೊಳಗಿನ 21 ಕುಗ್ರಾಮಗಳ ಪೈಕಿ ಮೂರಕ್ಕೆ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದು ಹೇಳಿದರು.ಈ ವೇಳೆ ಮುಖ್ಯಮಂತ್ರಿಗಳು ತಾಂತ್ರಿಕ ಅಡೆತಡೆಗಳನ್ನು ನಿವಾರಿಸಿ ಅರ್ಹರಿಗೆ ಹಕ್ಕುಪತ್ರ ನೀಡುವಂತೆ ಸೂಚಿಸಿದರು.

ಅರಣ್ಯ ಇಲಾಖೆಯು ಅರಣ್ಯ ಹಕ್ಕು ಕಾಯ್ದೆಯಡಿ ಹಲವರನ್ನು 12,222 ಅರ್ಜಿಗಳನ್ನು ಸ್ವೀಕರಿಸಿದ್ದು, ಇಲ್ಲಿಯವರೆಗೆ 4,856 ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, 6,363 ಎಕರೆ ಭೂಮಿಯನ್ನು ವಿತರಿಸಲಾಗಿದೆ. ಪಾರಂಪರಿಕ ಅರಣ್ಯವಾಸಿಗಳ ವಿಭಾಗದಲ್ಲಿ 1,626 ಅರ್ಜಿಗಳು ಬಂದಿವೆ. ಇಲಾಖೆಯು 531 ಅರ್ಜಿದಾರರಿಗೆ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದೆ. ಇಲಾಖೆಯು ಅರಣ್ಯ ಹಕ್ಕು ಕಾಯ್ದೆಯಡಿ 160 ಅರ್ಜಿದಾರರಿಗೆ 38,117 ಎಕರೆ ಭೂಮಿಯನ್ನು ಮಂಜೂರು ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT