ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನ 20 ಕಡೆಗಳಲ್ಲಿ ಲೋಕಾಯುಕ್ತ ದಾಳಿ: ಇಬ್ಬರು BBMP ಅಧಿಕಾರಿಗಳ ವಿಚಾರಣೆ

ಬೆಂಗಳೂರಿನ ದೇವಯ್ಯ ಪಾರ್ಕ್ ಬಳಿಯಿರುವ ಮಹಿಳಾ ಬಿಬಿಎಂಪಿ ಕಲ್ಯಾಣ ಅಧಿಕಾರಿಯೊಬ್ಬರ ನಿವಾಸದಲ್ಲಿ ಲೋಕಾಯುಕ್ತ ತಂಡ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ. ವೈಯಾಲಿಕಾವಲ್ ಬಡಾವಣೆಯಲ್ಲಿರುವ ಉಪ ಲೆಕ್ಕಾಧಿಕಾರಿ ನಿವಾಸದ ಮೇಲೂ ದಾಳಿ ನಡೆದಿದೆ.

ಬೆಂಗಳೂರು: ಬಿಬಿಎಂಪಿಯ ಇಬ್ಬರು ಅಧಿಕಾರಿಗಳ ನಿವಾಸ, ಕಚೇರಿ ಸೇರಿದಂತೆ ಬೆಂಗಳೂರಿನ 20 ಕಡೆಗಳಲ್ಲಿ ಲೋಕಾಯುಕ್ತರು ಬುಧವಾರ ದಾಳಿ ನಡೆಸಿದ್ದಾರೆ.

ಅಪಾರ ಪ್ರಮಾಣದ ಅಕ್ರಮ ಹಣದ ವಹಿವಾಟು ಮತ್ತು ಅವರೊಂದಿಗೆ ಸಂಪರ್ಕ ಹೊಂದಿದ್ದ ಅಧಿಕಾರಿಗಳು, ಬಿಲ್ಡರ್‌ಗಳು ಮತ್ತು ಉದ್ಯಮಿಗಳಿಂದ ಅಕ್ರಮ ಆಸ್ತಿ ಗಳಿಕೆಯ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ. ಬಿಲ್ಡರ್‌ಗಳು ಮತ್ತು ಕೈಗಾರಿಕೋದ್ಯಮಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೂ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ದೇವಯ್ಯ ಪಾರ್ಕ್ ಬಳಿಯಿರುವ ಮಹಿಳಾ ಬಿಬಿಎಂಪಿ ಕಲ್ಯಾಣ ಅಧಿಕಾರಿಯೊಬ್ಬರ ನಿವಾಸದಲ್ಲಿ ಲೋಕಾಯುಕ್ತ ತಂಡ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ. ವೈಯಾಲಿಕಾವಲ್ ಬಡಾವಣೆಯಲ್ಲಿರುವ ಉಪ ಲೆಕ್ಕಾಧಿಕಾರಿ ನಿವಾಸದ ಮೇಲೂ ದಾಳಿ ನಡೆದಿದೆ. ಬಿಬಿಎಂಪಿ ಪಶ್ಚಿಮ ವಲಯದ ಕಲ್ಯಾಣ ಕಾರ್ಯಕ್ರಮಗಳ ಫಲಾನುಭವಿಗಳ ಹಣವನ್ನು ಸಹಕಾರ ಸಂಘಗಳ ಖಾತೆಗಳಿಗೆ ವರ್ಗಾಯಿಸುವ ಮೂಲಕ ವಂಚನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಲೋಕಾಯುಕ್ತ ಡಿವೈಎಸ್ಪಿ ಸುನೀಲ್ ವೈ ನಾಯಕ್ ನೇತೃತ್ವದ ತಂಡ ದಾಳಿ ನಡೆಸಿದೆ. ಉದ್ಯಮಿಯೊಬ್ಬರ ಕತ್ರಿಗುಪ್ಪೆಯಲ್ಲಿರುವ ನಿವಾಸದ ಮೇಲೂ ದಾಳಿ ನಡೆದಿದೆ. ನಗರದಲ್ಲಿರುವ ಕೆಲ ಸಹಕಾರಿ ಸೊಸೈಟಿಗಳ ಕಚೇರಿಗಳ ಮೇಲೂ ದಾಳಿ ನಡೆಸಲಾಗಿದೆ. ಅಪಾರ ಪ್ರಮಾಣದ ಹಣ ವಹಿವಾಟು ಪ್ರಕರಣದಲ್ಲಿ ಅಧಿಕಾರಿಗಳು, ಬಿಲ್ಡರ್ ಗಳು ಹಾಗೂ ಉದ್ಯಮಿಗಳ ಸಂಪರ್ಕ ಕುರಿತು ಮಾಹಿತಿ ಸಂಗ್ರಹಿಸಿ ದಾಳಿ ನಡೆಸಲಾಗಿದೆ.

ಈ ಮಧ್ಯೆ ತುಮಕೂರಿನ ಆರ್ ಟಿಒ ಕಚೇರಿಯ ಮೇಲೆ 10ಕ್ಕೂ ಹೆಚ್ಚು ಲೋಕಾಯುಕ್ತ ಪೊಲೀಸರನ್ನೊಳಗೊಂಡ ತಂಡ ದಾಳಿ ನಡೆಸಿದೆ. ಬಿಹೆಚ್ ರಸ್ತೆಯಲ್ಲಿರುವ ಆರ್ ಟಿಒ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ದಾಳಿ ನಡೆದಿದೆ. ಇಡೀ ಕಚೇರಿಯನ್ನು ನಿಯಂತ್ರಣಕ್ಕೆ ತೆಗೆದುಕೊಡ ಲೋಕಾಯುಕ್ತ ಅಧಿಕಾರಿಗಳು ಎಲ್ಲಾ ಕೆಲಸಗಳನ್ನು ಪರಿಶೀಲಿಸಿದ್ದಾರೆ. ಕಚೇರಿಯ ಅಧಿಕಾರಿ ಹಾಗೂ ಸಂದರ್ಶಕರನ್ನು ಪ್ರಶ್ನಿಸಿದ್ದಾರೆ.

ಇತ್ತೀಚಿಗೆ ನವೆಂಬರ್ 12 ರಂದು ಬೆಂಗಳೂರು, ಬೀದರ್, ಬೆಳಗಾವಿ, ಧಾರವಾಡ, ಮೈಸೂರು, ದಾವಣಗೆರೆ ಜಿಲ್ಲೆಯ ಸರ್ಕಾರಿ ಅಧಿಕಾರಿಗಳ ಕಚೇರಿ ಹಾಗೂ ನಿವಾಸದ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದರು. ಅಧಿಕಾರಿಗಳ ಮನೆಯಿಂದ ಅಪಾರ ಪ್ರಮಾಣದ ನಗದು ಹಾಗೂ ಚಿನ್ನಾಭರಣ ವಶಕ್ಕೆ ಪಡೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT