ಸಂಗ್ರಹ ಚಿತ್ರ 
ರಾಜ್ಯ

ಸಮುದಾಯಕ್ಕೆ 2ಎ ಮೀಸಲಾತಿ; ಡಿಸೆಂಬರ್ 10 ರಂದು ಸುವರ್ಣಸೌಧದ ಹೊರಗೆ ಪ್ರತಿಭಟನೆ- ಬಸವಜಯ ಮೃತ್ಯುಂಜಯ ಸ್ವಾಮೀಜಿ

ಸುವರ್ಣಸೌಧದ ಎದುರು ಲಕ್ಷಾಂತರ ಪಂಚಮಸಾಲಿಗಳು ಅನೇಕ ವಕೀಲರ ನೇತೃತ್ವದಲ್ಲಿ ಜಮಾಯಿಸಿ ಸಮುದಾಯದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಸರ್ಕಾರವನ್ನು ಒತ್ತಾಯಿಸಲಿದ್ದಾರೆ.

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ ‘2ಎ’ ಮೀಸಲಾತಿ ನೀಡಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸದ ಕಾರಣ ಡಿ.10 ರಂದು ಬೆಳಗಾವಿಯ ಸುವರ್ಣಸೌಧದ ಹೊರಗೆ ಪ್ರತಿಭಟನೆ ನಡೆಸಲಾಗುವುದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಂಗಳವಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುವರ್ಣಸೌಧದ ಎದುರು ಲಕ್ಷಾಂತರ ಪಂಚಮಸಾಲಿಗಳು ಅನೇಕ ವಕೀಲರ ನೇತೃತ್ವದಲ್ಲಿ ಜಮಾಯಿಸಿ ಸಮುದಾಯದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಸರ್ಕಾರವನ್ನು ಒತ್ತಾಯಿಸಲಿದ್ದಾರೆಂದು ಹೇಳಿದರು.

ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿಗಳು 2013ರಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ವರ್ಷಗಳಿಂದ ಪಂಚಮಸಾಲಿಗಳು ಪ್ರತಿಭಟನೆ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಸಮುದಾಯದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಇತ್ತೀಚೆಗೆ ಪಂಚಮಸಾಲಿ ಮುಖಂಡರ ಜೊತೆ ಸಿದ್ದರಾಮಯ್ಯ ಚರ್ಚಿಸಿದರೂ ಅವರ ಮನವಿಗೆ ಸ್ಪಂದಿಸಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ಪಂಚಮಸಾಲಿಗಳು ಪ್ರಮುಖ ಪಾತ್ರ ವಹಿಸಿದ್ದರು ಎಂದು ತಿಳಿಸಿದರು.

ಇದೇ ವೇಳೆ ಬೆಳಗಾವಿಯಲ್ಲಿ ನಡೆಯಲಿರುವ ಪ್ರತಿಭಟನೆಗೆ ರಾಜ್ಯ ಸರ್ಕಾರ ಅಡ್ಡಿಪಡಿಸುವಂತಿಲ್ಲ. ಅಡ್ಡಿಪಡಿಸಿದ್ದೇ ಆದರೆ, ಪ್ರತಿಭಟನೆ ವಿಕೋಪಕಕೆ ಹೋಗಲಿದೆ ಎಚ್ಚರಿಸಿದರು. ಅಲ್ಲದೆ, ಪ್ರತಿಭಟನೆಗಾಗಿ ಸುವರ್ಣಸೌಧದ ಬಳಿ 5,000 ಟ್ರ್ಯಾಕ್ಟರ್‌ಗಳನ್ನು ತರಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ