ಬಸನಗೌಡ ಪಾಟೀಲ ಯತ್ನಾಳ್ 
ರಾಜ್ಯ

ಜಮೀನು ಹೋದರೂ ಹೊರಗೆ ಬರಲ್ಲ ಎಂದರೆ ಬಸವಣ್ಣನವರ ಹಾಗೆ ಹೊಳೆಗೆ ಹಾರಿ ಸಾಯ್ರಿ: ಯತ್ನಾಳ್ ಹೇಳಿಕೆಗೆ ವ್ಯಾಪಕ ಆಕ್ರೋಶ

ವಕ್ಫ್ ನಿಂದ ನಿಮ್ಮ ಆಸ್ತಿ ರಕ್ಷಣೆ ಮಾಡಿಕೊಳ್ಳಬೇಕಾದರೆ, ನೀವು ಮನೆಯಿಂದ ಹೊರ ಬಂದು ಹೋರಾಟ ಮಾಡಬೇಕಾಗುತ್ತದೆ. ಜಮೀನು ಹೋದರೂ ನೀವು ಹೊರಗ ಬರಲ್ಲ ಎಂದರೆ ಬಸವಣ್ಣನವರ ಹಾಗೆ ತುಂಬಿದ ಹೊಳೆಗೆ ಹಾರಿ ಸಾಯಬೇಕು. ಇಲ್ಲವಾದರೆ ಗಡ್ಡ ಬಿಟ್ಟು ಮುಸ್ಲಿಂ ಆಗಿ.

ಬೆಂಗಳೂರು: ಬಸವಣ್ಣನವರಂತೆ ಹೊಳೆಗೆ ಹಾರಿ’ ಎಂದು ಭಾಷಣ ಮಾಡಿರುವ ಬಿಜೆಪಿ ಶಾಸಕ ಹಾಗೂ ಕೇಂದ್ರದ ಮಾಜಿ ಸಚಿವ ಬಸವನಗೌಡ ಪಾಟೀಲ ಯತ್ನಾಳ್ ಅವರ ಹೇಳಿಕೆಗೆ ರಾಜ್ಯದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಸೋಮವಾರ ಬೀದರಿನಲ್ಲಿ ವಕ್ಫ್​ ಹೋರಾಟಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಮಾತನಾಡಿದ್ದ ಯತ್ನಾಳ್ ಅವರು, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ವಕ್ಫ್ ನಿಂದ ನಿಮ್ಮ ಆಸ್ತಿ ರಕ್ಷಣೆ ಮಾಡಿಕೊಳ್ಳಬೇಕಾದರೆ, ನೀವು ಮನೆಯಿಂದ ಹೊರ ಬಂದು ಹೋರಾಟ ಮಾಡಬೇಕಾಗುತ್ತದೆ. ಜಮೀನು ಹೋದರೂ ನೀವು ಹೊರಗ ಬರಲ್ಲ ಎಂದರೆ ಬಸವಣ್ಣನವರ ಹಾಗೆ ತುಂಬಿದ ಹೊಳೆಗೆ ಹಾರಿ ಸಾಯಬೇಕು. ಇಲ್ಲವಾದರೆ ಗಡ್ಡ ಬಿಟ್ಟು ಮುಸ್ಲಿಂ ಆಗಿ ಎಂದು ಕೈಯಿಂದ ಸನ್ಹೆ ಮಾಡಿದರು. ಈ ಹೇಳಿಕೆ ಇದೀ ವ್ಯಾಪಕ ವಿರೋಧ ಹಾಗೂ ಆಕ್ರೋಶ ವ್ಯಕ್ತವಾಗುತ್ತಿದೆ.

ಜಾಗತಿಕ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಎಸ್.ಎಂ.ಜಾಮದಾರ್ ಅವರು ಯತ್ನಾಳ್ ಹೇಳಿಕೆ ಆಘಾತ ತಂದಿದೆ ಎಂದು ಹೇಳಿದ್ದಾರೆ. ಯತ್ನಾಳ್ ಅವರು ಸಂದರ್ಭ, ಸಮಯ ಮತ್ತು ಸ್ಥಳದ ಎಲ್ಲಾ ಜ್ಞಾನವನ್ನು ಕಳೆದುಕೊಂಡಿದ್ದಾರೆಂದು ಕಿಡಿಕಾರಿದ್ದಾರೆ.

ಯತ್ನಾಳ್ ಅವರ ಹೇಳಿಕೆಯು ಅಲ್ಪಸಂಖ್ಯಾತರ ವಿರುದ್ಧ ಬಹುಸಂಖ್ಯಾತರನ್ನು ಕೆರಳಿಸುವ ಉದ್ದೇಶದಿಂದ ಕೂಡಿದ್ದು, ಬಸವಣ್ಣನವರ ಹೆಸರನ್ನು ಹೇಳುವ ಮೂಲಕ ಎಲ್ಲೆ ಮೀರಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಲಿಂಗಾಯತ ವಿದ್ವಾಂಸರು ಕೂಡ ಯತ್ನಾಳ್ ಹೇಳಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯತ್ನಾಳ್ ಹೇಳಿಕೆ ಬಸವಣ್ಣನವರ ಮೇಲಿನ ನೇರ ದಾಳಿ ಎಂದು ಪ್ರಾಧ್ಯಾಪಕ ಪಂಚಾಕ್ಷರಿ ಹಳೇಬೀಡು ಹೇಳಿದ್ದಾರೆ.

ಕೆಲವರು ಅಜ್ಞಾನದಿಂದ, ಇನ್ನು ಕೆಲವರು ದುರುದ್ದೇಶದಿಂದ ಮಾತನಾಡುತ್ತಿದ್ದಾರೆ, ಯತ್ನಾಳ್ ಅವರು ಬಸವಣ್ಣನವರನ್ನು ಅವಮಾನಿಸಲು, ಲಿಂಗಾಯತ ನಂಬಿಕೆಯನ್ನು ಹಾಳು ಮಾಡಲು ಮತ್ತು ಬಸವ ತತ್ವದ ಪ್ರಬಲ ಸತ್ಯಗಳನ್ನು ಅಳಿಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಯಾರೋ ಅಟ್ಟಿಸಿಕೊಂಡು ಬಂದಾಗ ಬಸವಣ್ಣನವರು ಹೇಡಿಯಂತೆ ಹೊಳೆಗೆ ಹಾರಿ ಸತ್ತರು ಎನ್ನುವ ಅರ್ಥ ಈ ಹೇಳಿಕೆಯಲ್ಲಿದೆ. ಯತ್ನಾಳರು ಈ ರೀತಿ ಹೇಳಲು ವಚನಗಳಲ್ಲಿ ಯಾವುದೇ ಸಾಕ್ಷ್ಯಾಧಾರ ಇಲ್ಲ. ವಚನಗಳನ್ನು ಸರಿಯಾಗಿ ಅಧ್ಯಯನ ಮಾಡಿರುವವರಿಗೆ ಬಸವಣ್ಣನವರ ಅಂತ್ಯ ಹೇಗಾಯಿತು, ಅವರ ಕೊನೆ ಘಳಿಗೆ ಹೇಗಿತ್ತು ಅನ್ನುವುದರಲ್ಲಿ ಸ್ಪಷ್ಟತೆ ಇದೆ. ಆದರೆ ಯತ್ನಾಳ್ ಈ ಅರಿವಿಲ್ಲದೆ ಅಪಚಾರ ಮಾಡಿದ್ದಾರೆ.

ಕೆಲವರು ಅಜ್ಞಾನದಿಂದ ಈ ರೀತಿ ಮಾತಾಡುತ್ತಾರೆ. ಕೆಲವು ವೈದಿಕಶಾಹಿ ಮನಸ್ಥಿತಿಯವರು ಸತ್ಯ ಗೊತ್ತಿದ್ದೂ ಬೇಕಂತಲೇ ಈ ರೀತಿ ಮಾತನಾಡುತ್ತಾರೆ. ಅವರ ಉದ್ಧೇಶ ಬಸವಣ್ಣನವರನ್ನು ತುಳಿಯುವುದು, ಲಿಂಗಾಯತ ಧರ್ಮ ಮತ್ತು ಬಸವತತ್ವ ಮೇಲೇಳದಂತೆ ನೋಡಿಕೊಳ್ಳುವುದು. ಇಂತವರು ಲಿಂಗಾಯತ ಸಂಪ್ರದಾಯದಲ್ಲಿ ಹುಟ್ಟಿರುವ ಯತ್ನಾಳರನ್ನು ಛೂ ಬಿಟ್ಟು ನಮ್ಮ ಕೈಯಲ್ಲೇ ನಮ್ಮ ಗುರುವನ್ನು ನಿಂದಿಸುವ ಕೆಲಸ ಮಾಡುತ್ತಿದ್ದಾರೆ. ಇಲ್ಲಿ ಬೇರೆಯವರು ಹೊರಗಡೆ ನಿಂತು ಮಗನ ಕೈಯಲ್ಲೇ ಅಪ್ಪನನ್ನು ನಿಂದಿಸುವ ಕೆಲಸ ಮಾಡುತ್ತಿದ್ದಾರೆ.

ಇಂತಹ ಮಾತುಗಳಿಂದ ಬಸವಣ್ಣನವರ ಅವಹೇಳನ ಆಗುವುದಿಲ್ಲ. ಅವರ ಸಾಧನೆ ಇಡೀ ಜಗತ್ತಿಗೆ ಗೊತ್ತಿದೆ. ಇಲ್ಲಿ ನಡೆದಿರುವುದು ಯತ್ನಾಳರ ಮೂರ್ಖತನದ ಪ್ರದರ್ಶನ. ಯತ್ನಾಳ ಪ್ರಬುದ್ಧತೆ ಏನು ಎಂದು ಎಲ್ಲರಿಗೂ ಗೊತ್ತಿಯುವ ವಿಷಯ. ತನ್ನ ಮುಖಕ್ಕೆ ತಾನೇ ಮಸಿ ಬಳೆದುಕೊಂಡಿದ್ದಾರೆ. ಇದರಿಂದ ಬಸವಣ್ಣನವರಿಗೆ ಏನೂ ಆಗದಿದ್ದರೂ ಸಾಮಾಜಿಕ ಕಳಕಳಿ ಇರುವ ಪ್ರತಿಯೊಬ್ಬರೂ ಇದು ಖಂಡಿಸಬೇಕಾಗಿರುವ ವಿಷಯ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT