ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರೇಮ ಪ್ರಕರಣ: ಬೆಳಗಾವಿಯಲ್ಲಿ ಯುವಕನ ಮೇಲೆ ಗುಂಡಿನ ದಾಳಿ, ಮೂವರ ಬಂಧನ

ಬುಧವಾರ ರಾತ್ರಿ 8.30ರ ಸುಮಾರಿಗೆ ಪ್ರಣೀತ್ ಕುಮಾರ್ ಎಂಬ ಯುವಕ ತನ್ನ ಸ್ನೇಹಿತೆಯ ಮನೆಗೆ ರಾತ್ರಿಯ ಊಟಕ್ಕೆ ಹೋಗಿದ್ದಾಗ ತನ್ನ ಹಳೆಯ ಪ್ರೇಮದ ಬಗ್ಗೆ ಪ್ರಸ್ತಾಪ ಮಾಡಿದ್ದಾನೆ.

ಬೆಳಗಾವಿ: ಬೆಳಗಾವಿಯ ಮಹಾಂತೇಶ ನಗರದಲ್ಲಿ 31 ವರ್ಷದ ಯುವಕನ ಮೇಲೆ ಬುಧವಾರ ರಾತ್ರಿ ಗುಂಡಿನ ದಾಳೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ರಾತ್ರಿ 8.30ರ ಸುಮಾರಿಗೆ ಪ್ರಣೀತ್ ಕುಮಾರ್ ಎಂಬ ಯುವಕ ತನ್ನ ಸ್ನೇಹಿತೆಯ ಮನೆಗೆ ರಾತ್ರಿಯ ಊಟಕ್ಕೆ ಹೋಗಿದ್ದಾಗ ತನ್ನ ಹಳೆಯ ಪ್ರೇಮದ ಬಗ್ಗೆ ಪ್ರಸ್ತಾಪ ಮಾಡಿದ್ದಾನೆ. ಆಗ ಸ್ನೇಹಿತೆ ಮಹಿಳೆಗೆ ಫೋನ್ ಮಾಡಿ ತನ್ನ ಮನೆಗೆ ಬರುವಂತೆ ಹೇಳುತ್ತಾಳೆ. ಸ್ಥಳಕ್ಕೆ ಬಂದ ಆತನ ಹಳೆಯ ಪ್ರಿಯತಮೆ ಮತ್ತು ಆಕೆಯ ಸಹೋದರ ಹಾಗೂ ಸಂಬಂಧಿಕರು ತಗಾದೆ ತೆಗೆದಿದ್ದಾರೆ. ಆ ಬಳಿಕ ಗುಂಡಿನ ದಾಳಿ ನಡೆದಿದೆ ಎಂದು ಬೆಳಗಾವಿ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ತಿಳಿಸಿದ್ದಾರೆ.

ಮಹಿಳೆಯ ಸಂಬಂಧಿಕರೊಬ್ಬರು ಪಿಸ್ತೂಲ್‌ನಿಂದ ಎರಡು ಸುತ್ತು ಗುಂಡು ಹಾರಿಸಿದ್ದು, ಒಂದು ಗುಂಡು ಪ್ರಣೀತ್ ಕಿವಿಗೆ ತಾಗಿದ್ದರೆ, ಮತ್ತೊಂದು ಕಾಲಿಗೆ ತಗುಲಿದೆ ಎಂದು ಅವರು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಈ ಸಂಬಂಧ ಯುವತಿ, ಆಕೆಯ ಸಹೋದರಿ, ಸಹೋದರ ಸೇರಿದಂತೆ ಮೂವರನ್ನು ಬಂಧಿಸಿದ್ದೇವೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡಿಯಾ ಬ್ಲಾಕ್ ಪ್ರಣಾಳಿಕೆ 'ಬಿಹಾರ್ ಕಾ ತೇಜಸ್ವಿ ಪ್ರಾಣ್' ಬಿಡುಗಡೆ; ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ ಭರವಸೆ!

ಕೇಂದ್ರ ಚುನಾವಣಾ ಆಯುಕ್ತರು ರಾಜಕೀಯ ಪುಢಾರಿ: ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ

Video: Melissa ಚಂಡಮಾರುತದ ಒಳಗೇ ನುಗ್ಗಿದ ಅಮೆರಿಕ ವಾಯುಪಡೆ ವಿಮಾನ; ಮುಂದೇನಾಯ್ತು..? ಒಳಗೇನಿತ್ತು?

ಹೊಟ್ಟೆ ತುಂಬಾ ತಿಂದು 11 ಸಾವಿರ ಬಿಲ್ ಮಾಡಿ ಪರಾರಿ; ಬೆನ್ನಟ್ಟಿ ಮಹಿಳೆಯರ ಹಿಡಿದ ಹೊಟೆಲ್ ಮಾಲೀಕ! Video

ರಾಮ ಮಂದಿರ ಧ್ವಜಾರೋಹಣ ತಾಲೀಮಿಗೆ ಸೇನಾ ಅಧಿಕಾರಿಗಳು ಸಾಥ್

SCROLL FOR NEXT