ಡಿ.ಕೆ.ಶಿವಕುಮಾರ್ 
ರಾಜ್ಯ

ಸ್ವಾಮೀಜಿಗಳು ರಾಜಕೀಯದಿಂದ ದೂರವಿರುವುದು ಉತ್ತಮ: ಡಿ.ಕೆ ಶಿವಕುಮಾರ್

ಸ್ವಾಮೀಜಿಗಳು ಇಂಥ ವಿವಾದಾತ್ಮಕ ಹೇಳಿಕೆ ನೀಡಬಾರದು. ಸಮಾಜದ ಶಾಂತಿ ಕೆಡಿಸುವ ಕೆಲಸ ಮಾಡಬಾರದು. ಅವರು ರಾಜಕಾರಣದಿಂದ ದೂರ ಇರುವುದು ಒಳಿತು.

ಬೆಂಗಳೂರು: ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.

ಮುಸ್ಲಿಮರಿಗೆ ನೀಡಿರುವ ಮತದಾನದ ಹಕ್ಕು ಹಿಂಪಡೆಯಬೇಕು ಎಂಬ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರ ಶೇಖರ ಸ್ವಾಮೀಜಿ ಹೇಳಿಕೆಗೆ ಬುಧವಾರ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, 'ಸ್ವಾಮೀಜಿಗಳು ಇಂಥ ವಿವಾದಾತ್ಮಕ ಹೇಳಿಕೆ ನೀಡಬಾರದು. ಅವರು ಧಾರ್ಮಿಕ ಕೆಲಸಗಳ ಬಗ್ಗೆ ಗಮನ ಹರಿಸಬೇಕು. ಸಮಾಜದ ಶಾಂತಿ ಕೆಡಿಸುವ ಕೆಲಸ ಮಾಡಬಾರದು. ಅವರು ರಾಜಕಾರಣದಿಂದ ದೂರ ಇರುವುದು ಒಳಿತು. ಮತದಾನ ಎಂಬುದು ಸಂವಿಧಾನದ ಮೂಲಕ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಬಂದಿರುವ ಹಕ್ಕು. ಒಬ್ಬ ವ್ಯಕ್ತಿ ಜನಿಸಿದರೆ ಸಂವಿಧಾನದಿಂದ ಸಿಗುವ ಹಕ್ಕುಗಳಲ್ಲಿ ಇದು ಕೂಡ ಒಂದು' ಎಂದರು.

ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು' ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT