ಸಿಎಂ ಸಿದ್ದರಾಮಯ್ಯ 
ರಾಜ್ಯ

ಹಾಸನ: ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶದ ವಿರುದ್ಧ ಎಐಸಿಸಿಗೆ ದೂರು

ಹಾಸನದಲ್ಲಿ ಸಿದ್ದರಾಮಯ್ಯ ಪರ ಸ್ವಾಭಿಮಾನಿ ಸಮಾವೇಶ ಮಾಡಲಾಗುತ್ತಿದೆ. ಇದನ್ನು ಪಕ್ಷದ ವೇದಿಕೆಯಿಂದ ಹೊರತಾದ ಕಾರ್ಯಕ್ರಮ ಎಂದು ಬಿಂಬಿಸಲಾಗುತ್ತಿದೆ. ಇಲ್ಲಿ ಆಯೋಜಕರೆಲ್ಲ ಪಕ್ಷದ ಸಚಿವರು, ಪಕ್ಷದ ಶಾಸಕರು ಮುಖಂಡರೇ ಆಗಿದ್ದಾರೆ.

ಬೆಂಗಳೂರು: ಡಿಸೆಂಬರ್5ರಂದು ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಹಾಸನದಲ್ಲಿ ಹಮ್ಮಿಕೊಂಡಿರುವ ʻಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶʼದ ವಿರುದ್ಧ ಅನಾಮಧೇಯ ವ್ಯಕ್ತಿಯಿಂದ ಎಐಸಿಸಿ ನಾಯಕರಿಗೆ ಸಲ್ಲಿಸಿರುವ ವಿಚಾರ ಬೆಳಕಿಗೆ ಬಂದಿದೆ. ಪತ್ರದಲ್ಲಿ ಹೆಸರು ಮರೆಮಾಚಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅನಾಯಮಧೇಯ ವ್ಯಕ್ತಿಯಿಂದ ದೂರು ಸಲ್ಲಿಕೆ ಮಾಡಲಾಗಿದೆ.

ಹಾಸನದಲ್ಲಿ ಸಿದ್ದರಾಮಯ್ಯ ಪರ ಸ್ವಾಭಿಮಾನಿ ಸಮಾವೇಶ ಮಾಡಲಾಗುತ್ತಿದೆ. ಇದನ್ನು ಪಕ್ಷದ ವೇದಿಕೆಯಿಂದ ಹೊರತಾದ ಕಾರ್ಯಕ್ರಮ ಎಂದು ಬಿಂಬಿಸಲಾಗುತ್ತಿದೆ. ಇಲ್ಲಿ ಆಯೋಜಕರೆಲ್ಲ ಪಕ್ಷದ ಸಚಿವರು, ಪಕ್ಷದ ಶಾಸಕರು ಮುಖಂಡರೇ ಆಗಿದ್ದಾರೆ. ಹೀಗಿದ್ದು ಸಹ ಯಾಕೆ ಪಕ್ಷದ ಚಿಹ್ನೆ ಮೇಲೆ ಸಮಾವೇಶ ಮಾಡುತ್ತಿಲ್ಲ..? ವೈಯಕ್ತಿಕ ಬಲ ಪ್ರದರ್ಶನಕ್ಕೆ ಹೀಗೆ ಪಕ್ಷದ ನಾಯಕರನ್ನು ಬಳಸಿಕೊಳ್ಳಲಾಗುತ್ತಿದೆ.

ಅಧಿಕಾರ ಕೊಟ್ಟ ಕಾಂಗ್ರೆಸ್ ಪಕ್ಷವನ್ನು ದೂರವಿಟ್ಟು ಸಮಾವೇಶ ಮಾಡುವ ಉದ್ದೇಶ ಏನು…? ಸ್ವಾಭಿಮಾನ ಸಮಾವೇಶವನ್ನು ಪಕ್ಷದ ವೇದಿಕೆಯಲ್ಲಿಯೇ ಮಾಡಿ. ಪಕ್ಷದ ವೇದಿಕೆ ಬಿಟ್ಟು ಮಾಡುವ ಉದ್ದೇಶ ಒಳ್ಳೆಯದಲ್ಲ. ಕಾಂಗ್ರೆಸ್ ಚಿಹ್ನೆ ಬಳಸಿಕೊಂಡೇ ಹಾಸನ ಸಮಾವೇಶ ಆಯೋಜನೆ ಮಾಡಿ. ಸಿದ್ದರಾಮಯ್ಯ ಹಾಗೂ ಉಳಿದ ಸಚಿವರಿಗೆ ತಿಳಿ ಹೇಳುವಂತೆ ದೂರಿನ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಪತ್ರದ ಜೊತೆಗೆ ಸಚಿವರಾದ ಕೆ.ಎನ್‌ ರಾಜಣ್ಣ, ಹೆಚ್‌.ಸಿ ಮಹದೇವಪ್ಪ, ಎಂಎಲ್‌ಸಿ ಯತೀಂದ್ರ ಸ್ಥಳ ಪರಿಶೀಲನೆ ಮಾಡುತ್ತಿರುವ ಫೋಟೋಗಳನ್ನೂ ಲಗತ್ತಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ