ವಶ ಪಡಿಸಿಕೊಂಡ ನಾಡ ಬಂದೂಕು 
ರಾಜ್ಯ

ತುಮಕೂರು: ಅಕ್ರಮ ನಾಡ ಬಂದೂಕು ತಯಾರಿಕಾ ಜಾಲ ಪತ್ತೆ, ಆರು ಮಂದಿ ಬಂಧನ

ಆಗಸ್ಟ್ 12ರಂದು ಗುಬ್ಬಿ ತಾಲೂಕಿನ ತಿಪೂರು ಗ್ರಾಮದ ಆರೋಪಿ ಮಧುಚಂದ್ರ ಎಂಬಾತ ಅಕ್ರಮವಾಗಿ ಯಾವುದೇ ಲೈಸೆನ್ಸ್ ಇಲ್ಲದೆ ನಾಡ ಬಂದೂಕಿನೊಂದಿಗೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆಯಾಡುತ್ತಿದ್ದನು.

ತುಮಕೂರು: ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ತುಮಕೂರು ಜಿಲ್ಲಾ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗುಬ್ಬಿ ತಾಲೂಕಿನ ತಿಪ್ಪೂರಿನ ಟಿ.ಆರ್.ಮಧುಚಂದ್ರ (29), ಎಸ್.ಶಿವಕುಮಾರ್ (24), ಉದ್ದೆ ಹೊಸಕೆರೆಯ ಮಂಜುನಾಥ್ (39), ಹಂದನಕೆರೆಯ ತಿಮ್ಮರಾಜು (45) ಮತ್ತು ರವೀಶ್ (50), ತುಮಕೂರು ಪಟ್ಟಣದ ಇಮ್ರಾನ್ ಪಾಷಾ (40) ಬಂಧಿತ ಆರೋಪಿಗಳು. ಆಗಸ್ಟ್ 12ರಂದು ಗುಬ್ಬಿ ತಾಲೂಕಿನ ತಿಪೂರು ಗ್ರಾಮದ ಆರೋಪಿ ಮಧುಚಂದ್ರ ಎಂಬಾತ ಅಕ್ರಮವಾಗಿ ಯಾವುದೇ ಲೈಸೆನ್ಸ್ ಇಲ್ಲದೆ ನಾಡ ಬಂದೂಕಿನೊಂದಿಗೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆಯಾಡುತ್ತಿದ್ದನು. ಇದನ್ನು ಆಕ್ಷೇಪಿಸಿದ ದರ್ಶನ್ ಎಂಬುವರ ಜೊತೆ ಮಾತಿಗೆ ಮಾತು ಬೆಳೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಂದೂಕು ಕೆಳಗೆ ಬಿದ್ದು ಸ್ಥಳದಲ್ಲಿಯೇ ಇದ್ದ ಚೈತ್ರ ಎಂಬುವರಿಗೆ ಗಾಯವಾಗಿತ್ತು. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.

ಆರೋಪಿ ಹೊಂದಿದ್ದ ಲೈಸೆನ್ಸ್ ಇಲ್ಲದ ಬಂದೂಕಿನ ಬಗ್ಗೆ ತನಿಖೆ ನಡೆಸಿದಾಗ ಜಿಲ್ಲೆಯಲ್ಲಿ ನಾಡ ಬಂದೂಕುಗಳನ್ನು ತಯಾರಿಸಿ 25,000 ರಿಂದ 30,000 ರೂ. ಗಳಿಗೆ ಮಾರಾಟ ಮಾಡುತ್ತಿರುವ ಜಾಲ ಬೆಳಕಿಗೆ ಬಂದಿದೆ. ಬಂಧಿತ ಆರು ಮಂದಿ ಆರೋಪಿಗಳಿಂದ ಒಟ್ಟು ನಾಲ್ಕು ಬಂದೂಕುಗಳನ್ನು, ಬಿಡಿ ಭಾಗಗಳನ್ನು ಹಾಗೂ ಇದಕ್ಕೆ ತಯಾರಿಸಲು ಬಳಸಲಾಗಿದ್ದ ಕಚ್ಚಾ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಹಂದನಕೆರೆಯ ಫಾರ್ಮ್‌ಹೌಸ್‌ನಲ್ಲಿ ಗನ್‌ಗಳನ್ನು ಜೋಡಿಸಿ, ಅರಣ್ಯದಲ್ಲಿ ಪ್ರಾಣಿಗಳನ್ನು ಬೇಟೆಯಾಡಲು ಬಳಸುತ್ತಿದ್ದರು. ಈ ರೀತಿ ನಾಡ ಬಂದೂಕುಗಳನ್ನು ಖರೀದಿ ಮಾಡಿರುವವರು ಕಾಡು ಪ್ರಾಣಿಗಳನ್ನು ಬೇಟೆಯಾಡಲು ಉಪಯೋಗಿಸುತ್ತಿದ್ದರು ಎಂದು ಮಾಹಿತಿ ಲಭ್ಯವಾಗಿದೆ. ಇದಲ್ಲದೆ ಅನೇಕರ ಬಳಿ ಅಕ್ರಮವಾಗಿ ನಾಡ ಬಂದೂಕು ಇರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಅದನ್ನು ವಶಕ್ಕೆ ಪಡೆಯುವ ಕಾರ್ಯದಲ್ಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT