ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಶುಕ್ರವಾರದ ಪ್ರಾರ್ಥನೆಗೆ ಕಾಲೇಜಿನಲ್ಲಿ ಅವಕಾಶ ನೀಡುತ್ತಿಲ್ಲ; ಕಾಶ್ಮೀರಿ ಮುಸ್ಲಿಂ ವಿದ್ಯಾರ್ಥಿಗಳ ಆರೋಪ

ಯಾವುದೇ ವಿದ್ಯಾರ್ಥಿಯು ಶಿಕ್ಷಣವನ್ನು ಮುಂದುವರಿಸಲು ತಮ್ಮ ಧಾರ್ಮಿಕ ನಂಬಿಕೆ ಅಥವಾ ಗುರುತನ್ನು ಬಿಟ್ಟುಕೊಡಬೇಕಾಗಿಲ್ಲ ಎಂದು ಅವರು ವಾದಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಶ್ರೀ ಸೌಭಾಗ್ಯ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಕಾಶ್ಮೀರಿ ಮುಸ್ಲಿಂ ವಿದ್ಯಾರ್ಥಿಗಳು ಶುಕ್ರವಾರದ ಪ್ರಾರ್ಥನೆ (ಜುಮ್ಮಾ ಪ್ರಾರ್ಥನೆ) ಮಾಡಲು ಕಾಲೇಜು ಆಡಳಿತವು ಅವಕಾಶ ನೀಡಲಿಲ್ಲ ಎಂದು ಆರೋಪಿಸಿದ್ದಾರೆ.

ತಮ್ಮ ನಂಬಿಕೆಗೆ ಮೂಲಭೂತವಾದ ಪ್ರಾರ್ಥನೆಗೆ ಹಾಜರಾಗಲು ಅನುಮತಿ ನೀಡುವಂತೆ ಪದೇ ಪದೇ ಮಾಡಿದ ಮನವಿಯನ್ನು ಕಾಲೇಜು ಆಡಳಿತ ನಿರಾಕರಿಸಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಈ ನಿರಾಕರಣೆಯಿಂದ ಧಾರ್ಮಿಕ ಸ್ವಾತಂತ್ರ್ಯ ಭಾರತೀಯ ಸಂವಿಧಾನದ 25 ನೇ ವಿಧಿಗೆ ವಿರುದ್ಧವಾಗಿದೆ ಎಂದು ವಿದ್ಯಾರ್ಥಿಗಳು ಹೇಳಿದರು. ಶುಕ್ರವಾರದ ಪ್ರಾರ್ಥನೆಯನ್ನು ತಪ್ಪಿಸಿಕೊಳ್ಳಲು ಬಲವಂತವಾಗಿ, ಅವರ ಧರ್ಮವನ್ನು ಆಚರಿಸುವ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ತಮಗೆ ಅಪಾರ ದುಃಖವನ್ನು ಉಂಟುಮಾಡುತ್ತದೆ ಎಂದಿದ್ದಾರೆ. "ಯಾವುದೇ ವಿದ್ಯಾರ್ಥಿಯು ಶಿಕ್ಷಣವನ್ನು ಮುಂದುವರಿಸಲು ತಮ್ಮ ಧಾರ್ಮಿಕ ನಂಬಿಕೆ ಅಥವಾ ಗುರುತನ್ನು ಬಿಟ್ಟುಕೊಡಬೇಕಾಗಿಲ್ಲ ಎಂದು ಅವರು ವಾದಿಸಿದ್ದಾರೆ.

ಸ್ವಾತಂತ್ರ್ಯ ಮತ್ತು ವೈವಿಧ್ಯತೆಯನ್ನು ಗೌರವಿಸುವ ಪ್ರಜಾಪ್ರಭುತ್ವ ಸಮಾಜದಲ್ಲಿ ಇಂತಹ ನಿರ್ಬಂಧಗಳು ಅಪಾಯಕಾರಿ ವಾತಾವರಣ ಸೃಷ್ಟಿಸುತ್ತವೆ ಎಂದು ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿಗಳ ಸಂಘದ (ಜೆಕೆಎಸ್‌ಎ) ರಾಷ್ಟ್ರೀಯ ಸಂಚಾಲಕ ನಾಸಿರ್ ಖುಹಾಮಿ ದಿ ನ್ಯೂ ಇಂಡಿಯನ್ ಎಕ್ಸ ಪ್ರೆಸ್ ಗೆ ತಿಳಿಸಿದರು. “ಕರ್ನಾಟಕವು ತನ್ನ ಸಾಂಸ್ಕೃತಿಕ ಒಳಗೊಳ್ಳುವಿಕೆಗೆ ಹೆಸರುವಾಸಿಯಾಗಿದೆ. ಆದರೆ ಇಂತಹ ಘಟನೆಗಳು ಪ್ರತಿಯೊಬ್ಬ ವ್ಯಕ್ತಿಯ ಘನತೆ ಮತ್ತು ಹಕ್ಕುಗಳನ್ನು ರಕ್ಷಿಸುವ ಅಗತ್ಯವನ್ನು ಎತ್ತಿ ತೋರಿಸುತ್ತವೆ. ಶಿಕ್ಷಣ ಸಂಸ್ಥೆಗಳು ತಾರತಮ್ಯ ಅಥವಾ ಧಾರ್ಮಿಕ ಆಚರಣೆಗಳ ಮೇಲಿನ ದಾಳಿಯಿಂದ ಮುಕ್ತ ಸ್ಥಳವಾಗಿರಬೇಕು ಎಂದು ಪ್ರತಿಪಾದಿಸಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸಲು ಮತ್ತು ಕಾಲೇಜುಗಳು ಎಲ್ಲಾ ವಿದ್ಯಾರ್ಥಿಗಳ ಧಾರ್ಮಿಕ ಆಚರಣೆಗಳನ್ನು ಗೌರವಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ವಿದ್ಯಾರ್ಥಿಗಳು ಜಮ್ಮು ಮತ್ತು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಅವರಿಗೆ ಕರ್ನಾಟಕ ಸರ್ಕಾರದೊಂದಿಗೆ ವಿಷಯ ಪ್ರಸ್ತಾಪಿಸುವಂತೆ ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳು ಕಾಲೇಜಿನ ಕ್ರಮಗಳು ತಮಗೆ ಸಂಕಟವನ್ನುಂಟುಮಾಡಿದೆ ಮತ್ತು ತಮ್ಮ ಧಾರ್ಮಿಕ ಕರ್ತವ್ಯಗಳನ್ನು ನಿರ್ವಹಿಸಲು ಕಷ್ಟಕರವಾಗುತ್ತಿದೆ ಎಂದು ಔಪಚಾರಿಕ ಮನವಿಯಲ್ಲಿ ತಿಳಿಸಿದ್ದಾರೆ. ಆರೋಪಗಳಿಗೆ ಪ್ರತಿಕ್ರಿಯೆಗಾಗಿ TNIE ಶ್ರೀ ಸೌಭಾಗ್ಯ ನರ್ಸಿಂಗ್ ಕಾಲೇಜ್ ಸಂಪರ್ಕಿಸಿದಾಗ, ಪ್ರತಿಕ್ರಿಯೆಗೆ ಆಡಳಿತ ಲಭ್ಯವಾಗಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT