ಕಾಂಗ್ರೆಸ್ ನಾಯಕ ಬಿ ಗುರಪ್ಪ ನಾಯ್ಡು ಉಚ್ಛಾಟನೆ 
ರಾಜ್ಯ

Sexual harassment case: ಕಾಂಗ್ರೆಸ್ ಪಕ್ಷದಿಂದ ಬಿ ಗುರಪ್ಪ ನಾಯ್ಡು ಉಚ್ಛಾಟನೆ!

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), ಶಿಸ್ತು ಕ್ರಮ ಸಮಿತಿ ಅಧ್ಯಕ್ಷ ಕೆ ರೆಹಮಾನ್ ಖಾನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ನಾಯ್ಡು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.

ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಹಿರಿಯ ಮುಖಂಡ ಬಿ ಗುರಪ್ಪ ನಾಯ್ಡು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಲೈಂಗಿಕ ಕಿರುಕುಳ ಮತ್ತು ಮಹಿಳೆಯೊಬ್ಬರ ಗೌರವಕ್ಕೆ ಧಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಕರ್ನಾಟಕ ಕಾಂಗ್ರೆಸ್ ಮುಖಂಡ ಬಿ ಗುರಪ್ಪ ನಾಯ್ಡು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), ಶಿಸ್ತು ಕ್ರಮ ಸಮಿತಿ ಅಧ್ಯಕ್ಷ ಕೆ ರೆಹಮಾನ್ ಖಾನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ನಾಯ್ಡು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.

ಗುರಪ್ಪನಾಯ್ಡು ಅವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿರುವುದೇ ಈ ಕ್ರಮಕ್ಕೆ ಕಾರಣ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಏನಿದು ಪ್ರಕರಣ?

ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಗುರಪ್ಪನಾಯ್ಡು ಶಿಕ್ಷಕಿಗೆ ಲೈಂಗಿಕ ಕಿರುಕುಳ ಕೊಟ್ಟಿರುವ ಆರೋಪ ಎದುರಿಸುತ್ತಿದ್ದಾರೆ. ಗುರಪ್ಪನಾಯ್ಡು ವಿರುದ್ದ ಚೆನ್ನಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಜಿಎಸ್ ಬ್ಲೂಮ್ ಫೀಲ್ಡ್ ಚೇರ್ಮನ್ ಆಗಿರುವ ಗುರಪ್ಪ ನಾಯ್ಡ ತ್ಯಾಗರಾಜನಗರದ ತಮ್ಮ ಖಾಸಗಿ ಶಾಲೆಯ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.

ಗುರಪ್ಪ ನಾಯ್ಡು ಅವರ ವಿರುದ್ಧ ಐಪಿಸಿ ಸೆಕ್ಷನ್ 354ಎ (ಲೈಂಗಿಕ ಕಿರುಕುಳ), 506 (ಅಪರಾಧ ಬೆದರಿಕೆ), 509 (ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ಮಾತು, ಸನ್ನೆ ಅಥವಾ ಕೃತ್ಯ), 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ) ಮತ್ತು 354 (ಮಹಿಳೆಯ ಮೇಲೆ ಆಕ್ರಮಣ ಅಥವಾ ಕ್ರಿಮಿನಲ್ ಇಚ್ಛೆಯಿಂದ ಅವಳ ನಮ್ರತೆಯನ್ನು ಕೆರಳಿಸುವುದು) ಅಡಿಯಲ್ಲಿ ನವೆಂಬರ್ 26 ರಂದು ಎಫ್ಐಆರ್ ದಾಖಲಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೋ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ಕೊಲಂಬೊ ಟೆಸ್ಟ್‌ನಲ್ಲಿ ಭಾರತದ ಅಬ್ಬರ: 503/9ಕ್ಕೆ ಇನ್ನಿಂಗ್ಸ್ ಡಿಕ್ಲೇರ್, ಲಂಕಾ ಇನ್ನಿಂಗ್ಸ್ ಗೆ ಮಳೆ ಅಡ್ಡಿ