ಹೆಚ್. ಡಿ.ಕುಮಾರಸ್ವಾಮಿ 
ರಾಜ್ಯ

ಒಕ್ಕಲಿಗ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ FIR: ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಂರಿಗೆ ಮತದಾನ ನಿರಾಕರಿಸುವ ಕಾನೂನು ಜಾರಿಗೆ ತರಬೇಕು ಎಂದು ಇತ್ತೀಚಿಗೆ ಹೇಳಿಕೆ ನೀಡಿದ್ದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಕೇಸ್ ದಾಖಲಾಗಿದೆ.

ಚನ್ನಪಟ್ಟಣ: ಮುಸ್ಲಿಂರಿಗೆ ಮತದಾನದ ಹಕ್ಕನ್ನು ನಿರಾಕರಿಸಬೇಕು ಎಂಬ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರ ನಾಥ ಸ್ವಾಮೀಜಿ ವಿರುದ್ಧ ಕೇಸ್ ದಾಖಲಿಸಿರುವುದಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ತನ್ನ ವಿರುದ್ಧ ವರ್ಣನಿಂದನೆ ಮಾಡಿದ್ದ ಸಚಿವರ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ ಸ್ವಾಮೀಜಿ ವಿರುದ್ಧ ತರಾತುರಿಯಲ್ಲಿ ಕ್ರಮ ಕೈಗೊಂಡಿರುವುದನ್ನು ಪ್ರಶ್ನಿಸಿದ್ದಾರೆ.

ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಂರಿಗೆ ಮತದಾನ ನಿರಾಕರಿಸುವ ಕಾನೂನು ಜಾರಿಗೆ ತರಬೇಕು ಎಂದು ಇತ್ತೀಚಿಗೆ ಹೇಳಿಕೆ ನೀಡಿದ್ದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಕೇಸ್ ದಾಖಲಾಗಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬಾಯ್ತಪ್ಪಿನಿಂದ ಅಂತಹ ಹೇಳಿಕೆ ನೀಡಿರುವುದಾಗಿ ಸ್ವಾಮೀಜಿ ಕ್ಷಮೆ ಕೋರಿದ್ದಾರೆ. ಆದಾಗ್ಯೂ, ಸರ್ಕಾರ ಕೇಸ್ ದಾಖಲಿಸಿದ್ದು, ತರಾತುರಿಯಲ್ಲಿ ನೋಟಿಸ್ ನೀಡಿದೆ. ಆದರೆ, ನನ್ನ ವಿರುದ್ಧ ವರ್ಣನಿಂದನೆ ಮಾಡಿದ್ದ ಸಚಿವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಅಥವಾ ನೋಟಿಸ್ ನೀಡಿಲ್ಲ. ಯಾವುದೇ ಕೇಸ್ ಕೂಡಾ ದಾಖಲಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಇಂತಹ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಅರಾಜತೆ ಬರಲಿದೆ. ಕಾದು ನೋಡಿ ಎಂದರು. ಇತ್ತೀಚಿಗೆ ನಡೆದ ಚನ್ನಪಟ್ಟಣ ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಕುಮಾರಸ್ವಾಮಿ ಅವರನ್ನು ಕರಿಯ ಎಂದು ಕರೆದಿದ್ದರು.

ಮತ್ತೊಂದೆಡೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್. ಅಶೋಕ್, ಸ್ವಾಮೀಜಿ ವಿರುದ್ಧದ ಕೇಸ್ ದಾಖಲಿಸುವ ಮೂಲಕ ಒಕ್ಕಲಿಗ ಸಮುದಾಯವನ್ನು ಅಪಮಾನಿಸಲಾಗಿದೆ. ಒಂದು ವೇಳೆ ಸ್ವಾಮೀಜಿಗೆ ಕಿರುಕುಳ ನೀಡಿದರೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT