ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ online desk
ರಾಜ್ಯ

ಸರ್ಕಾರ ಬೀಳಿಸಲು 1000 ಕೋಟಿ ರೂ ಸಂಗ್ರಹ ಹೇಳಿಕೆ: ಯತ್ನಾಳ್​ ವಿರುದ್ಧ ಕಾಂಗ್ರೆಸ್​ ದೂರು

ರಾಜ್ಯದ ನಮ್ಮ ಪಕ್ಷದ ನಾಯಕರು ರೂ.1 ಸಾವಿರ ಕೋಟಿಯನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ. ಆ ಹಣ ಬಳಸಿ ರಾಜ್ಯ ಸರ್ಕಾರವನ್ನು ಪತನಗೊಳಿಸಿ, ತಾವು ಮುಖ್ಯಮಂತ್ರಿ ಆಗಲು ಹೊರಟಿದ್ದಾರೆ.

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಿ, ಮುಖ್ಯಮಂತ್ರಿಯಾಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕೆಲವರು ಕಾಯುತ್ತಿದ್ದಾರೆಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಹೈಗ್ರೌಂಡ್ ಪೊಲೀಸರಿಗೆ ಕಾಂಗ್ರೆಸ್ ಸೋಮವಾರ ದೂರು ದಾಖಲಿಸಿದೆ.

1,000 ಕೋಟಿ ರೂ. ಹಣದ ಮೂಲ ಯಾವುದು? ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಪಿಎಂಎಲ್‌ಎ (PMLA) ಅಡಿ ಕೇಸ್ ಕೂಡ ಬರುತ್ತದೆ. ವಿಚಾರಣೆಗೊಳಪಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸೆ.29ರಂದು ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್‌ ಅವರು ಈ ಹೇಳಿಕೆ ನೀಡಿದ್ದರು.

ರಾಜ್ಯದ ನಮ್ಮ ಪಕ್ಷದ ನಾಯಕರು ರೂ.1 ಸಾವಿರ ಕೋಟಿಯನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ. ಆ ಹಣ ಬಳಸಿ ರಾಜ್ಯ ಸರ್ಕಾರವನ್ನು ಪತನಗೊಳಿಸಿ, ತಾವು ಮುಖ್ಯಮಂತ್ರಿ ಆಗಲು ಹೊರಟಿದ್ದಾರೆ. ಆ ಹಣವನ್ನು ಬಳಸಿ ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಸಂಚು ರೂಪಿಸಿದ್ದಾರೆ. ಅಲ್ಲದೇ ಡಿಸೆಂಬರ್‌ನಲ್ಲಿ ರಾಜಕೀಯ ಕ್ರಾಂತಿ ಆಗಲಿದೆ ಎಂದೂ ಹೇಳಿಕೆ ಕೊಟ್ಟಿದ್ದಾರೆ. ಹಣ ಸಂಗ್ರಹಿಸಿರುವ ನಾಯಕರ ಮನೆಯಲ್ಲಿ ನೋಟು ಎಣಿಕೆ ಯಂತ್ರವೂ ಪತ್ತೆಯಾಗಿತ್ತು ಹೇಳಿದ್ದರು.

ದೂರು ಸ್ವೀಕರಿಸಲಾಗಿದ್ದು, ಪರಿಶೀಲನೆಯ ನಂತರ ಎಫ್‌ಐಆರ್ ದಾಖಲಿಸಲಾಗುಪವುದು ಎಂದು ಪೊಲೀಸರು ತಿಳಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT