ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ online desk
ರಾಜ್ಯ

ಸರ್ಕಾರ ಬೀಳಿಸಲು 1000 ಕೋಟಿ ರೂ ಸಂಗ್ರಹ ಹೇಳಿಕೆ: ಯತ್ನಾಳ್​ ವಿರುದ್ಧ ಕಾಂಗ್ರೆಸ್​ ದೂರು

ರಾಜ್ಯದ ನಮ್ಮ ಪಕ್ಷದ ನಾಯಕರು ರೂ.1 ಸಾವಿರ ಕೋಟಿಯನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ. ಆ ಹಣ ಬಳಸಿ ರಾಜ್ಯ ಸರ್ಕಾರವನ್ನು ಪತನಗೊಳಿಸಿ, ತಾವು ಮುಖ್ಯಮಂತ್ರಿ ಆಗಲು ಹೊರಟಿದ್ದಾರೆ.

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಿ, ಮುಖ್ಯಮಂತ್ರಿಯಾಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕೆಲವರು ಕಾಯುತ್ತಿದ್ದಾರೆಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಹೈಗ್ರೌಂಡ್ ಪೊಲೀಸರಿಗೆ ಕಾಂಗ್ರೆಸ್ ಸೋಮವಾರ ದೂರು ದಾಖಲಿಸಿದೆ.

1,000 ಕೋಟಿ ರೂ. ಹಣದ ಮೂಲ ಯಾವುದು? ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಪಿಎಂಎಲ್‌ಎ (PMLA) ಅಡಿ ಕೇಸ್ ಕೂಡ ಬರುತ್ತದೆ. ವಿಚಾರಣೆಗೊಳಪಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸೆ.29ರಂದು ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್‌ ಅವರು ಈ ಹೇಳಿಕೆ ನೀಡಿದ್ದರು.

ರಾಜ್ಯದ ನಮ್ಮ ಪಕ್ಷದ ನಾಯಕರು ರೂ.1 ಸಾವಿರ ಕೋಟಿಯನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ. ಆ ಹಣ ಬಳಸಿ ರಾಜ್ಯ ಸರ್ಕಾರವನ್ನು ಪತನಗೊಳಿಸಿ, ತಾವು ಮುಖ್ಯಮಂತ್ರಿ ಆಗಲು ಹೊರಟಿದ್ದಾರೆ. ಆ ಹಣವನ್ನು ಬಳಸಿ ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಸಂಚು ರೂಪಿಸಿದ್ದಾರೆ. ಅಲ್ಲದೇ ಡಿಸೆಂಬರ್‌ನಲ್ಲಿ ರಾಜಕೀಯ ಕ್ರಾಂತಿ ಆಗಲಿದೆ ಎಂದೂ ಹೇಳಿಕೆ ಕೊಟ್ಟಿದ್ದಾರೆ. ಹಣ ಸಂಗ್ರಹಿಸಿರುವ ನಾಯಕರ ಮನೆಯಲ್ಲಿ ನೋಟು ಎಣಿಕೆ ಯಂತ್ರವೂ ಪತ್ತೆಯಾಗಿತ್ತು ಹೇಳಿದ್ದರು.

ದೂರು ಸ್ವೀಕರಿಸಲಾಗಿದ್ದು, ಪರಿಶೀಲನೆಯ ನಂತರ ಎಫ್‌ಐಆರ್ ದಾಖಲಿಸಲಾಗುಪವುದು ಎಂದು ಪೊಲೀಸರು ತಿಳಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT