ಸಂಗ್ರಹ ಚಿತ್ರ 
ರಾಜ್ಯ

ನಿರ್ಜನ ಪ್ರದೇಶದಲ್ಲಿ ಅಳುವ ಶಬ್ಧ ಕೇಳಿ ಅದರತ್ತ ತೆರಳಿದ ಜನರಿಗೆ ಕಾದಿತ್ತು ಶಾಕ್​!

ಶಬ್ಧವನ್ನು ಹುಡುಕಿ ಬಂದ ಜನರಿಗೆ ಕಣ್ಣಿಗೆ ಕಂಡಿದ್ದು ಗುಂಡಿಯೊಂದರಲ್ಲಿ ಜೀವಂತವಾಗಿ ಅರ್ಧ ಸಮಾಧಿ ಮಾಡಿದ್ದ ನವಜಾತ ಶಿಶು. ಅದನ್ನು ನೋಡಿದ ಜನರ ಎದೆ ಒಮ್ಮೆ ಝಲ್​ ಎಂದಿದೆ.

ಬೆಂಗಳೂರು: ನಿರ್ಜನ ಪ್ರದೇಶವೊಂದರಲ್ಲಿ ಮಗುವಿನ ಅಳುವ ಶಬ್ಧವನ್ನು ಕೇಳಿಸಿಕೊಂಡು ಜನರು ಶಬ್ಧದ ದಿಕ್ಕಿನೆಡೆಗೆ ನಡೆದಾಗ ಅಕ್ಷರಶಃ ಆಘಾತ ಎದುರಾಗಿತ್ತು.

ಶಬ್ಧವನ್ನು ಹುಡುಕಿ ಬಂದ ಜನರಿಗೆ ಕಣ್ಣಿಗೆ ಕಂಡಿದ್ದು ಗುಂಡಿಯೊಂದರಲ್ಲಿ ಜೀವಂತವಾಗಿ ಅರ್ಧ ಸಮಾಧಿ ಮಾಡಿದ್ದ ನವಜಾತ ಶಿಶು. ಅದನ್ನು ನೋಡಿದ ಜನರ ಎದೆ ಒಮ್ಮೆ ಝಲ್​ ಎಂದಿದೆ. ಕೂಡಲೇ ಮಗುವನ್ನು ರಕ್ಷಣೆ ಮಾಡಿ, ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದಾರೆ.

ಈ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕತ್ರಿಗುಪ್ಪೆ ದಿನ್ನೆ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಕಡಿಮೆ ಜನ ಇರುವಾಗ ಆರೋಪಿಗಳು ಮಗುವನ್ನು ಕತ್ತಲಲ್ಲಿ ಹೂತು ಹಾಕಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಇದೀಗ ಮಗುವನ್ನು ಚಿಕಿತ್ಸೆಗಾಗಿ ದೊಮ್ಮಸಂದ್ರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಮಯಕ್ಕೆ ಸರಿಯಾಗಿ ಮಗುವನ್ನು ರಕ್ಷಿಸಲಾಗಿದೆ. ಮಗುವಿನ ದೇಹದಲ್ಲಿ ಸಣ್ಣಪುಟ್ಟ ಗಾಯಗಳು ಕಂಡು ಬಂದಿದ್ದು, ಚೇತರಿಸಿಕೊಳ್ಳುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ನಡುವೆ ಮಗುವನ್ನು ವಶಕ್ಕೆ ತೆಗೆದುಕೊಳ್ಳುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಪೊಲೀಸರು ಸೂಚನೆ ನೀಡಿದ್ದಾರೆ.

ಸೂಚನೆ ಬೆನ್ನಲ್ಲೇ ಮಕ್ಕಳ ರಕ್ಷಣಾ ಘಟಕದ ಆಶಾ ಮತ್ತು ಅವರ ತಂಡವು ಆಸ್ಪತ್ರೆಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಮಗು ಪ್ರಾಣಾಪಾಯದಿಂದ ಪಾರಾಗಿದೆ. ಆರೋಪಿಗಳ ಸುಳಿವಿಗಾಗಿ ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ. ಆರೋಪಿಗಳು ಸ್ಥಳೀಯರಲ್ಲ ಎಂದು ತೋರುತ್ತದೆ, ಸಿಕ್ಕಿಬೀಳುವ ಆತಂಕದಲ್ಲಿ ಮಗುನನ್ನು ಅವಸರದಲ್ಲಿ ಹೂತುಹಾಕಿದ್ದಾರೆಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಪ್ರಕರಣ ಸಂಬಂದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT