ಬೆಸ್ಕಾಂ ಸಾಂದರ್ಭಿಕ ಚಿತ್ರ 
ರಾಜ್ಯ

ಐ.ಟಿ ವ್ಯವಸ್ಥೆ ಉನ್ನತೀಕರಣ: ಅಕ್ಟೋಬರ್ 4 ರಿಂದ 7ರವರೆಗೆ ಬೆಸ್ಕಾಂ ಆನ್ ಲೈನ್ ಸೇವೆ ಅಲಭ್ಯ

ಐಪಿಡಿಎಸ್ ಐಟಿ ಹಂತ-2 ಯೋಜನೆಯ ಭಾಗವಾಗಿ ಬೆಸ್ಕಾಂ ತನ್ನ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣ ಕೈಗೊಳ್ಳಲಾಗುತ್ತಿದೆ. ಮಾರ್ಚ್ 20, 2024 ರಂದು ಮೊದಲ ಹಂತದ ಉನ್ನತೀಕರಣ ಮುಕ್ತಾಯಗೊಂಡಿತ್ತು ಎಂದು ಬೆಸ್ಕಾಂ ಅಧಿಕೃತ ಹೇಳಿಕೆಯಲ್ಲಿ ಮಾಹಿತಿ ನೀಡಿದೆ.

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಿಸುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್4 ರಿಂದ 7ರವರೆಗೆ ತನ್ನ ಆನ್ ಲೈನ್ ಸೇವೆಗಳು ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ ಎಂದು ಇಂಧನ ಇಲಾಖೆ ಬುಧವಾರ ತಿಳಿಸಿದೆ.

ಐಪಿಡಿಎಸ್ ಐಟಿ ಹಂತ-2 ಯೋಜನೆಯ ಭಾಗವಾಗಿ ಬೆಸ್ಕಾಂ ತನ್ನ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣ ಕೈಗೊಳ್ಳಲಾಗುತ್ತಿದೆ. ಮಾರ್ಚ್ 20, 2024 ರಂದು ಮೊದಲ ಹಂತದ ಉನ್ನತೀಕರಣ ಮುಕ್ತಾಯಗೊಂಡಿತ್ತು ಎಂದು ಬೆಸ್ಕಾಂ ಅಧಿಕೃತ ಹೇಳಿಕೆಯಲ್ಲಿ ಮಾಹಿತಿ ನೀಡಿದೆ.

30 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಪಟ್ಟಣಗಳನ್ನು ಒಳಗೊಂಡಿರುವ ಕರ್ನಾಟಕದ ಎಲ್ಲ ಎಸ್ಕಾಂಗಳಿಗೆ ಐಟಿ ಯೋಜನೆಯ ಅನುಷ್ಠಾನಕ್ಕೆ ಬೆಸ್ಕಾಂ ನೋಡಲ್ ಏಜೆನ್ಸಿಯಾಗಿದೆ. ಹೊಸ ಆ್ಯಪ್ ಗಳು ದಕ್ಷತೆಯನ್ನು ಹೆಚ್ಚಿಸುತ್ತವೆ ಮತ್ತು ಕಾರ್ಯಾಚರಣೆಯ ನಂತರ ಬಳಕೆದಾರರ ಅನುಭವವನ್ನು ಸುಧಾರಿಸುತ್ತದೆ ಎಂದು ಭರವಸೆ ನೀಡುತ್ತವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬಿಳಗಿ ಹೇಳಿದ್ದಾರೆ.

ಆನ್ ಲೈನ್ ಸೇವೆ ಅಲಭ್ಯತೆಯ ಸಮಯದಲ್ಲಿ ಹೊಸ ಸಂಪರ್ಕಗಳ ಪ್ರಕ್ರಿಯೆ, ಹೆಸರು ಮತ್ತು ಸುಂಕ ಬದಲಾವಣೆಗಳು, ಹೆಸರು ವರ್ಗಾವಣೆ ಮತ್ತು ತಾತ್ಕಾಲಿಕ ಸಂಪರ್ಕಗಳಂತಹ ಕಾರ್ಯಾಚರಣೆಗಳಿಗೆ 'ಆರ್ ಎಪಿಡಿಆರ್ ಪಿ ಅಪ್ಲಿಕೇಶನ್ ಲಭ್ಯವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಆನ್ ಲೈನ್ ಸೇವೆ ಇರದ ನಗರ, ಪಟ್ಟಣಗಳು: ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲ್, ಮುಳಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್. ಹಿರಿಯೂರು, ತಿಪಟೂರು ಮತ್ತು ಗೌರಿಬಿದನೂರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT