ನಾಡಹಬ್ಬ ದಸರಾ 2024ಕ್ಕೆ ಚಾಲನೆ  
ರಾಜ್ಯ

ನಾಡಹಬ್ಬ ದಸರಾ 2024: ಮೈಸೂರಿನಲ್ಲಿ ಸಾಹಿತಿ ಹಂಪ ನಾಗರಾಜಯ್ಯ ಅದ್ದೂರಿ ಚಾಲನೆ

ಇಂದು ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ನೀಡಿದರು.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ನಾಡಹಬ್ಬ ದಸರಾಕ್ಕೆ ಅದ್ದೂರಿಯಾಗಿ ಇಂದು ಗುರುವಾರ ಬೆಳಗ್ಗೆ ಚಾಲನೆ ಸಿಕ್ಕಿದೆ.(Mysore Dasara 2024 Inauguration) ಇಂದು ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ನೀಡಿದರು. ಚಾಮುಂಡಿಬೆಟ್ಟದಲ್ಲಿ ದೇವಿ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮವನ್ನೂ ಉದ್ಘಾಟಿಸಿದರು.

ಇದಕ್ಕೂ ಮುನ್ನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಾಹಿತಿ ಹಂಪ ನಾಗರಾಜಯ್ಯ ಸೇರಿ ಹಲವರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ದಸರಾ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಮಹದೇವಪ್ಪ ಗಣ್ಯರು ಭಾಗಿಯಾಗಿದ್ದಾರೆ. ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಾರೆ. ಸಮಾರಂಭಕ್ಕೆ ಜಿಲ್ಲಾಡಳಿತದಿಂದ ವಾಟರ್ ಪ್ರೂಫ್ ಪೆಂಡಾಲ್ ನಿರ್ಮಾಣ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ