ಚಾಮುಂಡಿ ಬೆಟ್ಟದಲ್ಲಿ ಡಿ.ಕೆ ಶಿವಕುಮಾರ್ 
ರಾಜ್ಯ

ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ; ನವ ದುರ್ಗೆಯರ ಆಶೀರ್ವಾದ 9 ವರ್ಷಗಳ ಕಾಲ ಸರ್ಕಾರದ ಮೇಲಿರಲಿದೆ: ಡಿಕೆಶಿ

ಕಳೆದ ವರ್ಷ ದಸರಾ ಉದ್ಘಾಟನೆ ವೇಳೆ ಮಳೆ ಚೆನ್ನಾಗಿ ಬೀಳಲಿ ಎಂದು ಚಾಮುಂಡೇಶ್ವರಿ ಬಳಿ ಬೇಡಿಕೊಂಡಿದ್ದೆವು. ಪ್ರಯತ್ನ ಮಾಡಿ ಸೋಲಬಹುದು, ಆದರೆ ಪ್ರಾರ್ಥನೆ ಮಾಡಿ ಸೋಲಲು ಸಾಧ್ಯವಿಲ್ಲ‌.

ಮೈಸೂರು: ಸಂಸಾರವನ್ನು ಕಾಪಾಡುವವಳು ಹೆಣ್ಣು. ಈ ರಾಜ್ಯವನ್ನು ಕಾಪಾಡುತ್ತಿರುವುದು ಹೆಣ್ಣು ದೇವತೆಗಳು. ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುರುವಾರ ನಡೆದ ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು "ಕಳೆದ ವರ್ಷ ದಸರಾ ಉದ್ಘಾಟನೆ ವೇಳೆ ಮಳೆ ಚೆನ್ನಾಗಿ ಬೀಳಲಿ ಎಂದು ಚಾಮುಂಡೇಶ್ವರಿ ಬಳಿ ಬೇಡಿಕೊಂಡಿದ್ದೆವು. ಪ್ರಯತ್ನ ಮಾಡಿ ಸೋಲಬಹುದು, ಆದರೆ ಪ್ರಾರ್ಥನೆ ಮಾಡಿ ಸೋಲಲು ಸಾಧ್ಯವಿಲ್ಲ‌. ಅದರಂತೆ ಉತ್ತಮ ಮಳೆ ಬಂದು ನಾನು ಮತ್ತು ಮುಖ್ಯಮಂತ್ರಿ ಇಬ್ಬರೂ ರಾಜ್ಯದ ನಾಲ್ಕು ಅಣೆಕಟ್ಟುಗಳಿಗೆ ಬಾಗಿನ ಅರ್ಪಿಸಿದ್ದೇವೆ" ಎಂದರು.

ದುಃಖದಿಂದ ನಮ್ಮನ್ನು ದೂರ ಮಾಡುವವಳು ದುರ್ಗಾ ದೇವಿ. ಚಾಮುಂಡೇಶ್ವರಿಯ ಆಶೀರ್ವಾದದಿಂದ ತಾಯಂದಿರು, ರೈತರು ಮತ್ತು ರಾಜ್ಯದ ಜನ ಸಂತೋಷವಾಗಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಬಂದು ಕಳೆದ ವರ್ಷ ದೇವಿಗೆ ಗೃಹಲಕ್ಷ್ಮಿ ಹಣದ 2 ಸಾವಿರ ಹಾಗೂ ಒಂದು ವರ್ಷದ ಹಣವನ್ನು ಕಾಣಿಕೆ ಸಲ್ಲಿಸಿದ್ದೆವು." ಎಂದು ಹೇಳಿದರು. ಕಳೆದ ವರ್ಷ ನಾಡಿನ ಸಾಂಸ್ಕೃತಿಕ ಹೆಗ್ಗುರುತು ಹಂಸಲೇಖ ಅವರಿಂದ ಉದ್ಘಾಟನೆ ನೆರವೇರಿಸಲಾಗಿತ್ತು. ಈ ವರ್ಷ ಸಾಹಿತ್ಯ ಲೋಕದ ಪೈಲ್ವಾನ್ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ ನೆರವೇರಿಸಿರುವುದು ಹೆಚ್ಚು ಸಂತಸ ನೀಡಿದೆ" ಎಂದು ಹೇಳಿದರು.

ನವರಾತ್ರಿ ಎಂದರೆ ಒಂಬತ್ತು ದಿನ. ಈ ಒಂಬತ್ತು ದಿನವೂ ದೇವಿಯ ನಾನಾ ಅವತಾರಗಳನ್ನು ಪೂಜೆ ಮಾಡುತ್ತೇವೆ. ನವ ದುರ್ಗೆಯರ ಶಕ್ತಿ ಮುಂದಿನ 9 ವರ್ಷಗಳ ನಮ್ಮ ಸರ್ಕಾರದ ಮೇಲೆ ಇರುತ್ತದೆ ಎಂಬುದು ನನ್ನ ಅಚಲ ನಂಬಿಕೆ" ಎಂದರು.

ಮೈಸೂರಿನಲ್ಲಿ ಚಾಮುಂಡೇಶ್ವರಿ, ಉತ್ತರ ಕರ್ನಾಟಕದಲ್ಲಿ ಬನಶಂಕರಿ, ಕರಾವಳಿಯಲ್ಲಿ ದುರ್ಗಾಪರಮೇಶ್ವರಿ, ಮಲೆನಾಡಿನಲ್ಲಿ ಸಿಗಂದೂರೇಶ್ವರಿ, ಬೆಂಗಳೂರಿನಲ್ಲಿ ಅಣ್ಣಮ್ಮ, ನಮ್ಮ ಊರಿನಲ್ಲಿ ಕೆಂಕೇರಮ್ಮ, ಕಬ್ಬಾಳಮ್ಮ ಹೀಗೆ ರಾಜ್ಯದ ಅಷ್ಟ ದಿಕ್ಕುಗಳಲ್ಲೂ ನೆಲೆಸಿರುವ ತಾಯಂದಿರು ನಮ್ಮನ್ನು ಕಾಪಾಡುತ್ತಿದ್ದಾರೆ ಎಂದು ಹೇಳಿದರು.

ಅಮ್ಮನ ನೆನಪು ಪ್ರೀತಿಯ ಮೂಲ, ಗುರುವಿನ ನೆನೆಪು ಜ್ಞಾನದ ಮೂಲ, ದೇವರ ದಸರಾ ಶಕ್ತಿ ಹಬ್ಬ, ವಿಜಯದ ಹಬ್ಬ, ಕರ್ನಾಟಕದ ಸಂಸ್ಕೃತಿ ಸಾರುವ ಹಬ್ಬ. ಭಕ್ತಿಯ ಮೂಲ ಇವೆಲ್ಲಾ ಮನುಷ್ಯತ್ವಕ್ಕೆ ಮೂಲ. ಮನುಷ್ಯತ್ವ ಮೋಕ್ಷಕ್ಕೆ ಮೂಲ. ದಸರಾ ಶಕ್ತಿ ಹಬ್ಬ, ವಿಜಯದ ಹಬ್ಬ, ಕರ್ನಾಟಕದ ಸಂಸ್ಕೃತಿ ಸಾರುವ ಹಬ್ಬ" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೇರಳ- ಕೇರಳಂ: ಯಾವುದೇ ಪ್ರಯೋಜನವಿಲ್ಲ, ಹೆಸರು ಬದಲಿಸುವ ಬದಲು ಹೆಚ್ಚಿನ ಅನುದಾನ ಘೋಷಿಸಿ; ಅಚ್ಚರಿ ಮೂಡಿಸಿದ ಶಶಿ ತರೂರ್ ವಿರೋಧ!

SCROLL FOR NEXT