ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮಚ್ಚು ಬೀಸಿ ರಂಪಾಟ, ಮೂವರ ಬಂಧನ

ಯುವಕರು ಮಚ್ಚು ಬೀಸುವ ಮತ್ತು ಜನರ ಮೇಲೆ ಹಲ್ಲೆ ಮಾಡುವ ಮೂಲಕ ನಿವಾಸಿಗಳು ಭಯಭೀತರಾಗಿರುವುದನ್ನು ತೋರಿಸುವ ವೀಡಿಯೊ ವೈರಲ್ ಆಗಿದೆ.

ಬೆಂಗಳೂರು: ಖಿನ್ನತೆ ನಿವಾರಕ ಮಾತ್ರೆ ಸೇವಿಸಿ ಮಚ್ಚು ಬೀಸಿ ರಂಪಾಟ ಮಾಡಿದ್ದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಯುವಕರು ಮಚ್ಚು ಬೀಸುವ ಮತ್ತು ಜನರ ಮೇಲೆ ಹಲ್ಲೆ ಮಾಡುವ ಮೂಲಕ ನಿವಾಸಿಗಳು ಭಯಭೀತರಾಗಿರುವುದನ್ನು ತೋರಿಸುವ ವೀಡಿಯೊ ವೈರಲ್ ಆಗಿದೆ.

ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಿಸ್ಕ್ರಿಪ್ಷನ್ ಇಲ್ಲದೆ ಔಷಧ ಪೂರೈಸಿದ್ದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಔಷಧಾಲಯವೊಂದಕ್ಕೆ ಸೀಲ್ ಮಾಡಲಾಗಿದೆ. ಕಳೆದ ವಾರ ಈ ಘಟನೆ ನಡೆದಿದೆ. ಆರೋಪಿಗಳಾದ ಸೈಯದ್, ಉಸ್ಮಾನ್ ಮತ್ತು ಸಲ್ಮಾನ್ ಅವರನ್ನು ಕರೆತಂದು ಅವರ ಫೋನ್ ಪರಿಶೀಲಿಸಿದಾಗ ಅದರಲ್ಲಿ ಒಂದು ರೀಲ್ಸ್ ಪತ್ತೆಯಾಗಿದೆ.

ಆ ರೀಲ್ಸ್ ನಲ್ಲಿ ಅವರು ಬಿಳಿ ಮಾತ್ರೆ ತೆಗೆದುಕೊಳ್ಳುತ್ತಿರುವುದನ್ನು ಗಮನಿಸಿರುವುದಾಗಿ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ಡಿ ದೇವರಾಜ್ ಪಿಟಿಐಗೆ ತಿಳಿಸಿದ್ದಾರೆ. ಆರೋಪಿ ವಿಚಾರಣೆ ವೇಳೆ ಫಾರ್ಮಸಿಸ್ಟ್ ಔಷಧ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದ್ರೂ 6ನೇ ಸುತ್ತಿನ ಮಾತುಕತೆ ವಿಫಲ, ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಹೃದಯ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಆ.13ರಿಂದ ವಿಧಾನಮಂಡಲ ಅಧಿವೇಶನ – ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ ಜಯಚಂದ್ರ

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!