ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಬೆಂಗಳೂರಿನಲ್ಲಿ ವನ್ಯಜೀವಿ ಸಪ್ತಾಹವನ್ನು ಉದ್ಘಾಟಿಸಿದರು. ನಟ ರಿಷಬ್ ಶೆಟ್ಟಿ ಇದ್ದಾರೆ.  
ರಾಜ್ಯ

ಇಂದಿನಿಂದ ರಾಜ್ಯದಲ್ಲಿ ಟ್ರೆಕ್ಕಿಂಗ್ ಗೆ ಮತ್ತೆ ಅವಕಾಶ: ಆನ್ ಲೈನ್ ನಲ್ಲಿ ಬುಕ್ಕಿಂಗ್ ಕಡ್ಡಾಯ

ಜನದಟ್ಟಣೆ ಮತ್ತು ಟ್ರೆಕ್ಕಿಂಗ್ ಮಾರ್ಗಗಳಲ್ಲಿ ಕಸ ಎಸೆಯುವ, ಜಾಗಗಳನ್ನು ಹಾಳು ಮಾಡುತ್ತಿರುವ ಬಗ್ಗೆ ದೂರುಗಳು ಸಾಕಷ್ಟು ಬಂದ ಹಿನ್ನೆಲೆಯಲ್ಲಿ ಕೆಲವು ತಿಂಗಳ ಹಿಂದೆ ಸ್ಥಗಿತಗೊಳಿಸಲಾಗಿತ್ತು.

ಬೆಂಗಳೂರು: ಕುಮಾರಪರ್ವತ ಸೇರಿದಂತೆ ರಾಜ್ಯದ ಕೆಲವು ಅರಣ್ಯ ಪ್ರದೇಶಗಳಲ್ಲಿ ಇಂದು ಗುರುವಾರದಿಂದ ಚಾರಣಕ್ಕೆ ಅನುಮತಿ ನೀಡಲಾಗುವುದು ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಬಿ ಖಂಡ್ರೆ ಹೇಳಿದ್ದಾರೆ.

ಜನದಟ್ಟಣೆ ಮತ್ತು ಟ್ರೆಕ್ಕಿಂಗ್ ಮಾರ್ಗಗಳಲ್ಲಿ ಕಸ ಎಸೆಯುವ, ಜಾಗಗಳನ್ನು ಹಾಳು ಮಾಡುತ್ತಿರುವ ಬಗ್ಗೆ ದೂರುಗಳು ಸಾಕಷ್ಟು ಬಂದ ಹಿನ್ನೆಲೆಯಲ್ಲಿ ಕೆಲವು ತಿಂಗಳ ಹಿಂದೆ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಟ್ರೆಕ್ಕಿಂಗ್ ಪುನಾರಂಭ ಮಾಡಿದ್ದು, ಚಾರಣಿಗರು ಈಗ ಅರಣ್ಯ ಇಲಾಖೆಯ ವೆಬ್‌ಸೈಟ್ ಮೂಲಕ ಟಿಕೆಟ್ ಕಾಯ್ದಿರಿಸಬೇಕಾಗುತ್ತದೆ.

70ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಕಬ್ಬನ್ ಪಾರ್ಕ್ ನಿಂದ ಲಾಲ್ ಬಾಗ್ ವರೆಗೆ ನಡೆದ ವಾಕಥಾನ್ ಉದ್ಘಾಟಿಸಿ ಸಚಿವರು ಮಾತನಾಡಿದರು. ನಟ ರಿಷಬ್ ಶೆಟ್ಟಿ, ಅರಣ್ಯಾಧಿಕಾರಿಗಳು, ಸಂರಕ್ಷಣಾ ತಜ್ಞರು, ನಿಸರ್ಗ ಪ್ರೇಮಿಗಳು ವಾಕಥಾನ್‌ನಲ್ಲಿ ಭಾಗವಹಿಸಿದ್ದರು.

ಅರಣ್ಯ ಇಲಾಖೆ ಮತ್ತು ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಗೆ ಚಾರಣ ಮಾರ್ಗಗಳನ್ನು ಒಯ್ಯುವ ಸಾಮರ್ಥ್ಯದ ಅಧ್ಯಯನವನ್ನು ಕೈಗೊಳ್ಳಲು ಸೂಚಿಸಲಾಗಿದೆ. ಏಕ ಗವಾಕ್ಷಿ ಪೋರ್ಟಲ್ ಮೂಲಕ ಪ್ರವಾಸೋದ್ಯಮವನ್ನು ನಿಯಂತ್ರಿಸಲು ಸಹ ಘೋಷಿಸಲಾಯಿತು.

ಇನ್ನು ಮುಂದೆ, ಟ್ರೆಕ್ಕಿಂಗ್, ಸಫಾರಿ, ಅರಣ್ಯ ಅತಿಥಿಗೃಹಗಳು ಮತ್ತು ಬೋಟಿಂಗ್‌ಗೆ ಬುಕಿಂಗ್‌ಗಳನ್ನು ಇಲಾಖೆಯ ವೆಬ್‌ಸೈಟ್ ಮೂಲಕ ಮಾಡಬೇಕಾಗಿದೆ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು TNIE ಗೆ ತಿಳಿಸಿದ್ದಾರೆ.

ಮಂಡಳಿಯ ವೆಬ್‌ಸೈಟ್ ಮೂಲಕ ಮಾಡಿದ ಬುಕ್ಕಿಂಗ್‌ಗಳಿಗೆ ಸಂಬಂಧಿಸಿದ ಹಲವಾರು ದೂರುಗಳನ್ನು ಗಮನದಲ್ಲಿಟ್ಟುಕೊಂಡು, ಅವುಗಳನ್ನು ಇಲಾಖೆಯ ಪೋರ್ಟಲ್ ಗೆ ಅಳವಡಿಸಲಾಗುವುದು. ಚಾರಣಿಗರು ಪ್ರತಿ ಬುಕಿಂಗ್‌ಗೆ 5,000 ರೂಪಾಯಿವರೆಗೆ ಪಾವತಿಸಬೇಕು. ಪ್ರವಾಸ ನಿರ್ವಾಹಕರು ಕೇವಲ 700 ರೂಪಾಯಿ ಟಿಕೆಟ್ ಇಲಾಖೆಗೆ ಪಾವತಿಸಿದ ಉದಾಹರಣೆಗಳಿವೆ. ಅಲ್ಲದೆ, ಯಾವುದೇ ನಿಯಮಾವಳಿ ಇಲ್ಲದೆ ಬುಕ್ಕಿಂಗ್‌ಗೆ ಅವಕಾಶ ನೀಡಿ ಕೆಲವೆಡೆ ಜನದಟ್ಟಣೆಗೆ ಕಾರಣವಾದ ಉದಾಹರಣೆಗಳಿವೆ.

ಈಗ, ಬುಕಿಂಗ್ ಮಾಡುವಾಗ, ಐಡಿ ಪುರಾವೆ ಮತ್ತು ಛಾಯಾಚಿತ್ರಗಳು ಸೇರಿದಂತೆ ಚಾರಣಿಗರ ವಿವರಗಳನ್ನು ಅಪ್‌ಲೋಡ್ ಮಾಡಬೇಕು. ಚಾರಣಿಗರು ಅರಣ್ಯ ಪ್ರವೇಶಿಸುವ ಮುನ್ನ ತಮ್ಮ ಗುರುತಿನ ಚೀಟಿಯನ್ನು ಅರಣ್ಯ ಅಧಿಕಾರಿಗಳಿಗೆ ತೋರಿಸಬೇಕು. ಕ್ರಮೇಣ, ಹೆಚ್ಚಿನ ಬುಕಿಂಗ್ ಸೇವೆಗಳನ್ನು ಆರಂಭಿಸಲಾಗುವುದು. ಜನಸಂದಣಿಯನ್ನು ನಿಯಂತ್ರಿಸಲು ಟಿಕೆಟ್ ದರವನ್ನು ಕೂಡ ಸುವ್ಯವಸ್ಥಿತಗೊಳಿಸಲಾಗುವುದು ಎಂದು ಹೇಳಿದರು.

ಸುಮಾರು 10,000 ಎಕರೆ ಒತ್ತುವರಿ ಅರಣ್ಯ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಶೇಕಡಾ 33 ರಷ್ಟು ಭೂಮಿ ಹಸಿರು ಹೊದಿಕೆ ಹೊಂದಿರಬೇಕು ಎಂಬ ನಿಯಮವನ್ನು ಪೂರೈಸಲು ರಾಜ್ಯದ ಅರಣ್ಯ ಪ್ರದೇಶವನ್ನು ಹೆಚ್ಚಿಸಬೇಕು. ಆದರೆ ಕರ್ನಾಟಕದಲ್ಲಿ ಶೇ.22ರಷ್ಟು ಮಾತ್ರ ಇದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT