ಮೈಸೂರು ದಸರಾದ ಅಂಗವಾಗಿ ಆಯೋಜಿಸಿದ್ದ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡುತ್ತಿರುವ ಸಿಎಂ ಸಿದ್ದರಾಮಯ್ಯ. 
ರಾಜ್ಯ

3 ವರ್ಷಗಳಲ್ಲಿ ಫಿಲಂ ಸಿಟಿ ಯೋಜನೆ ಪೂರ್ಣ: ಸಿಎಂ ಸಿದ್ದರಾಮಯ್ಯ

ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ.

ಮೈಸೂರು: ನಂಜನಗೂಡು ತಾಲ್ಲೂಕಿನ ಇಮ್ಮಾವು ಬಳಿಯ 160 ಎಕರೆ ಪ್ರದೇಶದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಫಿಲಂ ಸಿಟಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಘೋಷಿಸಿದರು.

ದಸರಾ ಮಹೋತ್ಸವದ ಕೆಎಸ್ಒಯು ಘಟಿಕೋತ್ಸವ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ. ಮಾದರಿ ಸಿನಿಮಾ ನಗರಿಯನ್ನು ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶವಾಗಿದೆ ಎಂದು ಹೇಳಿದರು.

ಚಿತ್ರರಂಗದ ಬೆಳವಣಿಗೆ ಸರ್ಕಾರ ಎಲ್ಲಾ ರೀತಿಯ ಬೆಂಬಲವನ್ನು ನೀಡುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು, ಚಿತ್ರರಂಗ ಬೆಳೆಯಬೇಕು. ಜನರು ಸಿನಿಮಾಗಳನ್ನು ಚಿತ್ರಮಂದಿರಗಳಿಗೆ ಹೋಗಿಯೇ ವೀಕ್ಷಿಸಬೇಕೆಂದು ತಿಳಿಸಿದರು.

ದಸರಾ ಚಲನಚಿತ್ರೋತ್ಸವ ಅ.4ರಿಂದ 10ರವರೆಗೆ ನಡೆಯಲಿದ್ದು, ದೇಶ ವಿದೇಶಗಳ ಪ್ರಶಸ್ತಿ ಪುರಸ್ಕೃತ ಚಲನಚಿತ್ರಗಳು ಪ್ರದರ್ಶನವಾಗಲಿದೆ. ಚಲನಚಿತ್ರೋತ್ಸವದಲ್ಲಿ ಹಳೆಯ ಹಾಗೂ ಹೊಸ ಸಿನಿಮಾಗಳನ್ನು ವೀಕ್ಷಿಸುವ ಸುವರ್ಣ ಅವಕಾಶವಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಇದೇ ವೇಳೆ ಕನ್ನಡ ಚಿತ್ರರಂಗಕ್ಕೆ ಗಣನೀಯ ಕೊಡುಗೆ ನೀಡಿದ ದಿವಂಗತ ನಟ ಮತ್ತು ನಿರ್ಮಾಪಕ ದ್ವಾರಕೀಶ್ ಅವರಿಗೆ ಈ ವರ್ಷದ ಹಬ್ಬವನ್ನು ಅರ್ಪಿಸಲಾಯಿತು.

ಬಳಿಕ 1983 ರಲ್ಲಿ ದ್ವಾರಕೀಶ್ ಅವರೊಂದಿಗೆ ಹೆಲಿಕಾಪ್ಟರ್‌ನಲ್ಲಿ ಮೈಸೂರಿಗೆ ಪ್ರಯಾಣಿಸಿದ್ದನ್ನು ಸ್ಮರಿಸಿದ ಅವರು, ಅವರೊಂದಿಗಿದ್ದ ಸ್ನೇಹ ಬಾಂಧವ್ಯದ ಬಗ್ಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT