ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ನಿಲ್ಲಿಸಿದ್ದ ಸೈಕಲ್ ಕದಿಯಲು ಯತ್ನಿಸಿ ಸಿಕ್ಕಿಬಿದ್ದ ವ್ಯಕ್ತಿ!

ಸಿಕ್ಕಿಬಿದ್ದ ಕಳ್ಳನನ್ನು ಎಚ್‌ಎಎಲ್ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಕಳೆದ ಒಂದು ವಾರದಲ್ಲಿ ಮೆಟ್ರೋ ನಿಲ್ದಾಣಗಳಲ್ಲಿರುವ ವಸ್ತುಗಳನ್ನು ಕದಿಯಲು ಯತ್ನಿಸಿದ ನಾಲ್ಕನೇ ಪ್ರಕರಣ ಇದಾಗಿದೆ.

ಬೆಂಗಳೂರು: ಮೆಟ್ರೊದ ನೇರಳೆ ಮಾರ್ಗದ ಕುಂದಲಹಳ್ಳಿ ನಿಲ್ದಾಣದಲ್ಲಿ ಗುರುವಾರ ಬೆಳಗ್ಗೆ 6.30ಕ್ಕೆ ಪಾರ್ಕಿಂಗ್ ಪ್ರದೇಶದಲ್ಲಿದ ಸೈಕಲ್ ಬೀಗ ಮುರಿದು ಕಳ್ಳತನ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಹಿಡಿದಿದ್ದಾರೆ.

ಸಿಕ್ಕಿಬಿದ್ದ ಕಳ್ಳನನ್ನು ಎಚ್‌ಎಎಲ್ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಕಳೆದ ಒಂದು ವಾರದಲ್ಲಿ ಮೆಟ್ರೋ ನಿಲ್ದಾಣಗಳಲ್ಲಿರುವ ವಸ್ತುಗಳನ್ನು ಕದಿಯಲು ಯತ್ನಿಸಿದ ನಾಲ್ಕನೇ ಪ್ರಕರಣ ಇದಾಗಿದೆ ಎಂದು ಮೂಲಗಳು ತಿಳಿಸಿವೆ.

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸೆಪ್ಟಂಬರ್ 27 ರಂದು ಇಬ್ಬರು ಕಳ್ಳರು ಮೆಟ್ರೋ ಭದ್ರತಾ ಸಿಬ್ಬಂದಿಗೆ ಕೈಗೆ ಸಿಕ್ಕಿಬಿದ್ದಿದ್ದು, ಅವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ಇವರಿಬ್ಬರು ಬಸ್ ನಿಲ್ದಾಣದ ಕಡೆಯಿಂದ ಬೇಲಿ ಏರಿ ಮೆಟ್ರೋ ನಿಲ್ದಾಣ ಪ್ರವೇಶಿಸಿದ್ದಾರೆ. ಕೆಎಸ್‌ಆರ್‌ ರಸ್ತೆ ನಿಲ್ದಾಣದ ಬಳಿ ವಾಸವಿದ್ದ ಮೊದಲ ಕಳ್ಳ ಎಸ್‌ ಚಂದನ್‌ ಡೀಸೆಲ್‌ ಜನರೇಟರ್‌ ಕೊಠಡಿಯಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ಬೆಳಗ್ಗೆ 6.30ರ ಸುಮಾರಿಗೆ ಸಿಕ್ಕಿಬಿದ್ದಿದ್ದು, ವಿಚಾರಣೆ ವೇಳೆ ಈ ಹಿಂದೆ ಸಣ್ಣ ಏಣಿ ಹಾಗೂ ಮೂರು ಪೈಂಟ್‌ ಟಿನ್‌ಗಳನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಅದೇ ದಿನ ಬೆಳಗ್ಗೆ 7.45 ರ ಸುಮಾರಿಗೆ, ಎರಡನೇ ಕಳ್ಳನು ನಿಲ್ದಾಣದ ಹೊರಗೆ ಚೇಂಬರ್ ಪ್ಲೇಟ್ ಅನ್ನು ಕದಿಯಲು ಪ್ರಯತ್ನಿಸುತ್ತಿದ್ದಾಗ ಮಹಿಳಾ ಹೋಮ್ ಗಾರ್ಡ್‌ಗೆ ಸಿಕ್ಕಿಬಿದ್ದಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಎರಡನೇ ಕಳ್ಳ ದೀಪಕ್(24) ಮೈಸೂರಿನ ಆಜಾದ್ ನಗರದ ನಿವಾಸಿ ಎಂದು ಗುರುತಿಸಲಾಗಿದೆ. ಬಿಎಂಆರ್‌ಸಿಎಲ್‌ ಇಬ್ಬರನ್ನು ಉಪ್ಪಾರಪೇಟೆ ಪೊಲೀಸ್‌ ಠಾಣೆಗೆ ಹಸ್ತಾಂತರಿಸಿದ್ದು, ದೂರು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT