ಗದಗ ಜಿಲ್ಲೆಯ ಬಟ್ಟೂರು ಗ್ರಾಮದಲ್ಲಿ ರೇಬಿಸ್ ಕುರಿತು ಜಾಗೃತಿ ಶಿಬಿರ ನಡೆಸುತ್ತಿರುವ ಆರೋಗ್ಯಾಧಿಕಾರಿಗಳು 
ರಾಜ್ಯ

ಗದಗ: ಬೀದಿನಾಯಿಗಳ ಸರಣಿ ಸಾವು; ಮನೆಯಿಂದ ಹೊರಬರಲು ಗ್ರಾಮಸ್ಥರಲ್ಲಿ ಆತಂಕ

ಈ ಗ್ರಾಮಗಳಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಕಳೆದ ಕೆಲ ದಿನಗಳಿಂದ ಮಕ್ಕಳು, ಹಸು, ಕುರಿ, ಮೇಕೆಗಳ ಮೇಲೆ ದಾಳಿ ಮಾಡಿದೆ. ಅಲ್ಲದೆ, ಗ್ರಾಮದಲ್ಲಿ ಹಲವು ನಾಯಿಗಳು ಇದ್ದಕ್ಕಿದ್ದಂತೆ ಸಾವನ್ನಪ್ಪುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

ಗದಗ: ಬೀದಿ ನಾಯಿಗಳ ಸರಣಿ ಸಾವು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು, ಕುಂಡ್ರಹಳ್ಳಿ, ಕುಂಡ್ರಹಳ್ಳಿ ತಾಂಡಾ, ಶೆಟ್ಟಿ ಕೆರೆ ಗ್ರಾಮಗಳ ನಿವಾಸಿಗಳಲ್ಲಿ ಆತಂಕ ಹುಟ್ಟಿಸಿದೆ.

ಈ ಗ್ರಾಮಗಳಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಕಳೆದ ಕೆಲ ದಿನಗಳಿಂದ ಮಕ್ಕಳು, ಹಸು, ಕುರಿ, ಮೇಕೆಗಳ ಮೇಲೆ ದಾಳಿ ಮಾಡಿದೆ. ಅಲ್ಲದೆ, ಗ್ರಾಮದಲ್ಲಿ ಹಲವು ನಾಯಿಗಳು ಇದ್ದಕ್ಕಿದ್ದಂತೆ ಸಾವನ್ನಪ್ಪುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

ಈ ನಡುವೆ ನಾಯಿಗಳು ಹಸುಗಳನ್ನು ಕಚ್ಚಿರಬಹುದು ಎಂಬ ಭಯದಿಂದ ಗ್ರಾಮಸ್ಥರು ಹಾಲು ಕುಡಿಯಲು, ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಬೆಂಗಳೂರಿನ ಸರ್ಕಾರೇತರ ಸಂಸ್ಥೆ (ಎನ್‌ಜಿಒ)ಯೊಂದು ಶುಕ್ರವಾರ ಮತ್ತು ಶನಿವಾರ ನಾಲ್ಕು ಗ್ರಾಮಗಳಿಗೆ ಭೇಟಿ ನೀಡಿ ನಾಯಿಗಳ ಹಿಡಿಯಲು ಮುಂದಾಗಿದೆ ಎಂದು ವರದಿಗಳು ತಿಳಿಸಿವೆ.

ಆರೋಗ್ಯ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಲಸಿಕೆ ಅಭಿಯಾನವನ್ನು ಪ್ರಾರಂಭಿಸಿದ್ದು, ಜನರಲ್ಲಿ ರೇಬಿಸ್ ಕುರಿತು ಜಾಗೃತಿ ಮೂಡಿಸಲು ಆರೋಗ್ಯ ಶಿಬಿರಗಳನ್ನೂ ನಡೆಸುತ್ತಿದ್ದಾರೆ.

ಬಟ್ಟೂರು ಗ್ರಾಮದಲ್ಲಿ ಕಳೆದ 40 ದಿನಗಳಲ್ಲಿ 20 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ. ಕೆಲ ದಿನಗಳ ಹಿಂದೆ ಬೀದಿ ನಾಯಿ ಕಚ್ಚಿ ಹಸುವೊಂದು ಮೃತಪಟ್ಟಿತ್ತು ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಏತನ್ಮಧ್ಯೆ ನಾಯಿಗಳು ಹಸುಗಳು ಮತ್ತು ಮೇಕೆಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸಿದ್ದರಿಂದ ಗ್ರಾಮಸ್ಥರು ಆರೋಗ್ಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ನಾಯಿಗಳಿಗೆ ರೋಗ ತಗುಲಿರುವ ಸಾಧ್ಯತೆಗಳಿವೆ. ಆದರೆ, ಅದು ರೇಬಿಸ್ ಅಲ್ಲ. ಅಧಿಕಾರಿಗಳು ಶೀಘ್ರದಲ್ಲಿ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ನಾಯಿ ದಾಳಿ ಬಳಿಕ ಇತ್ತೀಚೆಗೆ 17 ವರ್ಷ ಬಾಲಕಿಯೊಬ್ಬಳು ಕೂಡ ಸಾವನ್ನಪ್ಪಿದ್ದಳು. ಹೀಗಾಗಿ ಆತಂಕ ಹೆಚ್ಚಾಗಿದೆ. ಮನೆಯ ಸಮೀಪ ನಾಯಿಗಳಿಗೆ ಆಹಾರ ನೀಡುತ್ತಿದ್ದ ಬಾಲಕಿಗೆ ನಾಯಿಗಳು ಕಚ್ಚಿದ್ದವು. ಅಸ್ವಸ್ಥಳಾದ ಆಕೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಇದೀಗ ಆಕೆ ಸಾವನ್ನಪ್ಪಿದ್ದಾಳೆ. ಆಕೆಯ ಸಾವಿಗೆ ಕಾರಣ ತಿಳಿದುಬಂದಿಲ್ಲ. ಆರೋಗ್ಯ ಇಲಾಖೆ ಬಾಲಕಿಯ ಸಾವಿಗೆ ಕಾರಣವನ್ನು ಬಹಿರಂಗಪಡಿಸಬೇಕು, ಇಲ್ಲದಿದ್ದರೆ ಜನರಲ್ಲಿ ಆತಂಕ ಹೆಚ್ಚಾಗುತ್ತದೆ ಎಂದು ತಿಳಿಸಿದ್ದಾರೆ.

ನಾಲ್ಕು ಗ್ರಾಮಗಳ ಜನರಿಗೆ ಲಸಿಕೆ ನೀಡುವ ಕೆಲಸ ಪ್ರಾರಂಭವಾಗಿದೆ ಎಂದು ಗದಗ ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಸ್.ನೀಲಗುಂದ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT