ಜಿಟಿ ದೇವೇಗೌಡ ಮತ್ತು ಸಿದ್ದರಾಮಯ್ಯ 
ರಾಜ್ಯ

'ಕಳ್ಳರೆಲ್ಲ ಒಂದಾಗಿದ್ದಾರೆ': ಸಿದ್ದು ಪರ ಬ್ಯಾಟ್ ಬೀಸಿದ್ದ ಜಿಟಿ ದೇವೇಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ವ್ಯಂಗ್ಯ!

ಜಿಟಿ ದೇವೇಗೌಡ ಕಳೆದ 3 ತಿಂಗಳಿನಿಂದ ಏನು ಮಾಡುತ್ತಿದ್ದರು? ದಸರಾದಂತ ನಾಡಹಬ್ಬದ ಕಾರ್ಯಕ್ರಮದಲ್ಲಿ ಆ ರೀತಿ ಮಾತನಾಡಿದ್ದು ತಪ್ಪು.

ಮೈಸೂರು: ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಸಾಮಾಜಿಕ ಕಾರ್ಯಕರ್ತ ಹಾಗೂ ದೂರುದಾರ ಸ್ನೇಹಮಯಿ ಕೃಷ್ಣ ಕಿಡಿಕಾರಿದ್ದು, 'ಕಳ್ಳರು ಕಳ್ಳರು ಒಂದಾಗಿದ್ದಾರೆ' ಎಂದು ವ್ಯಂಗ್ಯ ಮಾಡಿದ್ದಾರೆ.

ಮುಡಾ ಹಗರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು ಇಂದು ಮೈಸೂರಿನಲ್ಲಿ ಹಗರಣದ ಕೇಂದ್ರ ಬಿಂದುವಾಗಿರುವ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಹಂಚಿಕೆ ಮಾಡಲಾಗಿರುವ 14 ಸೈಟ್ ಗಳ ಪರಿಶೀಲನೆ ನಡೆಸಿದರು. ಈ ವೇಳೆ ದೂರುದಾರ ಸ್ನೇಹಮಯಿ ಕೃಷ್ಣ ಕೂಡ ಅಧಿಕಾರಿಗಳ ಸೂಚನೆಯಂತೆ ವಿವಾದಿತ ಸ್ಥಳಕ್ಕೆ ಆಗಮಿಸಿದ್ದರು.

ಈ ವೇಳೆ ಲೋಕಾಯುಕ್ತ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, 'ಜಿಟಿ ದೇವೇಗೌ ಸಹ 50:50 ಅನುಪಾತದ ಫಲಾನುಭವಿಯಾಗಿದ್ದಾರೆ. ಅವರಿಗೂ ತನಿಖೆಯ ಭಯ ಶುರುವಾಗಿದೆ. ಅದೇ ಕಾರಣಕ್ಕೆ ಭಯದಿಂದ ಹೀಗೆ ಮಾತನಾಡುತ್ತಿದ್ದಾರೆ. ಮತ್ತೊಂದಿಷ್ಟು ಕಳ್ಳರು ಮುಂದಿನ ದಿನಗಳಲ್ಲಿ ಇದೇ ರೀತಿ ಮಾತಾಡುತ್ತಾರೆ ಎಂದು ಹೇಳಿದರು.

ಅಲ್ಲದೆ ಕಳ್ಳರು ತಮ್ಮ ರಕ್ಷಣೆಗಾಗಿ ಒಂದು ಕೂಟವನ್ನು ರಚನೆ ಮಾಡಿಕೊಂಡಿದ್ದಾರೆ. ಜಿಟಿ ದೇವೇಗೌಡ ಕಳೆದ 3 ತಿಂಗಳಿನಿಂದ ಏನು ಮಾಡುತ್ತಿದ್ದರು? ದಸರಾದಂತ ನಾಡಹಬ್ಬದ ಕಾರ್ಯಕ್ರಮದಲ್ಲಿ ಆ ರೀತಿ ಮಾತನಾಡಿದ್ದು ತಪ್ಪು. ಮುಡಾದಲ್ಲಿ ಜಿ.ಟಿ ದೇವೇಗೌಡರ ಅಕ್ರಮ ಇರಬಹುದು. ಆ ಕಾರಣಕ್ಕೆ ಎಲ್ಲರೂ ಒಂದಾಗಿದ್ದಾರೆ. ಆ ಬಗ್ಗೆಯೂ ಮಾಹಿತಿ ನೀಡಿದ್ದೇನೆ ಎಂದಿದ್ದಾರೆ.

ಅಂತೆಯೇ ಕಾಂಗ್ರೆಸ್ ನಾಯಕ ಹೆಚ್.ಸಿ ಮಹದೇವಪ್ಪ ಅವರ ಸಹೋದರನ ಮಗನಿಗೆ ಸೈಟ್ ಕೊಡಲಾಗಿದೆ ಎಂಬ ಮಾಹಿತಿ ಇದೆ. ಮರಿಗೌಡ ಸಹೋದರ ಶಿವಣ್ಣ ಅವರಿಗೆ ಸೇಲ್ ಡೀಡ್ ಮೂಲಕ ಸೈಟ್ ಕೊಡಲಾಗಿದೆ. ಎಲ್ಲದರ ಬಗ್ಗೆಯೂ ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿದ್ದೇನೆ. ನಾನು ಕೇವಲ ಸಿದ್ದರಾಮಯ್ಯ ಅಲ್ಲ. ಇಡೀ ಅಕ್ರಮದ ವಿರುದ್ಧ ಹೋರಾಡುವೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್