ಜಿಟಿ ದೇವೇಗೌಡ ಮತ್ತು ಸಿದ್ದರಾಮಯ್ಯ 
ರಾಜ್ಯ

'ಕಳ್ಳರೆಲ್ಲ ಒಂದಾಗಿದ್ದಾರೆ': ಸಿದ್ದು ಪರ ಬ್ಯಾಟ್ ಬೀಸಿದ್ದ ಜಿಟಿ ದೇವೇಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ವ್ಯಂಗ್ಯ!

ಜಿಟಿ ದೇವೇಗೌಡ ಕಳೆದ 3 ತಿಂಗಳಿನಿಂದ ಏನು ಮಾಡುತ್ತಿದ್ದರು? ದಸರಾದಂತ ನಾಡಹಬ್ಬದ ಕಾರ್ಯಕ್ರಮದಲ್ಲಿ ಆ ರೀತಿ ಮಾತನಾಡಿದ್ದು ತಪ್ಪು.

ಮೈಸೂರು: ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಸಾಮಾಜಿಕ ಕಾರ್ಯಕರ್ತ ಹಾಗೂ ದೂರುದಾರ ಸ್ನೇಹಮಯಿ ಕೃಷ್ಣ ಕಿಡಿಕಾರಿದ್ದು, 'ಕಳ್ಳರು ಕಳ್ಳರು ಒಂದಾಗಿದ್ದಾರೆ' ಎಂದು ವ್ಯಂಗ್ಯ ಮಾಡಿದ್ದಾರೆ.

ಮುಡಾ ಹಗರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು ಇಂದು ಮೈಸೂರಿನಲ್ಲಿ ಹಗರಣದ ಕೇಂದ್ರ ಬಿಂದುವಾಗಿರುವ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಹಂಚಿಕೆ ಮಾಡಲಾಗಿರುವ 14 ಸೈಟ್ ಗಳ ಪರಿಶೀಲನೆ ನಡೆಸಿದರು. ಈ ವೇಳೆ ದೂರುದಾರ ಸ್ನೇಹಮಯಿ ಕೃಷ್ಣ ಕೂಡ ಅಧಿಕಾರಿಗಳ ಸೂಚನೆಯಂತೆ ವಿವಾದಿತ ಸ್ಥಳಕ್ಕೆ ಆಗಮಿಸಿದ್ದರು.

ಈ ವೇಳೆ ಲೋಕಾಯುಕ್ತ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, 'ಜಿಟಿ ದೇವೇಗೌ ಸಹ 50:50 ಅನುಪಾತದ ಫಲಾನುಭವಿಯಾಗಿದ್ದಾರೆ. ಅವರಿಗೂ ತನಿಖೆಯ ಭಯ ಶುರುವಾಗಿದೆ. ಅದೇ ಕಾರಣಕ್ಕೆ ಭಯದಿಂದ ಹೀಗೆ ಮಾತನಾಡುತ್ತಿದ್ದಾರೆ. ಮತ್ತೊಂದಿಷ್ಟು ಕಳ್ಳರು ಮುಂದಿನ ದಿನಗಳಲ್ಲಿ ಇದೇ ರೀತಿ ಮಾತಾಡುತ್ತಾರೆ ಎಂದು ಹೇಳಿದರು.

ಅಲ್ಲದೆ ಕಳ್ಳರು ತಮ್ಮ ರಕ್ಷಣೆಗಾಗಿ ಒಂದು ಕೂಟವನ್ನು ರಚನೆ ಮಾಡಿಕೊಂಡಿದ್ದಾರೆ. ಜಿಟಿ ದೇವೇಗೌಡ ಕಳೆದ 3 ತಿಂಗಳಿನಿಂದ ಏನು ಮಾಡುತ್ತಿದ್ದರು? ದಸರಾದಂತ ನಾಡಹಬ್ಬದ ಕಾರ್ಯಕ್ರಮದಲ್ಲಿ ಆ ರೀತಿ ಮಾತನಾಡಿದ್ದು ತಪ್ಪು. ಮುಡಾದಲ್ಲಿ ಜಿ.ಟಿ ದೇವೇಗೌಡರ ಅಕ್ರಮ ಇರಬಹುದು. ಆ ಕಾರಣಕ್ಕೆ ಎಲ್ಲರೂ ಒಂದಾಗಿದ್ದಾರೆ. ಆ ಬಗ್ಗೆಯೂ ಮಾಹಿತಿ ನೀಡಿದ್ದೇನೆ ಎಂದಿದ್ದಾರೆ.

ಅಂತೆಯೇ ಕಾಂಗ್ರೆಸ್ ನಾಯಕ ಹೆಚ್.ಸಿ ಮಹದೇವಪ್ಪ ಅವರ ಸಹೋದರನ ಮಗನಿಗೆ ಸೈಟ್ ಕೊಡಲಾಗಿದೆ ಎಂಬ ಮಾಹಿತಿ ಇದೆ. ಮರಿಗೌಡ ಸಹೋದರ ಶಿವಣ್ಣ ಅವರಿಗೆ ಸೇಲ್ ಡೀಡ್ ಮೂಲಕ ಸೈಟ್ ಕೊಡಲಾಗಿದೆ. ಎಲ್ಲದರ ಬಗ್ಗೆಯೂ ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿದ್ದೇನೆ. ನಾನು ಕೇವಲ ಸಿದ್ದರಾಮಯ್ಯ ಅಲ್ಲ. ಇಡೀ ಅಕ್ರಮದ ವಿರುದ್ಧ ಹೋರಾಡುವೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT